<p><strong>ಬೆಂಗಳೂರು: </strong>‘ಮಲ್ಲೇಶ್ವರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಕ್ಯಾಂಪಸ್ ಅನ್ನು ಶೀಘ್ರ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಿ, ವಿದೇಶಿ ಭಾಷೆಗಳನ್ನು ಕಲಿಯುವ ಕೇಂದ್ರ ಆರಂಭಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಕಾಲೇಜಿನಲ್ಲಿ ಶುಕ್ರವಾರ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿನಿಯರ ಭವಿಷ್ಯ ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯದ ಜತೆ ಒಪ್ಪಂದ ಮಾಡಿಕೊಂಡು ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸಲಾಗಿದೆ’ ಎಂದರು.</p>.<p>‘ರಾಜ್ಯದಲ್ಲಿರುವ 430 ಸರ್ಕಾರಿ ಪದವಿ ಕಾಲೇಜುಗಳನ್ನು ಸಮಗ್ರವಾಗಿ ಸುಧಾರಿಸಲು ಸರ್ಕಾರ ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಈಗಾಗಲೇ ಈ ಶಿಕ್ಷಣ ಸಂಸ್ಥೆಗಳಲ್ಲಿ ನೂರಕ್ಕೆ ನೂರರಷ್ಟು ಡಿಜಿಟಲ್ ಕಲಿಕೆ ಮತ್ತು ಸ್ಮಾರ್ಟ್ ತರಗತಿಗಳನ್ನು ಆರಂಭಿಸಲಾಗಿದೆ’ ಎಂದು ತಿಳಿಸಿದರು.</p>.<p>ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀರಾಮ್, ಪ್ರಾಂಶುಪಾಲ ರವಿ, ಉಪಪ್ರಾಂಶುಪಾಲ ರವಿಶಂಕರ್, ವೀರಣ್ಣಗೌಡ, ತಂತ್ರಜ್ಞಾನ ಪರಿಣತ ರಾಮಸ್ವಾಮಿ ಇದ್ದರು.</p>.<p>ಕಳೆದ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಮಲ್ಲೇಶ್ವರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಕ್ಯಾಂಪಸ್ ಅನ್ನು ಶೀಘ್ರ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಿ, ವಿದೇಶಿ ಭಾಷೆಗಳನ್ನು ಕಲಿಯುವ ಕೇಂದ್ರ ಆರಂಭಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಕಾಲೇಜಿನಲ್ಲಿ ಶುಕ್ರವಾರ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿನಿಯರ ಭವಿಷ್ಯ ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯದ ಜತೆ ಒಪ್ಪಂದ ಮಾಡಿಕೊಂಡು ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸಲಾಗಿದೆ’ ಎಂದರು.</p>.<p>‘ರಾಜ್ಯದಲ್ಲಿರುವ 430 ಸರ್ಕಾರಿ ಪದವಿ ಕಾಲೇಜುಗಳನ್ನು ಸಮಗ್ರವಾಗಿ ಸುಧಾರಿಸಲು ಸರ್ಕಾರ ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಈಗಾಗಲೇ ಈ ಶಿಕ್ಷಣ ಸಂಸ್ಥೆಗಳಲ್ಲಿ ನೂರಕ್ಕೆ ನೂರರಷ್ಟು ಡಿಜಿಟಲ್ ಕಲಿಕೆ ಮತ್ತು ಸ್ಮಾರ್ಟ್ ತರಗತಿಗಳನ್ನು ಆರಂಭಿಸಲಾಗಿದೆ’ ಎಂದು ತಿಳಿಸಿದರು.</p>.<p>ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀರಾಮ್, ಪ್ರಾಂಶುಪಾಲ ರವಿ, ಉಪಪ್ರಾಂಶುಪಾಲ ರವಿಶಂಕರ್, ವೀರಣ್ಣಗೌಡ, ತಂತ್ರಜ್ಞಾನ ಪರಿಣತ ರಾಮಸ್ವಾಮಿ ಇದ್ದರು.</p>.<p>ಕಳೆದ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>