ಬೆಂಗಳೂರು: ಲಾಲ್ಬಾಗ್ ಉದ್ಯಾನ ದಲ್ಲಿ ಪ್ರತಿವರ್ಷದಂತೆ ಈ ಜನವರಿಯಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಕೊರೊನಾ ಕಾರಣದಿಂದ ರದ್ದುಪಡಿಸಲಾಗಿದೆ.
ಕೊರೊನಾ ಸೋಂಕಿನ ಕಾರಣಕ್ಕೆ ಆಗಸ್ಟ್ನಲ್ಲಿ ನಡೆಯಬೇಕಿದ್ದ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವೂ ರದ್ದಾಗಿತ್ತು.
ಪ್ರದರ್ಶನಕ್ಕೆ ಹೆಚ್ಚು ಜನರು ಸೇರುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಈ ಪ್ರದರ್ಶನವನ್ನೂ ರದ್ದುಗೊಳಿಸಲು ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘ ತೀರ್ಮಾನಿಸಿವೆ.
‘ಜನವರಿಯಲ್ಲಿ ಆಯೋಜಿಸುವ ಪ್ರದರ್ಶನಕ್ಕೆ ಈಗಿನಿಂದಲೇ ತಯಾರಿಗಳು ನಡೆಯಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಯಾವುದೇ ತಯಾರಿ ನಡೆದಿಲ್ಲ’ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ.ಜಗದೀಶ್ ತಿಳಿಸಿದ್ದಾರೆ.