ಶ್ರೀನಿವಾಸಪುರ: ‘ಶ್ರೀನಿವಾಸಪುರ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ, ನಿಯತ್ತು ಹಾಗೂ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಆದರೆ, ನನಗೆ ಮೋಸವಾಯಿತು. ನನ್ನ ಜೀವನದಲ್ಲಿ ಮುಂದೆಂದೂ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಬಳಿ ಬಂದು ಮತ ಕೇಳಲ್ಲ’ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಭಾವುಕರಾಗಿ ನುಡಿದರು.