<p><strong>ಪೀಣ್ಯ ದಾಸರಹಳ್ಳಿ:</strong> ‘ಜಾನಪದ ನಮ್ಮ ಸಂಸ್ಕೃತಿಯ ಪ್ರತೀಕ. ಅದು ನಮ್ಮ ಬದುಕಿಗೆ ನೀತಿ ಪಾಠಗಳನ್ನು ಕಲಿಸುತ್ತದೆ’ ಎಂದು ಕನ್ನಡಪರ ಚಿಂತಕ ಚಿಕ್ಕಹೆಜ್ಜಾಜಿ ಮಹದೇವ್ ತಿಳಿಸಿದರು.</p>.<p>ಕನ್ನಡ ಜಾನಪದ ಪರಿಷತ್ಗೆ ಹತ್ತು ವರ್ಷ ತುಂಬಿದ ಪ್ರಯುಕ್ತ ದಾಸರಹಳ್ಳಿ ಕ್ಷೇತ್ರ ಘಟಕದ ವತಿಯಿಂದ ಹೆಸರಘಟ್ಟ ಮುಖ್ಯರಸ್ತೆಯ ಅಸೆಂಟ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ‘ದಶಮಾನೋತ್ಸವ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಾಸಕ ಎಸ್. ಮುನಿರಾಜು ಮಾತನಾಡಿ, ‘ನಮ್ಮ ಬಾಲ್ಯದಲ್ಲಿ ಜಾನಪದ ಹಾಡು, ನೃತ್ಯ, ಕ್ರೀಡೆ ಎಲ್ಲವೂ ಇದ್ದವು. ಇವೆಲ್ಲದರ ಜೊತೆಗೆ ನಮ್ಮ ಬದುಕು ಸಮೃದ್ಧವಾಗಿತ್ತು. ಅಂತಹ ಸಮೃದ್ಧ ಜಾನಪದ ಸಂಸ್ಕೃತಿಯನ್ನು ನಾವಿಂದು ಉಳಿಸಬೇಕಿದೆ’ ಎಂದರು.</p>.<p>ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಎಸ್ ಬಾಲಾಜಿ ಮಾತನಾಡಿ, ‘ಜಾನಪದ ಎಂಬುದು ವಿಶಾಲವಾದ ಆಲದ ಮರ. ಅದರ ಸಮೃದ್ಧ ನೆರಳಲ್ಲಿ ನಾವು ಬದುಕುವಂತಾಗಬೇಕು. ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ತಿಳಿಸಿದರು.</p>.<p>ಸಮಾರಂಭದಲ್ಲಿ 10 ಸಾಧಕರಿಗೆ ದಶಮಾನೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿಗಳಿಂದ ನೃತ್ಯ, ಹಾಡು ಮನರಂಜನಾ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ‘ಜಾನಪದ ನಮ್ಮ ಸಂಸ್ಕೃತಿಯ ಪ್ರತೀಕ. ಅದು ನಮ್ಮ ಬದುಕಿಗೆ ನೀತಿ ಪಾಠಗಳನ್ನು ಕಲಿಸುತ್ತದೆ’ ಎಂದು ಕನ್ನಡಪರ ಚಿಂತಕ ಚಿಕ್ಕಹೆಜ್ಜಾಜಿ ಮಹದೇವ್ ತಿಳಿಸಿದರು.</p>.<p>ಕನ್ನಡ ಜಾನಪದ ಪರಿಷತ್ಗೆ ಹತ್ತು ವರ್ಷ ತುಂಬಿದ ಪ್ರಯುಕ್ತ ದಾಸರಹಳ್ಳಿ ಕ್ಷೇತ್ರ ಘಟಕದ ವತಿಯಿಂದ ಹೆಸರಘಟ್ಟ ಮುಖ್ಯರಸ್ತೆಯ ಅಸೆಂಟ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ‘ದಶಮಾನೋತ್ಸವ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಾಸಕ ಎಸ್. ಮುನಿರಾಜು ಮಾತನಾಡಿ, ‘ನಮ್ಮ ಬಾಲ್ಯದಲ್ಲಿ ಜಾನಪದ ಹಾಡು, ನೃತ್ಯ, ಕ್ರೀಡೆ ಎಲ್ಲವೂ ಇದ್ದವು. ಇವೆಲ್ಲದರ ಜೊತೆಗೆ ನಮ್ಮ ಬದುಕು ಸಮೃದ್ಧವಾಗಿತ್ತು. ಅಂತಹ ಸಮೃದ್ಧ ಜಾನಪದ ಸಂಸ್ಕೃತಿಯನ್ನು ನಾವಿಂದು ಉಳಿಸಬೇಕಿದೆ’ ಎಂದರು.</p>.<p>ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಎಸ್ ಬಾಲಾಜಿ ಮಾತನಾಡಿ, ‘ಜಾನಪದ ಎಂಬುದು ವಿಶಾಲವಾದ ಆಲದ ಮರ. ಅದರ ಸಮೃದ್ಧ ನೆರಳಲ್ಲಿ ನಾವು ಬದುಕುವಂತಾಗಬೇಕು. ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ತಿಳಿಸಿದರು.</p>.<p>ಸಮಾರಂಭದಲ್ಲಿ 10 ಸಾಧಕರಿಗೆ ದಶಮಾನೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿಗಳಿಂದ ನೃತ್ಯ, ಹಾಡು ಮನರಂಜನಾ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>