‘ವಿಎಚ್ಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅದನ್ನು ತಿಳಿದುಕೊಂಡಿದ್ದ ರಾಘವೇಂದ್ರ, ನಕಲಿ ಗುರುತಿನ ಚೀಟಿ ಬಳಸಿಕೊಂಡು ಅಲೋಕ್ಕುಮಾರ್ ಅವರನ್ನು ಭೇಟಿಯಾಗಿ ಫೋಟೊ ತೆಗೆಸಿಕೊಂಡಿದ್ದ. ಇದು ತಿಳಿಯುತ್ತಿದ್ದಂತೆ ದೂರುದಾರ ಬಸವರಾಜ್ ಪ್ರಶ್ನಿಸಿದ್ದರು. ಅಷ್ಟಕ್ಕೆ ರಾಘವೇಂದ್ರ, ಬಸವರಾಜ್ಗೆ ಕರೆ ಮಾಡಿ ಬೆದರಿಸಿದ್ದನೆಂಬುದು ದೂರಿನಲ್ಲಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.