ಬೆಂಗಳೂರು: ‘ಕೌಶಲ ಅಭಿವೃದ್ಧಿಗಾಗಿ ಹೂಡಿಕೆ ಮಾಡುವುದರಿಂದ ಉದ್ಯಮಗಳಿಗೆ ಲಾಭದಾಯಕ ಹಾಗೂ ಉದ್ಯೋಗಿಗಳಿಗೂ ಪ್ರಯೋಜನಕಾರಿ. ಹಾಗಾಗಿ,ಕೌಶಲಾಭಿವೃದ್ಧಿ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆಗೆ ಆದ್ಯತೆ ನೀಡಬೇಕು’ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ತಿಳಿಸಿದರು.