<p><strong>ಪೀಣ್ಯದಾಸರಹಳ್ಳಿ:</strong> ಮಲ್ಲಸಂದ್ರ ಪೈಪ್ ಲೈನ್ ರಸ್ತೆಯ ಉದ್ಯಾನ ಪಕ್ಕದ ಪಾದಚಾರಿ ಮಾರ್ಗ ಅತಿಕ್ರಮಣ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವುದರಿಂದ ಜನರು ಅನಿವಾರ್ಯವಾಗಿ ರಸ್ತೆಯ ಮೇಲೆ ಓಡಾಡುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ.</p>.<p>ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಕಬ್ಬಿಣದ ಗ್ರಿಲ್ ಹಾಕಲಾಗಿತ್ತು. ಕೆಲವರಂತೂ ರಾಜಾರೋಷವಾಗಿ ಯಾರ ಹೆದರಿಕೆಯೂ ಇಲ್ಲದೇ ಪಾದಚಾರಿ ಮಾರ್ಗದ ಮೇಲೆ ವ್ಯಾಪಾರ ಮಾಡುತ್ತಿದ್ದಾರೆ. </p>.<p>ಗ್ರಾಹಕರು ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ತರಕಾರಿ, ಹಣ್ಣು ಹಾಗೂ ಇತರೆ ವಸ್ತುಗಳನ್ನು ಖರೀದಿಸುತ್ತಿದ್ದು, ಬೆಳಿಗ್ಗೆ ಮತ್ತು ಸಂಜೆ ತಾಸುಗಟ್ಟಲೇ ಸಂಚಾರ ಸಮಸ್ಯೆ ಆಗಿದೆ. </p>.<p>ಎರಡು ರಸ್ತೆಗಳ ಮಧ್ಯೆ ಉದ್ಯಾನ ಇದೆ. ಚಿಕ್ಕಬಾಣಾವರ ಕಡೆಯಿಂದ ವಾಹನ ಸವಾರರು ನಗರದ ಕಡೆಗೆ ಪೈಪ್ ಲೈನ್ ರಸ್ತೆ ಮೂಲಕ ಹಾದು ಹೋಗುತ್ತಾರೆ. ಹಾಗೆಯೇ ನಗರದ ಕಡೆಯಿಂದ ಬರುವಂತಹ ವಾಹನ ಸವಾರರು ಪೈಪ್ ಲೈನ್ ಮೂಲಕ ಸಾಗುತ್ತಾರೆ.</p>.<p>ಈ ಮಧ್ಯೆ ಚಿಕ್ಕದಾದ ಪೈಪ್ಲೈನ್ ರಸ್ತೆಯಲ್ಲಿ ದಟ್ಟಣೆ ಉಂಟಾಗಿ ವಾಹನ ಸವಾರರು ಹೈರಾಣಾಗುತ್ತಿದ್ದಾರೆ. ಇಷ್ಟಾದರೂ ಬಿಬಿಎಂಪಿ ಅಧಿಕಾರಿಗಳು ಪಾದಚಾರಿ ಮಾರ್ಗದಲ್ಲಿ ವ್ಯಾಪಾರಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪ.</p>.<p>‘ಈಗಾಗಲೇ ವ್ಯಾಪಾರಿಗಳನ್ನು ತೆರವುಗೊಳಿಸಿದ್ದರೂ ಮತ್ತೆ ಬಂದು ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ನಿತ್ಯ ಸಂಚಾರ ದಟ್ಟಣೆ ಉಂಟಾಗಿ ಇತರೆ ವಾಹನ ಸವಾರರಿಗೂ ತೊಂದರೆಯಾಗುತ್ತಿದೆ. ಮಲ್ಲಸಂದ್ರ ವೃತ್ತದಿಂದ ಶನಿ ಮಹಾತ್ಮ ದೇವಸ್ಥಾನದ ಕೆಂಪೇಗೌಡ ವೃತ್ತದವರೆಗೂ ಪಾದಚಾರಿ ಮಾರ್ಗ ಅತಿಕ್ರಮಿಸಲಾಗಿದೆ’ ಎಂದು’ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<p>‘ಸಂಚಾರ ದಟ್ಟಣೆ ದೂರು ಬಂದ ಹಿನ್ನೆಲೆಯಲ್ಲಿ ವ್ಯಾಪಾರಿಗಳನ್ನು ತೆರವುಗೊಳಿಸಿ ಕಬ್ಬಿಣದ ಗ್ರಿಲ್ ಅಳವಡಿಸಲಾಗುತ್ತಿದೆ. ವಾಹನ ಸವಾರರ ಅನುಕೂಲಕ್ಕಾಗಿ ಮತ್ತು ಪಾದಚಾರಿಗಳು ಸರಾಗವಾಗಿ ಓಡಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಆದರೂ ಕೆಲವರು ವ್ಯಾಪಾರ ಮಾಡುತ್ತಿದ್ದಾರೆ. ಹಾಗಾಗಿ ಸಂಚಾರ ದಟ್ಟಣೆ ಉಂಟಾಗುತ್ತಿದೆ’ ಎಂದು ಶಾಸಕ ಎಸ್. ಮುನಿರಾಜು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯದಾಸರಹಳ್ಳಿ:</strong> ಮಲ್ಲಸಂದ್ರ ಪೈಪ್ ಲೈನ್ ರಸ್ತೆಯ ಉದ್ಯಾನ ಪಕ್ಕದ ಪಾದಚಾರಿ ಮಾರ್ಗ ಅತಿಕ್ರಮಣ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವುದರಿಂದ ಜನರು ಅನಿವಾರ್ಯವಾಗಿ ರಸ್ತೆಯ ಮೇಲೆ ಓಡಾಡುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ.</p>.<p>ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಕಬ್ಬಿಣದ ಗ್ರಿಲ್ ಹಾಕಲಾಗಿತ್ತು. ಕೆಲವರಂತೂ ರಾಜಾರೋಷವಾಗಿ ಯಾರ ಹೆದರಿಕೆಯೂ ಇಲ್ಲದೇ ಪಾದಚಾರಿ ಮಾರ್ಗದ ಮೇಲೆ ವ್ಯಾಪಾರ ಮಾಡುತ್ತಿದ್ದಾರೆ. </p>.<p>ಗ್ರಾಹಕರು ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ತರಕಾರಿ, ಹಣ್ಣು ಹಾಗೂ ಇತರೆ ವಸ್ತುಗಳನ್ನು ಖರೀದಿಸುತ್ತಿದ್ದು, ಬೆಳಿಗ್ಗೆ ಮತ್ತು ಸಂಜೆ ತಾಸುಗಟ್ಟಲೇ ಸಂಚಾರ ಸಮಸ್ಯೆ ಆಗಿದೆ. </p>.<p>ಎರಡು ರಸ್ತೆಗಳ ಮಧ್ಯೆ ಉದ್ಯಾನ ಇದೆ. ಚಿಕ್ಕಬಾಣಾವರ ಕಡೆಯಿಂದ ವಾಹನ ಸವಾರರು ನಗರದ ಕಡೆಗೆ ಪೈಪ್ ಲೈನ್ ರಸ್ತೆ ಮೂಲಕ ಹಾದು ಹೋಗುತ್ತಾರೆ. ಹಾಗೆಯೇ ನಗರದ ಕಡೆಯಿಂದ ಬರುವಂತಹ ವಾಹನ ಸವಾರರು ಪೈಪ್ ಲೈನ್ ಮೂಲಕ ಸಾಗುತ್ತಾರೆ.</p>.<p>ಈ ಮಧ್ಯೆ ಚಿಕ್ಕದಾದ ಪೈಪ್ಲೈನ್ ರಸ್ತೆಯಲ್ಲಿ ದಟ್ಟಣೆ ಉಂಟಾಗಿ ವಾಹನ ಸವಾರರು ಹೈರಾಣಾಗುತ್ತಿದ್ದಾರೆ. ಇಷ್ಟಾದರೂ ಬಿಬಿಎಂಪಿ ಅಧಿಕಾರಿಗಳು ಪಾದಚಾರಿ ಮಾರ್ಗದಲ್ಲಿ ವ್ಯಾಪಾರಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪ.</p>.<p>‘ಈಗಾಗಲೇ ವ್ಯಾಪಾರಿಗಳನ್ನು ತೆರವುಗೊಳಿಸಿದ್ದರೂ ಮತ್ತೆ ಬಂದು ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ನಿತ್ಯ ಸಂಚಾರ ದಟ್ಟಣೆ ಉಂಟಾಗಿ ಇತರೆ ವಾಹನ ಸವಾರರಿಗೂ ತೊಂದರೆಯಾಗುತ್ತಿದೆ. ಮಲ್ಲಸಂದ್ರ ವೃತ್ತದಿಂದ ಶನಿ ಮಹಾತ್ಮ ದೇವಸ್ಥಾನದ ಕೆಂಪೇಗೌಡ ವೃತ್ತದವರೆಗೂ ಪಾದಚಾರಿ ಮಾರ್ಗ ಅತಿಕ್ರಮಿಸಲಾಗಿದೆ’ ಎಂದು’ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<p>‘ಸಂಚಾರ ದಟ್ಟಣೆ ದೂರು ಬಂದ ಹಿನ್ನೆಲೆಯಲ್ಲಿ ವ್ಯಾಪಾರಿಗಳನ್ನು ತೆರವುಗೊಳಿಸಿ ಕಬ್ಬಿಣದ ಗ್ರಿಲ್ ಅಳವಡಿಸಲಾಗುತ್ತಿದೆ. ವಾಹನ ಸವಾರರ ಅನುಕೂಲಕ್ಕಾಗಿ ಮತ್ತು ಪಾದಚಾರಿಗಳು ಸರಾಗವಾಗಿ ಓಡಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಆದರೂ ಕೆಲವರು ವ್ಯಾಪಾರ ಮಾಡುತ್ತಿದ್ದಾರೆ. ಹಾಗಾಗಿ ಸಂಚಾರ ದಟ್ಟಣೆ ಉಂಟಾಗುತ್ತಿದೆ’ ಎಂದು ಶಾಸಕ ಎಸ್. ಮುನಿರಾಜು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>