‘ಜೆ.ಪಿ.ನಗರದ ನಿವಾಸಿಯಾಗಿರುವ ವೃದ್ಧೆ, ವಂಚನೆಗೆ ಸಂಬಂಧಪಟ್ಟಂತೆ ಪುಟ್ಟೇನಹಳ್ಳಿ ಠಾಣೆಗೆ ದೂರು ನೀಡಿದ್ದರು. ಅದರನ್ವಯ ದಾಖಲಾಗಿದ್ದ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಸಿಬಿಗೆ ವಹಿಸಲಾಗಿತ್ತು. ಆರೋಪಿಗಳಾದ ಭಾಸ್ಕರ್, ಅಭಿಷೇಕ್ ಗೌಡ, ಮಹೇಶ್, ಅರುಣ್ ಹಾಗೂ ಶಿವಕುಮಾರ್ನನ್ನು ಸೆರೆ ಹಿಡಿಯಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.