ಶೃಂಗ ಉದ್ಘಾಟಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ವ್ಯಕ್ತಿಯನ್ನು ದೈಹಿಕ, ಮಾನಸಿಕ ಮತ್ತು ಆರ್ಥಿಕವಾಗಿ ಕುಗ್ಗಿಸುತ್ತಿದ್ದ ಕ್ಯಾನ್ಸರ್ ಕಾಯಿಲೆ, ಇತ್ತೀಚೆಗೆ ಸಾಮಾನ್ಯವಾಗಿದೆ. ಈ ಕಾಯಿಲೆ ಬಗ್ಗೆ ಜಾಗೃತಿಯೂ ಮೂಡುತ್ತಿದ್ದು, ತಂತ್ರಜ್ಞಾನದ ನೆರವಿನಿಂದ ಚಿಕಿತ್ಸೆಗಳು ವ್ಯಕ್ತಿಯನ್ನು ಪ್ರಾಣಾಪಾಯದಿಂದ ಪಾರು ಮಾಡುತ್ತಿವೆ. ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನಗಳು ನಿಖರ ಚಿಕಿತ್ಸೆಗೆ ಸಹಕಾರಿಯಾಗುತ್ತಿವೆ. ಆರಂಭಿಕ ಹಂತದಲ್ಲಿಯೇ ಕ್ಯಾನ್ಸರ್ ಪತ್ತೆ ಮಾಡಿದಲ್ಲಿ ಸುಲಭವಾಗಿ ಕಾಯಿಲೆಯನ್ನು ವಾಸಿ ಮಾಡಬಹುದು’ ಎಂದು ಹೇಳಿದರು.