ಗಣಿ ಮತ್ತು ಖನಿಜ (ಎಂಎಂಆರ್ಡಿ) ಕಾಯ್ದೆಯಡಿ ಅರಣ್ಯ ನಿಯಮಾವಳಿ ಉಲ್ಲಂಘಿಸಿರುವ ಪ್ರಕರಣದಲ್ಲಿ ದೂರು ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಸಿಂಗ್ ವಿರುದ್ಧ ವಲಯ ಅರಣ್ಯಾಧಿಕಾರಿ ಪ್ರತ್ಯೇಕ ದೂರು ದಾಖಲಿಸಿರುವುದನ್ನು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದು ಈಗ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಅರಣ್ಯ ನಿಯಮ ಉಲ್ಲಂಘಿಸಿದವರಿಗೇ ಅರಣ್ಯ ಖಾತೆ ನೀಡಲಾಗಿದೆ ಎಂಬ ಟೀಕೆಗಳು ಕೇಳಿ ಬಂದಿವೆ.