ಬೆಂಗಳೂರು: ಕಾಟನ್ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪಾಲಿಕೆ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣವನ್ನು 24 ಗಂಟೆಯೊಳಗೆ ಭೇದಿಸಿದ್ದ ಪಶ್ಚಿಮ ವಿಭಾಗದ ಪೊಲೀಸರಿಗೆ ₹ 1.25 ಲಕ್ಷ ಬಹುಮಾನ ನೀಡಲಾಗಿದೆ.
ಡಿಸಿಪಿ ಸಂಜೀವ್ ಪಾಟೀಲ ನೇತೃತ್ವದ ಪೊಲೀಸರ ತಂಡಕ್ಕೆ ಕಮಿಷನರ್ ಕಮಲ್ ಪಂತ್ ಅವರು ಸೋಮವಾರ ಬಹುಮಾನದ ಚೆಕ್ ವಿತರಿಸಿದರು.
‘ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರ ತಂಡಕ್ಕೆ ₹ 1.25 ಲಕ್ಷ ಬಹುಮಾನ ಮಂಜೂರು ಮಾಡಲಾಗಿದೆ’ ಎಂದು ಕಮಲ್ ಪಂತ್ ಹೇಳಿದರು.