<p><strong>ಬೆಂಗಳೂರು:</strong> ಲಾಲ್ಬಾಗ್ನಲ್ಲಿ ನಡೆಯಲಿರುವ ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನುನಟರಾದ ಡಾ.ರಾಜ್ಕುಮಾರ್ ಹಾಗೂ ಇತ್ತೀಚೆಗೆ ಅಗಲಿದ ಪುನೀತ್ ರಾಜ್ಕುಮಾರ್ ಅವರ ನೆನಪಾರ್ಥ ಆಯೋಜಿಸಲು ತೋಟಗಾರಿಕೆ ಇಲಾಖೆ ಹಾಗೂಮೈಸೂರು ಉದ್ಯಾನ ಕಲಾಸಂಘ ನಿರ್ಧರಿಸಿವೆ.</p>.<p>ಜನವರಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ಇಬ್ಬರೂ ನಟರಿಗೆ ಫುಷ್ಪಗಳ ಮೂಲಕ ಗೌರವ ಸಲ್ಲಿಸಲು ಲಾಲ್ಬಾಗ್ನಲ್ಲಿ ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ.</p>.<p>ಮೂಲಗಳ ಪ್ರಕಾರ ಲಾಲ್ಬಾಗ್ ಉದ್ಯಾನದ ಗಾಜಿನ ಮನೆಯಲ್ಲಿ ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರ ಹೂವಿನ ಪ್ರತಿಕೃತಿಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ವಿಶೇಷವಾದ ತರಹೇವಾರಿ ಅಲಂಕಾರಿಕ ಪುಷ್ಪಗಳನ್ನು ಬಳಕೆ ಮಾಡಲಾಗುವುದು ಎಂದೂ ಹೇಳಲಾಗಿದೆ.</p>.<p>‘ಕನ್ನಡ ಚಿತ್ರರಂಗದ ಮೇರುನಟರಾದ ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರ ಪರಿಕಲ್ಪನೆಯಡಿ ಫಲಪುಷ್ಪ ಪ್ರದರ್ಶನ ಆಯೋಜಿಸಲು ನಿರ್ಧರಿಸಲಾಗಿದೆ. ಪ್ರದರ್ಶನದ ವಿನ್ಯಾಸಗಳು, ದಿನಾಂಕ ನಿಗದಿಯನ್ನು ಶೀಘ್ರದಲ್ಲೇ ತೀರ್ಮಾನಿಸಿ ಅಂತಿಮಗೊಳಿಸಲಾಗುವುದು’ ಎಂದು ತೋಟಗಾರಿಕೆ ಸಚಿವ ಮುನಿರತ್ನ ಅವರು ತಿಳಿಸಿದ್ದಾರೆ.</p>.<p><strong>21ರಂದು ಪುನೀತ್ಗೆ ರಂಗನಮನ</strong><br /><strong>ಬೆಂಗಳೂರು:</strong> ಸಾಹಿತಿ ಮತ್ತು ಕಲಾವಿದರ ವೇದಿಕೆಯು ರಂಗ ವಿಜಯ ಸಂಘಟನೆಯ ಸಹಯೋಗದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರಿಗೆ ರಂಗನಮನ ಸಲ್ಲಿಸಲು ನಿರ್ಧರಿಸಿದೆ. ಇದಕ್ಕಾಗಿ ‘ನಿನ್ನಂಥೋರ್ ಯಾರೂ ಇಲ್ವಲ್ಲೋ ಈ ಲೋಕದಾ ಮ್ಯಾಲೆ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ.</p>.<p>‘ಇದೇ 21ರ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇಂಪು ಸಂಗೀತ ಸಂಸ್ಥೆಯವರು ರಂಗ ಗೀತೆ ಹಾಗೂ ನೆನಪಿನ ಹಾಡುಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ನಟ ರಾಘವೇಂದ್ರ ರಾಜ್ಕುಮಾರ್ ಭಾಗವಹಿಸಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲಾಲ್ಬಾಗ್ನಲ್ಲಿ ನಡೆಯಲಿರುವ ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನುನಟರಾದ ಡಾ.