<p><strong>ಯಲಹಂಕ:</strong> ಇಲ್ಲಿನ ಮೂರು ಪ್ರಮುಖ ವೃತ್ತಗಳಲ್ಲಿ ₹270 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ‘ಇಂಟಿಗ್ರೇಟೆಡ್ ಎಲಿವೇಟೆಡ್ ಫ್ಲೈಓವರ್’ಗಳ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಆರ್. ವಿಶ್ವನಾಥ್ ಎನ್ಇಎಸ್ ವೃತ್ತದಲ್ಲಿ ಚಾಲನೆ ನೀಡಿದರು.</p>.<p>‘ಯಲಹಂಕ ಅತಿ ವೇಗವಾಗಿ ಬೆಳೆಯುತ್ತಿದೆ. ಇಲ್ಲಿನ ಎಲ್ಲ ವೃತ್ತಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪೊಲೀಸ್ ವೃತ್ತದಿಂದ ಸಂದೀಪ್ ಉನ್ನಿಕೃಷ್ಣನ್ ವೃತ್ತದವರೆಗೆ ₹1.75 ಕೋಟಿ ವೆಚ್ಚದಲ್ಲಿ 1.84 ಕಿಲೋಮೀಟರ್ ಉದ್ದದ ಮೇಲ್ಸೇತುವೆ ನಿರ್ಮಿಸಲಾಗುವುದು. ಇದು ಬೆಂಗಳೂರಿನಲ್ಲಿ 3ನೇ ಅತಿ ಉದ್ದದ ಸಂಯೋಜಿತ ಮೇಲ್ಸೇತುವೆಯಾಗಲಿದೆ’ ಎಂದು ತಿಳಿಸಿದರು.</p>.<p>‘ಹಳೇನಗರದ ಕೆಂಪೇಗೌಡ ವೃತ್ತದಿಂದ ಕೋಗಿಲು ವೃತ್ತದವರೆಗೆ ₹70 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ಹಾಗೂ ₹15 ಕೋಟಿ ವೆಚ್ಚದಲ್ಲಿ ರೈಲ್ವೆ ನಿಲ್ದಾಣದಿಂದ ದೊಡ್ಡಬಳ್ಳಾಪುರ ರಸ್ತೆ ಹಾಗೂ ಉಪನಗರಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಗಿದೆ. ಒಂದೂವರೆ ವರ್ಷದಲ್ಲಿ ಈ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಸಮಯ ನಿಗದಿಪಡಿಸಲಾಗಿದೆ’ ಎಂದರು.</p>.<p>‘ಮುಖ್ಯಮಂತ್ರಿಯವರು ಬೆಂಗಳೂರಿನ ಅಭಿವೃದ್ಧಿಗಾಗಿ ಅಮೃತ ನಗರೋತ್ಥಾನ ಯೋಜನೆಯಡಿ ₹6,000 ಕೋಟಿ ಅನುದಾನ ಘೋಷಿಸಿದ್ದಾರೆ. ಅದರಲ್ಲಿಯೂ ಯಲಹಂಕದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡುವುದರಿಂದ ಬಾಕಿ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>ಬಿಬಿಎಂಪಿವಿಶೇಷ ಆಯುಕ್ತ (ಯೋಜನೆಗಳು) ಮನೋಜ್ ಜೈನ್, ಯಲಹಂಕ ವಲಯದ ಜಂಟಿ ಆಯುಕ್ತರಾದ ಪೂರ್ಣಿಮಾ, ಮುಖಂಡರಾದ ಎಂ.ಸತೀಶ್, ಎಂ.ಮುನಿರಾಜು, ಬಿಬಿಎಂಪಿ ಮುಖ್ಯ ಎಂಜಿನಿಯರ್ (ರಸ್ತೆ, ಮೂಲಭೂತ ಸೌಕರ್ಯ) ಬಿ.ಎಸ್.