‘ಪ್ರಜಾವಾಣಿ’ಯುಫುಟ್ಪಾತ್ ಒತ್ತುವರಿ ವಿಷಯವಾಗಿ ‘ನಮ್ಮ ನಗರ ನಮ್ಮ ಧ್ವನಿ’ ಪುಟದಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಪೊಲೀಸರು ಮಲ್ಲೇಶ್ವರದ ಸಂಪಿಗೆ ರಸ್ತೆ, ಹೆಬ್ಬಾಳ, ಹೊಸಕೆರೆಹಳ್ಳಿ, ಹಳೇ ವಿಮಾನ ನಿಲ್ದಾಣ ರಸ್ತೆ, ಬೆಳ್ಳಂದೂರು ಹೊರ ವರ್ತುಲ ರಸ್ತೆ, ಬನ್ನೇರುಘಟ್ಟ ರಸ್ತೆ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಿ 600ಕ್ಕೂ ಹೆಚ್ಚು ವ್ಯಾಪಾರಿಗಳನ್ನು ತೆರವು ಮಾಡಿಸಿದ್ದಾರೆ.