<p><strong>ಬೆಂಗಳೂರು:</strong> ಬೆಂಗಳೂರು ನಗರದ ಹೊರವಲಯ ಮತ್ತು ಗ್ರಾಮಾಂತರ ಭಾಗದಲ್ಲಿ ಮೀಸಲು ಅರಣ್ಯದ 191 ಎಕರೆ ಒತ್ತುವರಿಯನ್ನು ಅರಣ್ಯ ಇಲಾಖೆ ತೆರವುಗೊಳಿಸಿದೆ.</p>.<p>’ಎರಡೂವರೆ ತಿಂಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಷ್ಟು ಭೂಮಿ ವಶಕ್ಕೆ ಪಡೆಯಲಾಗಿದೆ. ತೆರವು ಕಾರ್ಯಾಚರಣೆ ಮುಂದುವರಿಯಲಿದೆ’ ಎಂದು ಬೆಂಗಳೂರು ಗ್ರಾಮಾಂತರ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಆಂಥೋನಿ ಮರಿಯಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಮೀಸಲು ಅರಣ್ಯಪ್ರದೇಶವಾಗಿದ್ದರೂ ಅಲ್ಲಿ ಬಡಾವಣೆಗಳು ತಲೆ ಎತ್ತಿದ್ದವು. ಅಪಾರ್ಟ್ಮೆಂಟ್ ಸಮುಚ್ಚಯಗಳು ನಿರ್ಮಾಣವಾಗಿದ್ದವು. ಇವುಗಳಿಗೆ ನೀರು–ವಿದ್ಯುತ್ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ನೀಡಲಾಗಿತ್ತು. ಉಳಿದ ಪ್ರದೇಶದಲ್ಲಿ ರಾಗಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯಲಾಗಿತ್ತು. ಈಗ ಅರಣ್ಯ ಇಲಾಖೆ ಈ ಒತ್ತುವರಿಯನ್ನು ತೆರವುಗೊಳಿಸಿದೆ.</p>.<p>‘ನಗರದಲ್ಲಿ ಕೆಲವು ಕಡೆ ಒಂದು ಎಕರೆಗೆ ₹3 ಕೋಟಿಯಿಂದ ₹5 ಕೋಟಿಯವರೆಗೆ ಇದೆ. ಇಂತಹ ಅಮೂಲ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ತೆರವು ಮಾಡುವ ಸಂದರ್ಭದಲ್ಲಿ ರಾಜಕೀಯ ಒತ್ತಡಗಳೂ ಬಂದವು. ಆದರೆ, ಕಾನೂನು ಪ್ರಕಾರವಾಗಿ, ನ್ಯಾಯಾಲಯದ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಿದ್ದರಿಂದ ಹೆಚ್ಚು ತೊಂದರೆ ಎದುರಾಗಲಿಲ್ಲ’ ಎಂದು ಅವರು ಹೇಳಿದರು.</p>.<p>‘ಭೂತನಹಳ್ಳಿ ಅರಣ್ಯ ಪ್ರದೇಶದಲ್ಲಿಯೇ ಸುಮಾರು 100 ಕೋಟಿ ಮೌಲ್ಯದ ಭೂಮಿಯನ್ನು ವಶಪಡಿಸಿಕೊಂಡಿದ್ದೇವೆ. ಈ ಪ್ರದೇಶದಲ್ಲಿ ‘ಆತಿಥ್ಯ’ ಎನ್ನುವ ಬಡಾವಣೆಯನ್ನೇ ನಿರ್ಮಿಸಲಾಗಿತ್ತು. ನೀರು, ವಿದ್ಯುತ್, ರಸ್ತೆ ಸೌಲಭ್ಯ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು’ ಎಂದು ಅವರು ಹೇಳಿದರು.</p>.