ಪ್ರೆಸ್ಟೀಜ್ ಸಮೂಹ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿದೇಶಕ ಇರ್ಫಾನ್ ರಜಾಕ್, ‘ಕೊರೊನಾ ಲಾಕ್ಡೌನ್ನಿಂದ ದಿನಗೂಲಿ ನೌಕರರ ಸ್ಥಿತಿ ಅಸ್ತವ್ಯಸ್ತವಾಗಿದೆ. ಇದರಿಂದ ಅಸಂಘಟಿತ ಕಾರ್ಮಿಕರು ತಮ್ಮ ದೈನಂದಿನ ಆದಾಯದಿಂದ ವಂಚಿತರಾಗಿ, ಆಹಾರದ ಸಮಸ್ಯೆಯಿಂದ ತತ್ತರಿಸುತ್ತಿದ್ದಾರೆ. ಇವರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಸಂಸ್ಥೆ ಮುಂದಾಗಿದೆ’ ಎಂದು ತಿಳಿಸಿದರು.