ಪ್ರಹ್ಲಾದ್, ಯಲಹಂಕ ವಲಯದ ಕಾರ್ಯಪಾಲಕ ಎಂಜಿನಿಯರ್ ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಇಲ್ಲಿನ ಮೂರು ಪ್ರಮುಖ ವೃತ್ತಗಳಲ್ಲಿ ₹270 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ‘ಇಂಟಿಗ್ರೇಟೆಡ್ ಎಲಿವೇಟೆಡ್ ಫ್ಲೈಓವರ್’ಗಳ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಆರ್. ವಿಶ್ವನಾಥ್ ಎನ್ಇಎಸ್ ವೃತ್ತದಲ್ಲಿ ಚಾಲನೆ ನೀಡಿದರು.</p>.<p>‘ಯಲಹಂಕ ಅತಿ ವೇಗವಾಗಿ ಬೆಳೆಯುತ್ತಿದೆ. ಇಲ್ಲಿನ ಎಲ್ಲ ವೃತ್ತಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪೊಲೀಸ್ ವೃತ್ತದಿಂದ ಸಂದೀಪ್ ಉನ್ನಿಕೃಷ್ಣನ್ ವೃತ್ತದವರೆಗೆ ₹1.75 ಕೋಟಿ ವೆಚ್ಚದಲ್ಲಿ 1.84 ಕಿಲೋಮೀಟರ್ ಉದ್ದದ ಮೇಲ್ಸೇತುವೆ ನಿರ್ಮಿಸಲಾಗುವುದು. ಇದು ಬೆಂಗಳೂರಿನಲ್ಲಿ 3ನೇ ಅತಿ ಉದ್ದದ ಸಂಯೋಜಿತ ಮೇಲ್ಸೇತುವೆಯಾಗಲಿದೆ’ ಎಂದು ತಿಳಿಸಿದರು.</p>.<p>‘ಹಳೇನಗರದ ಕೆಂಪೇಗೌಡ ವೃತ್ತದಿಂದ ಕೋಗಿಲು ವೃತ್ತದವರೆಗೆ ₹70 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ಹಾಗೂ ₹15 ಕೋಟಿ ವೆಚ್ಚದಲ್ಲಿ ರೈಲ್ವೆ ನಿಲ್ದಾಣದಿಂದ ದೊಡ್ಡಬಳ್ಳಾಪುರ ರಸ್ತೆ ಹಾಗೂ ಉಪನಗರಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಗಿದೆ. ಒಂದೂವರೆ ವರ್ಷದಲ್ಲಿ ಈ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಸಮಯ ನಿಗದಿಪಡಿಸಲಾಗಿದೆ’ ಎಂದರು.</p>.<p>‘ಮುಖ್ಯಮಂತ್ರಿಯವರು ಬೆಂಗಳೂರಿನ ಅಭಿವೃದ್ಧಿಗಾಗಿ ಅಮೃತ ನಗರೋತ್ಥಾನ ಯೋಜನೆಯಡಿ ₹6,000 ಕೋಟಿ ಅನುದಾನ ಘೋಷಿಸಿದ್ದಾರೆ. ಅದರಲ್ಲಿಯೂ ಯಲಹಂಕದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡುವುದರಿಂದ ಬಾಕಿ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>ಬಿಬಿಎಂಪಿವಿಶೇಷ ಆಯುಕ್ತ (ಯೋಜನೆಗಳು) ಮನೋಜ್ ಜೈನ್, ಯಲಹಂಕ ವಲಯದ ಜಂಟಿ ಆಯುಕ್ತರಾದ ಪೂರ್ಣಿಮಾ, ಮುಖಂಡರಾದ ಎಂ.ಸತೀಶ್, ಎಂ.ಮುನಿರಾಜು, ಬಿಬಿಎಂಪಿ ಮುಖ್ಯ ಎಂಜಿನಿಯರ್ (ರಸ್ತೆ, ಮೂಲಭೂತ ಸೌಕರ್ಯ) ಬಿ.ಎಸ್.ಪ್ರಹ್ಲಾದ್, ಯಲಹಂಕ ವಲಯದ ಕಾರ್ಯಪಾಲಕ ಎಂಜಿನಿಯರ್ ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>