<p><strong>ಬೆಂಗಳೂರು: </strong>ಕೋವಿಡ್ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇರೆಗೆ ಯಲಹಂಕ ವಲಯದ ಕೊಡಿಗೆಹಳ್ಳಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್ಸಿ) ಇಬ್ಬರು ನೌಕರರನ್ನು ಬಿಬಿಎಂಪಿಯು ಸೇವೆಯಿಂದ ವಜಾ ಮಾಡಿದೆ. ಕೋವಿಡ್ ಪರೀಕ್ಷಾ ಕಾರ್ಯದ ಉಸ್ತುವಾರಿಯನ್ನು ಸಮರ್ಪಕವಾಗಿ ನಿರ್ವಹಿಸದ ಈ ಪಿಎಚ್ಸಿಯ ಆರೋಗ್ಯ ವೈದ್ಯಾಧಿಕಾರಿ ಡಾ.ಪ್ರೇಮಾನಂದ ಅವರನ್ನು ಪಾಲಿಕೆ ಅಮಾನತು ಮಾಡಿದೆ.</p>.<p>ಕೊಡಿಗೆಹಳ್ಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆಗಾಗಿ ಜನರ ಮೂಗಿನ ದ್ರವ ಸಂಗ್ರಹಿಸುವ ಕೆಲಸಕ್ಕೆ ತಾತ್ಕಾಲಿಕ ನೆಲೆಯಲ್ಲಿ ನೇಮಕಗೊಂಡಿದ್ದ ನಾಗರಾಜು ಹಾಗೂ ಹೇಮಂತ್ ವಜಾಗೊಂಡವರು.</p>.<p>ಕೊಡಿಗೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನೌಕರರಿಬ್ಬರು ಕೋವಿಡ್ ಪರೀಕ್ಷೆಗಾಗಿ ಬಂದ ವ್ಯಕ್ತಿಗಳ ಮೂಗಿನ ದ್ರವವನ್ನು ಕಡ್ಡಿಯಿಂದ ಸಂಗ್ರಹಿಸದೆಯೇ, ಆ ಕಡ್ಡಿಗಳನ್ನು ವೈರಾಣು ರವಾನೆ ಪರಿಕರದಲ್ಲಿ (ವಿಟಿಎಂ) ಜೋಡಿಸುವ ಮೂಲಕ ವಂಚನೆ ನಡೆಸುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದನ್ನು ಪರಿಶೀಲಿಸಿದಾಗ ಮೂಗಿನ ದ್ರವ ಸಂಗ್ರಹಿಸುವ ಸಿಬ್ಬಂದಿ ತಪ್ಪೆಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು.</p>.<p><strong>ಎಫ್ಐಆರ್ ದಾಖಲು</strong></p>.<p>‘ನಾಗರಾಜು ಹಾಗೂ ಹೇಮಂತ್ ತಾವು ಪಿಎಚ್ಸಿಯಲ್ಲಿ ಇಲ್ಲದೇ ಇದ್ದಾಗ ಕೋವಿಡ್ ಪರೀಕ್ಷೆ ನಡೆಸುವಾಗ ಅಕ್ರಮ ನಡೆಸಿದ್ದಾರೆ’ ಎಂದು ಆರೊಪಿಸಿ ಆರೋಗ್ಯ ವೈದ್ಯಾಧಿಕಾರಿ ಡಾ.ಪ್ರೇಮಾನಂದ ಅವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇರೆಗೆ ಯಲಹಂಕ ವಲಯದ ಕೊಡಿಗೆಹಳ್ಳಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್ಸಿ) ಇಬ್ಬರು ನೌಕರರನ್ನು ಬಿಬಿಎಂಪಿಯು ಸೇವೆಯಿಂದ ವಜಾ ಮಾಡಿದೆ. ಕೋವಿಡ್ ಪರೀಕ್ಷಾ ಕಾರ್ಯದ ಉಸ್ತುವಾರಿಯನ್ನು ಸಮರ್ಪಕವಾಗಿ ನಿರ್ವಹಿಸದ ಈ ಪಿಎಚ್ಸಿಯ ಆರೋಗ್ಯ ವೈದ್ಯಾಧಿಕಾರಿ ಡಾ.ಪ್ರೇಮಾನಂದ ಅವರನ್ನು ಪಾಲಿಕೆ ಅಮಾನತು ಮಾಡಿದೆ.</p>.<p>ಕೊಡಿಗೆಹಳ್ಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆಗಾಗಿ ಜನರ ಮೂಗಿನ ದ್ರವ ಸಂಗ್ರಹಿಸುವ ಕೆಲಸಕ್ಕೆ ತಾತ್ಕಾಲಿಕ ನೆಲೆಯಲ್ಲಿ ನೇಮಕಗೊಂಡಿದ್ದ ನಾಗರಾಜು ಹಾಗೂ ಹೇಮಂತ್ ವಜಾಗೊಂಡವರು.</p>.<p>ಕೊಡಿಗೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನೌಕರರಿಬ್ಬರು ಕೋವಿಡ್ ಪರೀಕ್ಷೆಗಾಗಿ ಬಂದ ವ್ಯಕ್ತಿಗಳ ಮೂಗಿನ ದ್ರವವನ್ನು ಕಡ್ಡಿಯಿಂದ ಸಂಗ್ರಹಿಸದೆಯೇ, ಆ ಕಡ್ಡಿಗಳನ್ನು ವೈರಾಣು ರವಾನೆ ಪರಿಕರದಲ್ಲಿ (ವಿಟಿಎಂ) ಜೋಡಿಸುವ ಮೂಲಕ ವಂಚನೆ ನಡೆಸುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದನ್ನು ಪರಿಶೀಲಿಸಿದಾಗ ಮೂಗಿನ ದ್ರವ ಸಂಗ್ರಹಿಸುವ ಸಿಬ್ಬಂದಿ ತಪ್ಪೆಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು.</p>.<p><strong>ಎಫ್ಐಆರ್ ದಾಖಲು</strong></p>.<p>‘ನಾಗರಾಜು ಹಾಗೂ ಹೇಮಂತ್ ತಾವು ಪಿಎಚ್ಸಿಯಲ್ಲಿ ಇಲ್ಲದೇ ಇದ್ದಾಗ ಕೋವಿಡ್ ಪರೀಕ್ಷೆ ನಡೆಸುವಾಗ ಅಕ್ರಮ ನಡೆಸಿದ್ದಾರೆ’ ಎಂದು ಆರೊಪಿಸಿ ಆರೋಗ್ಯ ವೈದ್ಯಾಧಿಕಾರಿ ಡಾ.ಪ್ರೇಮಾನಂದ ಅವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>