<p class="Subhead"><strong>ಪ್ರಕರಣ ಕೋರ್ಟ್ನಲ್ಲಿದ್ದಾಗ ಲೇಔಟ್:</strong>‘ಭೂತನಹಳ್ಳಿ ಅರಣ್ಯಪ್ರದೇಶ ಒತ್ತುವರಿ ತೆರವು ಮಾಡಿಕೊಂಡಿದ್ದರ ಬಗ್ಗೆ 2006ರಲ್ಲಿಯೇ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು. 2013ರವರೆಗೆ ವಿಚಾರಣೆ ನಡೆಯಿತು. ಈ ಅವಧಿಯಲ್ಲಿಯೇ ಬಡಾವಣೆ ನಿರ್ಮಾಣ ಮಾಡಲಾಗಿದೆ. ಒತ್ತುವರಿ ತೆರವು ಮಾಡಲು ಹೋದಾಗ ಕೆಲವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದರು. ಈಗ ತೆರವು ಕಾರ್ಯಾಚರಣೆ ಕೈಗೆತ್ತಿಕೊಳ್ಳಲು ನ್ಯಾಯಾಲಯ ಅನುಮತಿ ನೀಡಿತ್ತು’ ಎಂದು ಆಂಥೋನಿ ತಿಳಿಸಿದರು.</p>.<p>‘ಹೊಸಕೋಟೆ ಅರಣ್ಯಪ್ರದೇಶದಲ್ಲಿ ಕೆಲವರು ರಾಗಿ ಬೆಳೆದಿದ್ದರು. ಮನೆಗಳನ್ನೂ ಕಟ್ಟಿಕೊಂಡಿದ್ದರು. ಅವುಗಳನ್ನೆಲ್ಲ ತೆರವುಗೊಳಿಸಲಾಗಿದೆ. ಮನೆ ಕಟ್ಟಿಕೊಂಡಿರುವುದು ಅರಣ್ಯ ಪ್ರದೇಶ ಎಂದು ಸ್ಥಳೀಯರಿಗೆ ಮನವರಿಕೆ ಮಾಡಿಕೊಡಲಾಯಿತು’ ಎಂದರು.</p>.<p>ವಶಪಡಿಸಿಕೊಳ್ಳಲಾಗಿರುವ ಪ್ರದೇಶಗಳಲ್ಲಿ ಅರಣ್ಯ ಇಲಾಖೆಯು ಸಸಿಗಳನ್ನು ನೆಡುವ ಪ್ರಕ್ರಿಯೆ ಪ್ರಾರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ನಗರದ ಹೊರವಲಯ ಮತ್ತು ಗ್ರಾಮಾಂತರ ಭಾಗದಲ್ಲಿ ಮೀಸಲು ಅರಣ್ಯದ 191 ಎಕರೆ ಒತ್ತುವರಿಯನ್ನು ಅರಣ್ಯ ಇಲಾಖೆ ತೆರವುಗೊಳಿಸಿದೆ.</p>.<p>’ಎರಡೂವರೆ ತಿಂಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಷ್ಟು ಭೂಮಿ ವಶಕ್ಕೆ ಪಡೆಯಲಾಗಿದೆ. ತೆರವು ಕಾರ್ಯಾಚರಣೆ ಮುಂದುವರಿಯಲಿದೆ’ ಎಂದು ಬೆಂಗಳೂರು ಗ್ರಾಮಾಂತರ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಆಂಥೋನಿ ಮರಿಯಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಮೀಸಲು ಅರಣ್ಯಪ್ರದೇಶವಾಗಿದ್ದರೂ ಅಲ್ಲಿ ಬಡಾವಣೆಗಳು ತಲೆ ಎತ್ತಿದ್ದವು. ಅಪಾರ್ಟ್ಮೆಂಟ್ ಸಮುಚ್ಚಯಗಳು ನಿರ್ಮಾಣವಾಗಿದ್ದವು. ಇವುಗಳಿಗೆ ನೀರು–ವಿದ್ಯುತ್ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ನೀಡಲಾಗಿತ್ತು. ಉಳಿದ ಪ್ರದೇಶದಲ್ಲಿ ರಾಗಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯಲಾಗಿತ್ತು. ಈಗ ಅರಣ್ಯ ಇಲಾಖೆ ಈ ಒತ್ತುವರಿಯನ್ನು ತೆರವುಗೊಳಿಸಿದೆ.