<p><strong>ಕೆ.ಆರ್.ಪುರ:</strong> ‘ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ದೃಷ್ಟಿಯಿಂದ ಕಾರ್ಯಕರ್ತರು ಪಟಾಕಿ ಸುಡುವುದನ್ನು ಬಿಟ್ಟು, ಸ್ವಚ್ಚತೆಗೆ ಆದ್ಯತೆ ನೀಡಬೇಕು’ ಎಂದು ಮಾಜಿ ಶಾಸಕ ಅರವಿಂದ ಲಿಂಬಾವಳಿ ಮನವಿ ಮಾಡಿದರು.</p>.<p>ವೈಟ್ಫೀಲ್ಡ್ನಲ್ಲಿ ಕೆಫೆಯೊಂದರ ಉದ್ಘಾಟನೆಗೆ ಬಂದ ಅವರನ್ನು ಸ್ವಾಗತಿಸಲು ಕಾರ್ಯಕರ್ತರು ರಸ್ತೆಯಲ್ಲಿ ಪಟಾಕಿ ಸಿಡಿಸಿದರು. ಇದರಿಂದ ರಸ್ತೆಯಲ್ಲಿ ಪಟಾಕಿಯ ತಾಜ್ಯ ಹರಡಿಕೊಂಡಿತ್ತು. ಇದನ್ನು ಕಂಡ ಲಿಂಬಾವಳಿ, ಪೂರೆಕೆ ಹಿಡಿದು ರಸ್ತೆ ಸ್ವಚ್ಛಗೊಳಿಸಿದರು. ಅವರೊಂದಿಗೆ ಕಾರ್ಯಕರ್ತರು ಸೇರಿ ಸ್ವಚ್ಛತಾ ಕಾರ್ಯ ಕೈಗೊಂಡರು.</p>.<p>ನಂತರ ಮಾತನಾಡಿದ ಅವರು, ‘ಪಟಾಕಿ ಸಿಡಿಸಿ ಯಾರನ್ನೂ ಸ್ವಾಗತಿಸುವುದು ಬೇಡ. ಇದರಿಂದ ಪರಿಸರ ಮಾಲಿನ್ಯ ಜೊತೆಗೆ, ತ್ಯಾಜ್ಯ ಹೆಚ್ಚಾಗುತ್ತದೆ. ಇದು ಅನಾರೋಗ್ಯಕ್ಕೂ ಕಾರಣವಾಗುತ್ತದೆ. ಯಾವುದೇ ಸಂದರ್ಭದಲ್ಲೂ ಪಟಾಕಿ ಹಚ್ಚಿ ಯಾರಿಗೂ ತೊಂದರೆ ನೀಡಬಾರದು’ ಎಂದು ತಿಳಿಸಿದರು.</p>.<p>ಮಹದೇವಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಮನೋಹರರೆಡ್ಡಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ದೃಷ್ಟಿಯಿಂದ ಕಾರ್ಯಕರ್ತರು ಪಟಾಕಿ ಸುಡುವುದನ್ನು ಬಿಟ್ಟು, ಸ್ವಚ್ಚತೆಗೆ ಆದ್ಯತೆ ನೀಡಬೇಕು’ ಎಂದು ಮಾಜಿ ಶಾಸಕ ಅರವಿಂದ ಲಿಂಬಾವಳಿ ಮನವಿ ಮಾಡಿದರು.</p>.<p>ವೈಟ್ಫೀಲ್ಡ್ನಲ್ಲಿ ಕೆಫೆಯೊಂದರ ಉದ್ಘಾಟನೆಗೆ ಬಂದ ಅವರನ್ನು ಸ್ವಾಗತಿಸಲು ಕಾರ್ಯಕರ್ತರು ರಸ್ತೆಯಲ್ಲಿ ಪಟಾಕಿ ಸಿಡಿಸಿದರು. ಇದರಿಂದ ರಸ್ತೆಯಲ್ಲಿ ಪಟಾಕಿಯ ತಾಜ್ಯ ಹರಡಿಕೊಂಡಿತ್ತು. ಇದನ್ನು ಕಂಡ ಲಿಂಬಾವಳಿ, ಪೂರೆಕೆ ಹಿಡಿದು ರಸ್ತೆ ಸ್ವಚ್ಛಗೊಳಿಸಿದರು. ಅವರೊಂದಿಗೆ ಕಾರ್ಯಕರ್ತರು ಸೇರಿ ಸ್ವಚ್ಛತಾ ಕಾರ್ಯ ಕೈಗೊಂಡರು.</p>.<p>ನಂತರ ಮಾತನಾಡಿದ ಅವರು, ‘ಪಟಾಕಿ ಸಿಡಿಸಿ ಯಾರನ್ನೂ ಸ್ವಾಗತಿಸುವುದು ಬೇಡ. ಇದರಿಂದ ಪರಿಸರ ಮಾಲಿನ್ಯ ಜೊತೆಗೆ, ತ್ಯಾಜ್ಯ ಹೆಚ್ಚಾಗುತ್ತದೆ. ಇದು ಅನಾರೋಗ್ಯಕ್ಕೂ ಕಾರಣವಾಗುತ್ತದೆ. ಯಾವುದೇ ಸಂದರ್ಭದಲ್ಲೂ ಪಟಾಕಿ ಹಚ್ಚಿ ಯಾರಿಗೂ ತೊಂದರೆ ನೀಡಬಾರದು’ ಎಂದು ತಿಳಿಸಿದರು.</p>.<p>ಮಹದೇವಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಮನೋಹರರೆಡ್ಡಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>