<p><strong>ಕೆ.ಆರ್.ಪುರ:</strong> ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ್ದ ಸುಮಾರು ₹8 ಕೋಟಿ ಮೌಲ್ಯದ ಗ್ರಾಮಠಾಣಾ ಆಸ್ತಿಯನ್ನು ಬಿದರಹಳ್ಳಿ ಗ್ರಾಮ ಪಂಚಾಯಿತಿ ಸಂರಕ್ಷಿಸಿದೆ.</p>.<p>ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಅಗ್ರಹಾರ ಗ್ರಾಮದಲ್ಲಿ ಸರ್ಕಾರಿ ಸ್ವತ್ತಿನ ಸಂಖ್ಯೆ 51/1 ರಲ್ಲಿ 125×170 ಅಡಿ ವಿಸ್ತೀರ್ಣದ ಜಾಗವನ್ನು ಬಿದರಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಕಾರಣಿ ಸಮಿತಿ ನಿರ್ಧಾರದಂತೆ ರಕ್ಷಣೆ ಮಾಡಲಾಗಿದೆ.</p>.<p>ನಕಲಿ ದಾಖಲೆಗಳನ್ನು ಸೃಷ್ಟಿಸಿ ಗ್ರಾಮ ಠಾಣಾ ಆಸ್ತಿಯನ್ನು ಪಡೆದುಕೊಂಡಿದ್ದ ನಾರಾಯಣರೆಡ್ಡಿ ಅವರ ಹೆಸರಿಗೆ ಖಾತೆ ಮಾಡಿಕೊಡಲು ಹಿಂದಿನ ಕಾರ್ಯನಿರ್ವಹಣ ಅಧಿಕಾರಿ ಮಂಜುನಾಥ್ ಅದೇಶ ನೀಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಗ್ರಾಮ ಪಂಚಾಯಿತಿ ಹೈಕೋರ್ಟ್ ಮೊರೆಹೋಗಿತ್ತು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಪಡಿಸಿ, ಈ ವಿವಾದವನ್ನು ಗ್ರಾಮ ಪಂಚಾಯಿತಿಯೇ ನಿರ್ಧಾರ ಕೈಗೊಳ್ಳುವಂತೆ ಬಿದರಹಳ್ಳಿ ಗ್ರಾಮ ಪಂಚಾಯಿತಿಗೆ ಆದೇಶ ನೀಡಿತ್ತು. ನಂತರ ಗ್ರಾಮ ಸಭೆಯಲ್ಲಿ ದಾಖಲೆಗಳನ್ನೆಲ್ಲ ಪರಿಶೀಲಿಸಲಾಯಿತು. ನಾರಾಯಣರೆಡ್ಡಿ ಅವರು, ಜಾಗದ ಸಂಬಂಧ ಯಾವುದೇ ಅಧಿಕೃತ ದಾಖಲೆಗಳನ್ನು ಸಲ್ಲಿಸಿರಲಿಲ್ಲ ಎಂಬುದು ದೃಢಪಟ್ಟಿತು.</p>.<p>‘ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ನಿರ್ಣಯದಂತೆ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಆಸ್ತಿಯನ್ನು ಸಂರಕ್ಷಣೆ ಮಾಡಲಾಗಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಮುನಿಯಪ್ಪ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ್ದ ಸುಮಾರು ₹8 ಕೋಟಿ ಮೌಲ್ಯದ ಗ್ರಾಮಠಾಣಾ ಆಸ್ತಿಯನ್ನು ಬಿದರಹಳ್ಳಿ ಗ್ರಾಮ ಪಂಚಾಯಿತಿ ಸಂರಕ್ಷಿಸಿದೆ.</p>.<p>ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಅಗ್ರಹಾರ ಗ್ರಾಮದಲ್ಲಿ ಸರ್ಕಾರಿ ಸ್ವತ್ತಿನ ಸಂಖ್ಯೆ 51/1 ರಲ್ಲಿ 125×170 ಅಡಿ ವಿಸ್ತೀರ್ಣದ ಜಾಗವನ್ನು ಬಿದರಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಕಾರಣಿ ಸಮಿತಿ ನಿರ್ಧಾರದಂತೆ ರಕ್ಷಣೆ ಮಾಡಲಾಗಿದೆ.</p>.<p>ನಕಲಿ ದಾಖಲೆಗಳನ್ನು ಸೃಷ್ಟಿಸಿ ಗ್ರಾಮ ಠಾಣಾ ಆಸ್ತಿಯನ್ನು ಪಡೆದುಕೊಂಡಿದ್ದ ನಾರಾಯಣರೆಡ್ಡಿ ಅವರ ಹೆಸರಿಗೆ ಖಾತೆ ಮಾಡಿಕೊಡಲು ಹಿಂದಿನ ಕಾರ್ಯನಿರ್ವಹಣ ಅಧಿಕಾರಿ ಮಂಜುನಾಥ್ ಅದೇಶ ನೀಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಗ್ರಾಮ ಪಂಚಾಯಿತಿ ಹೈಕೋರ್ಟ್ ಮೊರೆಹೋಗಿತ್ತು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಪಡಿಸಿ, ಈ ವಿವಾದವನ್ನು ಗ್ರಾಮ ಪಂಚಾಯಿತಿಯೇ ನಿರ್ಧಾರ ಕೈಗೊಳ್ಳುವಂತೆ ಬಿದರಹಳ್ಳಿ ಗ್ರಾಮ ಪಂಚಾಯಿತಿಗೆ ಆದೇಶ ನೀಡಿತ್ತು. ನಂತರ ಗ್ರಾಮ ಸಭೆಯಲ್ಲಿ ದಾಖಲೆಗಳನ್ನೆಲ್ಲ ಪರಿಶೀಲಿಸಲಾಯಿತು. ನಾರಾಯಣರೆಡ್ಡಿ ಅವರು, ಜಾಗದ ಸಂಬಂಧ ಯಾವುದೇ ಅಧಿಕೃತ ದಾಖಲೆಗಳನ್ನು ಸಲ್ಲಿಸಿರಲಿಲ್ಲ ಎಂಬುದು ದೃಢಪಟ್ಟಿತು.</p>.<p>‘ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ನಿರ್ಣಯದಂತೆ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಆಸ್ತಿಯನ್ನು ಸಂರಕ್ಷಣೆ ಮಾಡಲಾಗಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಮುನಿಯಪ್ಪ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>