ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರತಹಳ್ಳಿ ಹೊರವರ್ತುಲ ರಸ್ತೆ: ಪಾದಚಾರಿ ಮಾರ್ಗದ ಒತ್ತುವರಿ ತೆರವು

Last Updated 25 ಆಗಸ್ಟ್ 2019, 19:52 IST
ಅಕ್ಷರ ಗಾತ್ರ

ಬೆಂಗಳೂರು: ಮಹದೇವಪುರ ವಲಯದ ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ 50 ಕಡೆ ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ಪಾಲಿಕೆ ಈ ವಾರ ತೆರವು ಮಾಡಿದೆ.

ಮಹದೇವಪುರ ವ್ಯಾಪ್ತಿಯಲ್ಲಿ ಕಳೆದ ವರ್ಷ ಪಾದಚಾರಿ ಮಾರ್ಗದ ತೆರವು ಕಾರ್ಯಾಚರಣೆ ಆರಂಭಿಸಿತ್ತು. ಆದರೆ, ತೆರವು ಮಾಡಿದ ಕೆಲದಿನಗಳ ಬಳಿಕ ಪುನಃ ಒತ್ತುವರಿ ಮಾಡಲಾಗುತ್ತಿತ್ತು. ಈ ರೀತಿ ಪದೇ ಪದೇ ಒತ್ತುವರಿ ಮಾಡುವವರ ಮೇಲೆ ನಿಗಾ ಇಟ್ಟು ಅವರ ವಿರುದ್ಧ ಪ್ರಕರಣ ದಾಖಲಿಸಲು ಪಾಲಿಕೆ ಚಿಂತನೆ ನಡೆಸಿದೆ.

‘ಪಾದಚಾರಿ ಮಾರ್ಗ ಇರುವುದು ಪಾದಚಾರಿಗಳಿಗಾಗಿ. ಒತ್ತುವರಿ ಮಾಡಿದವರಿಗೆ ಆರಂಭದಲ್ಲಿ ಎಚ್ಚರಿಕೆ ನೀಡಲಾಗುವುದು. ಮತ್ತೆ ಒತ್ತುವರಿ ಮಾಡಿದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಪಾಲಿಕೆ ಎಂಜಿನಿಯರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT