ಬಾಲಗಂಗಾಧರನಾಥ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರು ಹಾಗೂ ಕೂಲಿ ಕಾರ್ಮಿಕರಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಉಪ್ಪು, ಸಕ್ಕರೆ, ಮೈದಾ ಇನ್ನಿತರ ದಿನಸಿ ಪದಾರ್ಥಗಳನ್ನೊಳಗೊಂಡ ಆಹಾರ ಕಿಟ್ ವಿತರಣೆ ನೀಡಲಾಯಿತು. ಆರೋಗ್ಯ ತಪಾಸಣೆ ಕಿಟ್, ಸೋಂಕು ನಿವಾರಕ ಔಷಧಿ ಸಿಂಪಡಣೆ ಯಂತ್ರಗಳು ಹಾಗೂ ಅಗ್ನಿಶಾಮಕ ವಾಹನ ಮೂಲಕ ರಾಸಾಯನಿಕ ಸಿಂಪಡನೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.