</p>.<p>‘ನಗರದಲ್ಲಿ ಕೆಲವು ಕಡೆ ಒಂದು ಎಕರೆಗೆ ₹3 ಕೋಟಿಯಿಂದ ₹5 ಕೋಟಿಯವರೆಗೆ ಇದೆ. ಇಂತಹ ಅಮೂಲ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ತೆರವು ಮಾಡುವ ಸಂದರ್ಭದಲ್ಲಿ ರಾಜಕೀಯ ಒತ್ತಡಗಳೂ ಬಂದವು. ಆದರೆ, ಕಾನೂನು ಪ್ರಕಾರವಾಗಿ, ನ್ಯಾಯಾಲಯದ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಿದ್ದರಿಂದ ಹೆಚ್ಚು ತೊಂದರೆ ಎದುರಾಗಲಿಲ್ಲ’ ಎಂದು ಅವರು ಹೇಳಿದರು.</p>.<p>‘ಭೂತನಹಳ್ಳಿ ಅರಣ್ಯ ಪ್ರದೇಶದಲ್ಲಿಯೇ ಸುಮಾರು 100 ಕೋಟಿ ಮೌಲ್ಯದ ಭೂಮಿಯನ್ನು ವಶಪಡಿಸಿಕೊಂಡಿದ್ದೇವೆ. ಈ ಪ್ರದೇಶದಲ್ಲಿ ‘ಆತಿಥ್ಯ’ ಎನ್ನುವ ಬಡಾವಣೆಯನ್ನೇ ನಿರ್ಮಿಸಲಾಗಿತ್ತು. ನೀರು, ವಿದ್ಯುತ್, ರಸ್ತೆ ಸೌಲಭ್ಯ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು’ ಎಂದು ಅವರು ಹೇಳಿದರು.</p>.<p class="Subhead"><strong>ಪ್ರಕರಣ ಕೋರ್ಟ್ನಲ್ಲಿದ್ದಾಗ ಲೇಔಟ್:</strong>‘ಭೂತನಹಳ್ಳಿ ಅರಣ್ಯಪ್ರದೇಶ ಒತ್ತುವರಿ ತೆರವು ಮಾಡಿಕೊಂಡಿದ್ದರ ಬಗ್ಗೆ 2006ರಲ್ಲಿಯೇ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು. 2013ರವರೆಗೆ ವಿಚಾರಣೆ ನಡೆಯಿತು. ಈ ಅವಧಿಯಲ್ಲಿಯೇ ಬಡಾವಣೆ ನಿರ್ಮಾಣ ಮಾಡಲಾಗಿದೆ. ಒತ್ತುವರಿ ತೆರವು ಮಾಡಲು ಹೋದಾಗ ಕೆಲವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದರು. ಈಗ ತೆರವು ಕಾರ್ಯಾಚರಣೆ ಕೈಗೆತ್ತಿಕೊಳ್ಳಲು ನ್ಯಾಯಾಲಯ ಅನುಮತಿ ನೀಡಿತ್ತು’ ಎಂದು ಆಂಥೋನಿ ತಿಳಿಸಿದರು.</p>.<p>‘ಹೊಸಕೋಟೆ ಅರಣ್ಯಪ್ರದೇಶದಲ್ಲಿ ಕೆಲವರು ರಾಗಿ ಬೆಳೆದಿದ್ದರು. ಮನೆಗಳನ್ನೂ ಕಟ್ಟಿಕೊಂಡಿದ್ದರು. ಅವುಗಳನ್ನೆಲ್ಲ ತೆರವುಗೊಳಿಸಲಾಗಿದೆ. ಮನೆ ಕಟ್ಟಿಕೊಂಡಿರುವುದು ಅರಣ್ಯ ಪ್ರದೇಶ ಎಂದು ಸ್ಥಳೀಯರಿಗೆ ಮನವರಿಕೆ ಮಾಡಿಕೊಡಲಾಯಿತು’ ಎಂದರು.</p>.<p>ವಶಪಡಿಸಿಕೊಳ್ಳಲಾಗಿರುವ ಪ್ರದೇಶಗಳಲ್ಲಿ ಅರಣ್ಯ ಇಲಾಖೆಯು ಸಸಿಗಳನ್ನು ನೆಡುವ ಪ್ರಕ್ರಿಯೆ ಪ್ರಾರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>