ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು.
ಅಂತಿಮ ಪರೀಕ್ಷೆಗಳು ಮಾರ್ಚ್ 31ರಿಂದ ಆರಂಭವಾಗಲಿದ್ದು, ಏ.15ರವರೆಗೆ ನಡೆಯಲಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ‘ಪರೀಕ್ಷಾ ಪ್ರವೇಶ ಪತ್ರವನ್ನು’ ತೋರಿಸಿ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಪ್ರಯಾಣಿಸಬಹುದು ಎಂದು ನಿಗಮದ ನಿರ್ದೇಶಕರು ತಿಳಿಸಿದ್ದಾರೆ.
ಚಾಲಕ ಹಾಗೂ ನಿರ್ವಾಹಕರಿಗೆ ಸಿಬ್ಬಂದಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಕೋರಿದ್ದನ್ನು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.