<p><strong>ಬೆಂಗಳೂರು: </strong>ಸಚಿವ ಕೆ.ಜೆ. ಜಾರ್ಜ್ ಪರಿಚಯವಿದೆ. ಅವರ ಮೂಲಕ ವಾಹನ ಚಾಲನಾ ಪರವಾನಗಿ (ಡಿಎಲ್), ಪ್ಯಾನ್ ಕಾರ್ಡ್, ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ, ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ವಂಚಿಸುತ್ತಿದ್ದ ವ್ಯಕ್ತಿಯೊಬ್ಬನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ನಾಗನಾಥಪುರ ನಿವಾಸಿ ಸುಧಾಕರ್ ಅಲಿಯಾಸ್ ಕಣ್ಣನ್ ಬಂಧಿತ ಆರೋಪಿ.</p>.<p>ಕಾರ್ಯಕ್ರಮವೊಂದರಲ್ಲಿ ಜಾರ್ಜ್ ಜೊತೆ ಫೋಟೊ ತೆಗೆಸಿಕೊಂಡಿದ್ದ ಸುಧಾಕರ್, ಅದನ್ನು ತೋರಿಸಿ ವಂಚಿಸುತ್ತಿದ್ದ ಎಂದು ಆರೋಪಿಸಲಾಗಿದೆ.</p>.<p>‘₹ 50 ಸಾವಿರ ನೀಡಿದರೆ ಕ್ರೈಸ್ಟ್ ಅಕಾಡೆಮಿ ಕಾಲೇಜಿನಲ್ಲಿ ಡೊನೇಷನ್ ಇಲ್ಲದೆ ಮಗನಿಗೆ ಪ್ರವೇಶ ಕೊಡಿಸುವುದಾಗಿ ಸುಧಾಕರ್ ನನ್ನನ್ನು ನಂಬಿಸಿದ್ದ. ಆದರೆ, ಸೀಟು ಮಾಡಿಸಿ ಕೊಟ್ಟಿಲ್ಲ. ಆದರೆ, ₹ 25 ಸಾವಿರ ಕೊಡಬೇಕೆಂದು ಒತ್ತಾಯಿಸಿದ್ದ. ಹಣ ಕೊಡಲು ನಿರಾಕರಿಸಿದಾಗ, ಮನೆಗೆ ಬಂದು 26 ಗ್ರಾಂ ತೂಕದ ಚಿನ್ನದ ಸರ ಕಳವು ಮಾಡಿದ್ದಾನೆ’ ಎಂದು ನಾಗರಾಜ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಈತ ಕೆಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಚಿವ ಕೆ.ಜೆ. ಜಾರ್ಜ್ ಪರಿಚಯವಿದೆ. ಅವರ ಮೂಲಕ ವಾಹನ ಚಾಲನಾ ಪರವಾನಗಿ (ಡಿಎಲ್), ಪ್ಯಾನ್ ಕಾರ್ಡ್, ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ, ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ವಂಚಿಸುತ್ತಿದ್ದ ವ್ಯಕ್ತಿಯೊಬ್ಬನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ನಾಗನಾಥಪುರ ನಿವಾಸಿ ಸುಧಾಕರ್ ಅಲಿಯಾಸ್ ಕಣ್ಣನ್ ಬಂಧಿತ ಆರೋಪಿ.</p>.<p>ಕಾರ್ಯಕ್ರಮವೊಂದರಲ್ಲಿ ಜಾರ್ಜ್ ಜೊತೆ ಫೋಟೊ ತೆಗೆಸಿಕೊಂಡಿದ್ದ ಸುಧಾಕರ್, ಅದನ್ನು ತೋರಿಸಿ ವಂಚಿಸುತ್ತಿದ್ದ ಎಂದು ಆರೋಪಿಸಲಾಗಿದೆ.</p>.<p>‘₹ 50 ಸಾವಿರ ನೀಡಿದರೆ ಕ್ರೈಸ್ಟ್ ಅಕಾಡೆಮಿ ಕಾಲೇಜಿನಲ್ಲಿ ಡೊನೇಷನ್ ಇಲ್ಲದೆ ಮಗನಿಗೆ ಪ್ರವೇಶ ಕೊಡಿಸುವುದಾಗಿ ಸುಧಾಕರ್ ನನ್ನನ್ನು ನಂಬಿಸಿದ್ದ. ಆದರೆ, ಸೀಟು ಮಾಡಿಸಿ ಕೊಟ್ಟಿಲ್ಲ. ಆದರೆ, ₹ 25 ಸಾವಿರ ಕೊಡಬೇಕೆಂದು ಒತ್ತಾಯಿಸಿದ್ದ. ಹಣ ಕೊಡಲು ನಿರಾಕರಿಸಿದಾಗ, ಮನೆಗೆ ಬಂದು 26 ಗ್ರಾಂ ತೂಕದ ಚಿನ್ನದ ಸರ ಕಳವು ಮಾಡಿದ್ದಾನೆ’ ಎಂದು ನಾಗರಾಜ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಈತ ಕೆಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>