<p><strong>ಬೆಂಗಳೂರು:</strong> ಚಿನ್ನದಂಗಡಿ ಮಾಲಕಿಯಿಂದ ಚಿನ್ನಾಭರಣ ಪಡೆದು ವಂಚಿಸಿದ್ದ ಪ್ರಕರಣದ ಮತ್ತೊಬ್ಬ ಆರೋಪಿ ಕನ್ನಡದ ನಟ ಧರ್ಮೇಂದ್ರ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.</p>.<p>ಮೊದಲ ಆರೋಪಿ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಹರೀಶ್ ಅವರನ್ನು ಶನಿವಾರ ಚಂದ್ರಾಲೇಔಟ್ ಪೊಲೀಸರು ಬಂಧಿಸಿದರು. ಇದರ ಬೆನ್ನಲ್ಲೇ ಧರ್ಮೇಂದ್ರ ಅವರು ತಮ್ಮ ಮೊಬೈಲ್ ಫೋನ್ ಸ್ವಿಚ್ಡ್ಆಫ್ ಮಾಡಿಕೊಂಡಿದ್ದಾರೆ.</p>.<p>ಪೊಲೀಸರು ಆರೋಪಿಗೆ ನೋಟಿಸ್ ನೀಡಲು ಮನೆಗೆ ಹೋದಾಗ ಅಲ್ಲಿರಲಿಲ್ಲ. ಹಾಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಅನ್ನು ಅವರ ಮನೆ ಗೋಡೆಗೆ ಅಂಟಿಸಿದ್ದರು. ಆದರೆ ಅವರು ವಿಚಾರಣೆಗೆ ಗೈರು ಹಾಜರಾಗಿದ್ದು, ಪೊಲೀಸರು ಅವರ ಪತ್ತೆ ಕಾರ್ಯ ಮುಂದುವರಿಸಿದ್ದಾರೆ.</p>.<p><strong>ವಂಚನೆ ಆರೋಪ</strong>: ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರಿಶ್ ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿ ಬಂದಿದೆ.</p>.<p>ನಿವೇಶನಗಳನ್ನು ಮಾರಾಟ ಮಾಡಿಸುವುದಾಗಿ ಹೇಳಿ ₹5 ಕೋಟಿ ವಂಚನೆ ಮಾಡಿದ್ದಾರೆ ಎಂದು ಚಿನ್ನದ ವ್ಯಾಪಾರಿ ಸೋನು ಲಮಾಣಿ ಅವರು ಐಶ್ವರ್ಯಾ ಗೌಡ ದಂಪತಿ ವಿರುದ್ಧ ಆರೋಪಿಸಿದ್ದು, ಈ ಸಂಬಂಧ ದಾಖಲೆಗಳ ಸಮೇತ ಜೆ.ಪಿ.ನಗರ ಠಾಣೆಗೆ ದೂರು ನೀಡುವುದಾಗಿ ವಿಡಿಯೊದಲ್ಲಿ ಹೇಳಿಕೆ ನೀಡಿದ್ದಾರೆ.</p>.<p>ಈ ನಡುವೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಧ್ವನಿಯಲ್ಲಿ ಆರ್.ಆರ್. ನಗರದ ರಾಜಕಾರಣಿಯೊಬ್ಬರ ಪುತ್ರ ಶ್ರೇಯಸ್ ಅವರೊಂದಿಗೆ ನಟ ಧರ್ಮೇಂದ್ರ ಅವರು ರಸ್ತೆ ಕಾಮಗಾರಿಗೆ ಗುತ್ತಿಗೆ ನೀಡಲು ಹಣಕ್ಕೆ ಬೇಡಿಕೆ ಇರಿಸಿರುವ ಕುರಿತು ನಡೆಸಿರುವ ಸಂಭಾಷಣೆ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.