<p><strong>ಬೆಂಗಳೂರು:</strong> ಲಘು ಉದ್ಯೋಗ ಭಾರತಿ, ಐಎಂಎಸ್ ಫೌಂಡೇಷನ್ ಹಾಗೂ ಬಿಗ್ ಫೌಂಡೇಷನ್ ಸಹಯೋಗದಲ್ಲಿ ಇದೇ 16 ಮತ್ತು 17ರಂದು ‘ಫುಡ್ಫೆಸ್ಟ್–ಎಕ್ಸ್ಪೀರಿಯನ್ಸ್ ಮಿಲ್ಲೆಟ್ಸ್’ ಕಾರ್ಯಕ್ರಮವನ್ನು ಬಸವನಗುಡಿಯ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಘು ಉದ್ಯೋಗ ಭಾರತಿಯ ಜಂಟಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ‘ಫುಡ್ಫೆಸ್ಟ್ನಲ್ಲಿ ರಾಗಿ, ಜೋಳ, ನವಣೆ, ಸಾಮೆ ಸೇರಿದಂತೆ ವಿವಿಧ ಸಿರಿಧಾನ್ಯಗಳಾಧಾರಿತ 100ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ’ ಎಂದರು.</p>.<p>‘ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಉತ್ಪನ್ನಗಳು, ಮಾರುಕಟ್ಟೆ ಮತ್ತು ಬೇಡಿಕೆ ವಿಶ್ಲೇಷಣೆ, ಪೂರೈಕೆ, ಲಾಜಿಸ್ಟಿಕ್ಸ್ ಮತ್ತು ಗುಣಮಟ್ಟದ ಹಣಕಾಸು ಮತ್ತು ವ್ಯವಹಾರ ಬೆಂಬಲ, ನೆಟ್ವರ್ಕಿಂಗ್ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಮೇಳದಲ್ಲಿ 500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>’ನಿತ್ಯದ ಅಡುಗೆಯಲ್ಲಿ ಸಿರಿಧಾನ್ಯಗಳ ಬಳಕೆಯನ್ನು ಉತ್ತೇಜಿಸುವುದಕ್ಕಾಗಿ ಅಡುಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ‘ ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಲಘು ಉದ್ಯೋಗ ಭಾರತಿಯ ಕಾರ್ಯದರ್ಶಿಗಳಾದ ಹೇಮಾ ರಾಜೇಶ್, ಛಾಯಾ ಪ್ರಭು, ಸಿ.ಎನ್. ಭೋಜರಾಜ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲಘು ಉದ್ಯೋಗ ಭಾರತಿ, ಐಎಂಎಸ್ ಫೌಂಡೇಷನ್ ಹಾಗೂ ಬಿಗ್ ಫೌಂಡೇಷನ್ ಸಹಯೋಗದಲ್ಲಿ ಇದೇ 16 ಮತ್ತು 17ರಂದು ‘ಫುಡ್ಫೆಸ್ಟ್–ಎಕ್ಸ್ಪೀರಿಯನ್ಸ್ ಮಿಲ್ಲೆಟ್ಸ್’ ಕಾರ್ಯಕ್ರಮವನ್ನು ಬಸವನಗುಡಿಯ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಘು ಉದ್ಯೋಗ ಭಾರತಿಯ ಜಂಟಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ‘ಫುಡ್ಫೆಸ್ಟ್ನಲ್ಲಿ ರಾಗಿ, ಜೋಳ, ನವಣೆ, ಸಾಮೆ ಸೇರಿದಂತೆ ವಿವಿಧ ಸಿರಿಧಾನ್ಯಗಳಾಧಾರಿತ 100ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ’ ಎಂದರು.</p>.<p>‘ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಉತ್ಪನ್ನಗಳು, ಮಾರುಕಟ್ಟೆ ಮತ್ತು ಬೇಡಿಕೆ ವಿಶ್ಲೇಷಣೆ, ಪೂರೈಕೆ, ಲಾಜಿಸ್ಟಿಕ್ಸ್ ಮತ್ತು ಗುಣಮಟ್ಟದ ಹಣಕಾಸು ಮತ್ತು ವ್ಯವಹಾರ ಬೆಂಬಲ, ನೆಟ್ವರ್ಕಿಂಗ್ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಮೇಳದಲ್ಲಿ 500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>’ನಿತ್ಯದ ಅಡುಗೆಯಲ್ಲಿ ಸಿರಿಧಾನ್ಯಗಳ ಬಳಕೆಯನ್ನು ಉತ್ತೇಜಿಸುವುದಕ್ಕಾಗಿ ಅಡುಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ‘ ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಲಘು ಉದ್ಯೋಗ ಭಾರತಿಯ ಕಾರ್ಯದರ್ಶಿಗಳಾದ ಹೇಮಾ ರಾಜೇಶ್, ಛಾಯಾ ಪ್ರಭು, ಸಿ.ಎನ್. ಭೋಜರಾಜ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>