ರಾಜ್ಕುಮಾರ್ ಹಾಗೂ ಇತ್ತೀಚೆಗೆ ಅಗಲಿದ ಪುನೀತ್ ರಾಜ್ಕುಮಾರ್ ಅವರ ನೆನಪಾರ್ಥ ಆಯೋಜಿಸಲು ತೋಟಗಾರಿಕೆ ಇಲಾಖೆ ಹಾಗೂಮೈಸೂರು ಉದ್ಯಾನ ಕಲಾಸಂಘ ನಿರ್ಧರಿಸಿವೆ.</p>.<p>ಜನವರಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ಇಬ್ಬರೂ ನಟರಿಗೆ ಫುಷ್ಪಗಳ ಮೂಲಕ ಗೌರವ ಸಲ್ಲಿಸಲು ಲಾಲ್ಬಾಗ್ನಲ್ಲಿ ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ.</p>.<p>ಮೂಲಗಳ ಪ್ರಕಾರ ಲಾಲ್ಬಾಗ್ ಉದ್ಯಾನದ ಗಾಜಿನ ಮನೆಯಲ್ಲಿ ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರ ಹೂವಿನ ಪ್ರತಿಕೃತಿಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ವಿಶೇಷವಾದ ತರಹೇವಾರಿ ಅಲಂಕಾರಿಕ ಪುಷ್ಪಗಳನ್ನು ಬಳಕೆ ಮಾಡಲಾಗುವುದು ಎಂದೂ ಹೇಳಲಾಗಿದೆ.</p>.<p>‘ಕನ್ನಡ ಚಿತ್ರರಂಗದ ಮೇರುನಟರಾದ ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರ ಪರಿಕಲ್ಪನೆಯಡಿ ಫಲಪುಷ್ಪ ಪ್ರದರ್ಶನ ಆಯೋಜಿಸಲು ನಿರ್ಧರಿಸಲಾಗಿದೆ. ಪ್ರದರ್ಶನದ ವಿನ್ಯಾಸಗಳು, ದಿನಾಂಕ ನಿಗದಿಯನ್ನು ಶೀಘ್ರದಲ್ಲೇ ತೀರ್ಮಾನಿಸಿ ಅಂತಿಮಗೊಳಿಸಲಾಗುವುದು’ ಎಂದು ತೋಟಗಾರಿಕೆ ಸಚಿವ ಮುನಿರತ್ನ ಅವರು ತಿಳಿಸಿದ್ದಾರೆ.</p>.<p><strong>21ರಂದು ಪುನೀತ್ಗೆ ರಂಗನಮನ</strong><br /><strong>ಬೆಂಗಳೂರು:</strong> ಸಾಹಿತಿ ಮತ್ತು ಕಲಾವಿದರ ವೇದಿಕೆಯು ರಂಗ ವಿಜಯ ಸಂಘಟನೆಯ ಸಹಯೋಗದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರಿಗೆ ರಂಗನಮನ ಸಲ್ಲಿಸಲು ನಿರ್ಧರಿಸಿದೆ. ಇದಕ್ಕಾಗಿ ‘ನಿನ್ನಂಥೋರ್ ಯಾರೂ ಇಲ್ವಲ್ಲೋ ಈ ಲೋಕದಾ ಮ್ಯಾಲೆ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ.</p>.<p>‘ಇದೇ 21ರ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇಂಪು ಸಂಗೀತ ಸಂಸ್ಥೆಯವರು ರಂಗ ಗೀತೆ ಹಾಗೂ ನೆನಪಿನ ಹಾಡುಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ನಟ ರಾಘವೇಂದ್ರ ರಾಜ್ಕುಮಾರ್ ಭಾಗವಹಿಸಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>