<p><strong>ಯಲಹಂಕ:</strong> ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಉಪನಗರದಲ್ಲಿ ₹ 1 ಕೋಟಿ ವೆಚ್ಛದಲ್ಲಿ ಹಿಂದುಳಿದ ವರ್ಗದ ಬಾಲಕಿಯರ ವಸತಿನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಆರ್. ವಿಶ್ವನಾಥ್ ಗುದ್ದಲಿಪೂಜೆ ನೆರವೇರಿಸಿದರು.</p>.<p>ಈ ವಿದ್ಯಾರ್ಥಿನಿಲಯದಲ್ಲಿ ಹೊರಜಿಲ್ಲೆಗಳಿಂದ ಬಂದಿರುವ ವಿದ್ಯಾರ್ಥಿನಿಯರೇ ಹೆಚ್ಚಿನ ಸಂಖ್ಯೆಯಲಿದ್ದು, ಅವರ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳಿಲ್ಲದೆ ಸಮಸ್ಯೆಯಾಗಿತ್ತು. ನೂತನ ಕಟ್ಟಡ ನಿರ್ಮಿಸಬೇಕೆಂಬ ಹಲವು ದಿನಗಳ ಬೇಡಿಕೆಯಂತೆ ಸಮಾಜಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಆರು ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಬಡಮಕ್ಕಳಿಗೆ ಅನುಕೂಲವಾಗಲಿದೆ ಎಂದು ಶಾಸಕರು ತಿಳಿಸಿದರು.</p>.<p>ಗರಡಿ ಮನೆ ಉದ್ಘಾಟನೆ: ಬಿಬಿಎಂಪಿ ವತಿಯಿಂದ ಉಪನಗರ 4ನೇ ಹಂತದ ವಿವೇಕಾನಂದ ಉದ್ಯಾನದ ಪಕ್ಕದಲ್ಲಿ ₹ 75 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಗರಡಿ ಮನೆಯಲ್ಲಿ ಮಟ್ಟಿ ಕುಸ್ತಿ ಹಾಗೂ ಮ್ಯಾಟ್ ಕುಸ್ತಿ ತರಬೇತಿಗಾಗಿ ನಿರ್ಮಿಸಿರುವ ಕೊಠಡಿಗಳನ್ನು ಉದ್ಘಾಟಿಸಲಾಯಿತು.</p>.<p>ಬಿಬಿಎಂಪಿ ಮಾಜಿ ಸದಸ್ಯರಾದ ಎಂ. ಸತೀಶ್, ಎಂ. ಮುನಿರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಲಕ್ಷ್ಮಣ ರೆಡ್ಡಿ, ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಸುಧಾಕರ ರೆಡ್ಡಿ, ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಒ. ರಮೇಶ್, ಉಸ್ತಾದ್ ಪೈಲ್ವಾನ್ ಆರ್. ಆನಂದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಉಪನಗರದಲ್ಲಿ ₹ 1 ಕೋಟಿ ವೆಚ್ಛದಲ್ಲಿ ಹಿಂದುಳಿದ ವರ್ಗದ ಬಾಲಕಿಯರ ವಸತಿನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಆರ್. ವಿಶ್ವನಾಥ್ ಗುದ್ದಲಿಪೂಜೆ ನೆರವೇರಿಸಿದರು.</p>.<p>ಈ ವಿದ್ಯಾರ್ಥಿನಿಲಯದಲ್ಲಿ ಹೊರಜಿಲ್ಲೆಗಳಿಂದ ಬಂದಿರುವ ವಿದ್ಯಾರ್ಥಿನಿಯರೇ ಹೆಚ್ಚಿನ ಸಂಖ್ಯೆಯಲಿದ್ದು, ಅವರ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳಿಲ್ಲದೆ ಸಮಸ್ಯೆಯಾಗಿತ್ತು. ನೂತನ ಕಟ್ಟಡ ನಿರ್ಮಿಸಬೇಕೆಂಬ ಹಲವು ದಿನಗಳ ಬೇಡಿಕೆಯಂತೆ ಸಮಾಜಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಆರು ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಬಡಮಕ್ಕಳಿಗೆ ಅನುಕೂಲವಾಗಲಿದೆ ಎಂದು ಶಾಸಕರು ತಿಳಿಸಿದರು.</p>.<p>ಗರಡಿ ಮನೆ ಉದ್ಘಾಟನೆ: ಬಿಬಿಎಂಪಿ ವತಿಯಿಂದ ಉಪನಗರ 4ನೇ ಹಂತದ ವಿವೇಕಾನಂದ ಉದ್ಯಾನದ ಪಕ್ಕದಲ್ಲಿ ₹ 75 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಗರಡಿ ಮನೆಯಲ್ಲಿ ಮಟ್ಟಿ ಕುಸ್ತಿ ಹಾಗೂ ಮ್ಯಾಟ್ ಕುಸ್ತಿ ತರಬೇತಿಗಾಗಿ ನಿರ್ಮಿಸಿರುವ ಕೊಠಡಿಗಳನ್ನು ಉದ್ಘಾಟಿಸಲಾಯಿತು.</p>.<p>ಬಿಬಿಎಂಪಿ ಮಾಜಿ ಸದಸ್ಯರಾದ ಎಂ. ಸತೀಶ್, ಎಂ. ಮುನಿರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಲಕ್ಷ್ಮಣ ರೆಡ್ಡಿ, ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಸುಧಾಕರ ರೆಡ್ಡಿ, ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಒ. ರಮೇಶ್, ಉಸ್ತಾದ್ ಪೈಲ್ವಾನ್ ಆರ್. ಆನಂದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>