ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನಂದ್‌ ಸಿಂಗ್‌ಗೆ ಅರಣ್ಯ ಖಾತೆ: ಭುಗಿಲೆದ್ದ ವಿವಾದ

Last Updated 11 ಫೆಬ್ರುವರಿ 2020, 17:01 IST
ಅಕ್ಷರ ಗಾತ್ರ

ಬೆಂಗಳೂರು: ಅರಣ್ಯ ಸಚಿವ ಆನಂದ್‌ ಸಿಂಗ್‌ ವಿರುದ್ಧ ಅರಣ್ಯ ಕಾಯ್ದೆ ಉಲ್ಲಂಘನೆಯ ಎರಡು ಪ್ರಕರಣಗಳು ದಾಖಲಾಗಿರುವುದನ್ನು ಅವರು ತಮ್ಮ ಚುನಾವಣೆ ಸ್ಪರ್ಧೆಯ ಸಂದರ್ಭದಲ್ಲಿ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಗಣಿ ಮತ್ತು ಖನಿಜ (ಎಂಎಂಆರ್‌ಡಿ) ಕಾಯ್ದೆಯಡಿ ಅರಣ್ಯ ನಿಯಮಾವಳಿ ಉಲ್ಲಂಘಿಸಿರುವ ಪ್ರಕರಣದಲ್ಲಿ ದೂರು ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಸಿಂಗ್‌ ವಿರುದ್ಧ ವಲಯ ಅರಣ್ಯಾಧಿಕಾರಿ ಪ್ರತ್ಯೇಕ ದೂರು ದಾಖಲಿಸಿರುವುದನ್ನು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದು ಈಗ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಅರಣ್ಯ ನಿಯಮ ಉಲ್ಲಂಘಿಸಿದವರಿಗೇ ಅರಣ್ಯ ಖಾತೆ ನೀಡಲಾಗಿದೆ ಎಂಬ ಟೀಕೆಗಳು ಕೇಳಿ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT