<p><strong>ಬೆಂಗಳೂರು: </strong>‘ಫೋಕಸ್ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಹೇಮಂತ್ಕುಮಾರ್ ಹಾಗೂ ಸಚಿವರೊಬ್ಬರ ಆಪ್ತನೆಂದು ಹೇಳಿಕೊಂಡಿದ್ದ ಪುಷ್ಪನಾಥ್ ಎಂಬುವರು ₹ 20 ಲಕ್ಷ ಪಡೆದುಕೊಂಡು ವಂಚಿಸಿದ್ದಾರೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬಿ.ಪಿ. ಮಂಜೇಗೌಡ ಅವರು ವಿಜಯನಗರ ಠಾಣೆಗೆ ದೂರು ನೀಡಿದ್ದಾರೆ.</p>.<p>ಶಾಸಕ ಅರವಿಂದ ಲಿಂಬಾವಳಿ ಅವರನ್ನು ಬ್ಲ್ಯಾಕ್ಮೇಲ್ ಮಾಡಿ ₹ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಸಿಸಿಬಿ ಪೊಲೀಸರು ಹೇಮಂತ್ಕುಮಾರ್ ಅವರನ್ನು ಬಂಧಿಸಿದ್ದಾರೆ.</p>.<p>‘ಹೇಮಂತ್ಕುಮಾರ್ ವಿರುದ್ಧ ಆರೋಗ್ಯ ಸಚಿವ ಶಿವಾನಂದ ಪಾಟೀಲ ಅವರ ಆಪ್ತ ಸಹಾಯಕ ಸಹ ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ. ಈಗ ಮಂಜೇಗೌಡ ವಿಜಯನಗರ ಠಾಣೆಗೆ ದೂರು ಕೊಟ್ಟಿದ್ದು, ಪ್ರತ್ಯೇಕ ಎಫ್ಐಆರ್ ದಾಖಲಿಸಿಕೊಂಡು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p class="Subhead">ದೂರಿನ ವಿವರ: ‘ಸಚಿವರೊಬ್ಬರಿಂದ ಕೆಲಸ ಮಾಡಿಸಿಕೊಡುವುದಾಗಿ ಹೇಳಿದ್ದ ಹೇಮಂತ್ ಹಾಗೂ ಪುಷ್ಪನಾಥ್, ವಿಜಯನಗರದ ಇಂದ್ರಪ್ರಸ್ಥ ಹೋಟೆಲ್ ಬಳಿ ₹ 20 ಲಕ್ಷ ಪಡೆದುಕೊಂಡಿದ್ದರು. ಆ ನಂತರ, ಯಾವುದೇ ಕೆಲಸ ಮಾಡಿಸಿಕೊಟ್ಟಿಲ್ಲ’ ಎಂದು ದೂರಿನಲ್ಲಿ ಮಂಜೇಗೌಡ ಹೇಳಿದ್ದಾರೆ.</p>.<p>‘ಹಣ ವಾಪಸು ನೀಡುವಂತೆ ಒತ್ತಾಯಿಸಿದಾಗ, ರಾಮಕೃಷ್ಣ ಯಲ್ಲಪ್ಪ ಕಂಬಾರ್ ಎಂಬುವರ ಹೆಸರಿನಲ್ಲಿ ₹ 20 ಲಕ್ಷಕ್ಕೆ ಚೆಕ್ ಕೊಟ್ಟಿದ್ದರು. ಆ ಚೆಕ್ ಸಹ ಬೌನ್ಸ್ ಆಗಿದೆ’ ಎಂದು ಅವರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಫೋಕಸ್ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಹೇಮಂತ್ಕುಮಾರ್ ಹಾಗೂ ಸಚಿವರೊಬ್ಬರ ಆಪ್ತನೆಂದು ಹೇಳಿಕೊಂಡಿದ್ದ ಪುಷ್ಪನಾಥ್ ಎಂಬುವರು ₹ 20 ಲಕ್ಷ ಪಡೆದುಕೊಂಡು ವಂಚಿಸಿದ್ದಾರೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬಿ.ಪಿ. ಮಂಜೇಗೌಡ ಅವರು ವಿಜಯನಗರ ಠಾಣೆಗೆ ದೂರು ನೀಡಿದ್ದಾರೆ.</p>.<p>ಶಾಸಕ ಅರವಿಂದ ಲಿಂಬಾವಳಿ ಅವರನ್ನು ಬ್ಲ್ಯಾಕ್ಮೇಲ್ ಮಾಡಿ ₹ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಸಿಸಿಬಿ ಪೊಲೀಸರು ಹೇಮಂತ್ಕುಮಾರ್ ಅವರನ್ನು ಬಂಧಿಸಿದ್ದಾರೆ.</p>.<p>‘ಹೇಮಂತ್ಕುಮಾರ್ ವಿರುದ್ಧ ಆರೋಗ್ಯ ಸಚಿವ ಶಿವಾನಂದ ಪಾಟೀಲ ಅವರ ಆಪ್ತ ಸಹಾಯಕ ಸಹ ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ. ಈಗ ಮಂಜೇಗೌಡ ವಿಜಯನಗರ ಠಾಣೆಗೆ ದೂರು ಕೊಟ್ಟಿದ್ದು, ಪ್ರತ್ಯೇಕ ಎಫ್ಐಆರ್ ದಾಖಲಿಸಿಕೊಂಡು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p class="Subhead">ದೂರಿನ ವಿವರ: ‘ಸಚಿವರೊಬ್ಬರಿಂದ ಕೆಲಸ ಮಾಡಿಸಿಕೊಡುವುದಾಗಿ ಹೇಳಿದ್ದ ಹೇಮಂತ್ ಹಾಗೂ ಪುಷ್ಪನಾಥ್, ವಿಜಯನಗರದ ಇಂದ್ರಪ್ರಸ್ಥ ಹೋಟೆಲ್ ಬಳಿ ₹ 20 ಲಕ್ಷ ಪಡೆದುಕೊಂಡಿದ್ದರು. ಆ ನಂತರ, ಯಾವುದೇ ಕೆಲಸ ಮಾಡಿಸಿಕೊಟ್ಟಿಲ್ಲ’ ಎಂದು ದೂರಿನಲ್ಲಿ ಮಂಜೇಗೌಡ ಹೇಳಿದ್ದಾರೆ.</p>.<p>‘ಹಣ ವಾಪಸು ನೀಡುವಂತೆ ಒತ್ತಾಯಿಸಿದಾಗ, ರಾಮಕೃಷ್ಣ ಯಲ್ಲಪ್ಪ ಕಂಬಾರ್ ಎಂಬುವರ ಹೆಸರಿನಲ್ಲಿ ₹ 20 ಲಕ್ಷಕ್ಕೆ ಚೆಕ್ ಕೊಟ್ಟಿದ್ದರು. ಆ ಚೆಕ್ ಸಹ ಬೌನ್ಸ್ ಆಗಿದೆ’ ಎಂದು ಅವರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>