ನಟ ಧರ್ಮ ನಾಪತ್ತೆ: ಇಬ್ಬರಿಗೆ ನೋಟಿಸ್ ನೀಡಿದ ಪೊಲೀಸರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿನ್ನದಂಗಡಿ ಮಾಲಕಿಯಿಂದ ಚಿನ್ನಾಭರಣ ಪಡೆದು ವಂಚಿಸಿದ್ದ ಪ್ರಕರಣದ ಮತ್ತೊಬ್ಬ ಆರೋಪಿ ಕನ್ನಡದ ನಟ ಧರ್ಮೇಂದ್ರ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.</p>.<p>ಮೊದಲ ಆರೋಪಿ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಹರೀಶ್ ಅವರನ್ನು ಶನಿವಾರ ಚಂದ್ರಾಲೇಔಟ್ ಪೊಲೀಸರು ಬಂಧಿಸಿದರು. ಇದರ ಬೆನ್ನಲ್ಲೇ ಧರ್ಮೇಂದ್ರ ಅವರು ತಮ್ಮ ಮೊಬೈಲ್ ಫೋನ್ ಸ್ವಿಚ್ಡ್ಆಫ್ ಮಾಡಿಕೊಂಡಿದ್ದಾರೆ.</p>.<p>ಪೊಲೀಸರು ಆರೋಪಿಗೆ ನೋಟಿಸ್ ನೀಡಲು ಮನೆಗೆ ಹೋದಾಗ ಅಲ್ಲಿರಲಿಲ್ಲ. ಹಾಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಅನ್ನು ಅವರ ಮನೆ ಗೋಡೆಗೆ ಅಂಟಿಸಿದ್ದರು. ಆದರೆ ಅವರು ವಿಚಾರಣೆಗೆ ಗೈರು ಹಾಜರಾಗಿದ್ದು, ಪೊಲೀಸರು ಅವರ ಪತ್ತೆ ಕಾರ್ಯ ಮುಂದುವರಿಸಿದ್ದಾರೆ.</p>.<p><strong>ವಂಚನೆ ಆರೋಪ</strong>: ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರಿಶ್ ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿ ಬಂದಿದೆ.</p>.<p>ನಿವೇಶನಗಳನ್ನು ಮಾರಾಟ ಮಾಡಿಸುವುದಾಗಿ ಹೇಳಿ ₹5 ಕೋಟಿ ವಂಚನೆ ಮಾಡಿದ್ದಾರೆ ಎಂದು ಚಿನ್ನದ ವ್ಯಾಪಾರಿ ಸೋನು ಲಮಾಣಿ ಅವರು ಐಶ್ವರ್ಯಾ ಗೌಡ ದಂಪತಿ ವಿರುದ್ಧ ಆರೋಪಿಸಿದ್ದು, ಈ ಸಂಬಂಧ ದಾಖಲೆಗಳ ಸಮೇತ ಜೆ.ಪಿ.ನಗರ ಠಾಣೆಗೆ ದೂರು ನೀಡುವುದಾಗಿ ವಿಡಿಯೊದಲ್ಲಿ ಹೇಳಿಕೆ ನೀಡಿದ್ದಾರೆ.</p>.<p>ಈ ನಡುವೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಧ್ವನಿಯಲ್ಲಿ ಆರ್.ಆರ್. ನಗರದ ರಾಜಕಾರಣಿಯೊಬ್ಬರ ಪುತ್ರ ಶ್ರೇಯಸ್ ಅವರೊಂದಿಗೆ ನಟ ಧರ್ಮೇಂದ್ರ ಅವರು ರಸ್ತೆ ಕಾಮಗಾರಿಗೆ ಗುತ್ತಿಗೆ ನೀಡಲು ಹಣಕ್ಕೆ ಬೇಡಿಕೆ ಇರಿಸಿರುವ ಕುರಿತು ನಡೆಸಿರುವ ಸಂಭಾಷಣೆ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.ನಟ ಧರ್ಮ ನಾಪತ್ತೆ: ಇಬ್ಬರಿಗೆ ನೋಟಿಸ್ ನೀಡಿದ ಪೊಲೀಸರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>