<p><strong>ಬೆಂಗಳೂರು:</strong> ಪುಲಕೇಶಿನಗರ ಉಪ ವಿಭಾಗದ ವ್ಯಾಪ್ತಿಯ ಫ್ರೇಜರ್ ಟೌನ್ ಕೆಂಚಪ್ಪ ಅಡ್ಡರಸ್ತೆಯಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಮಹಡಿಗಳ ತೆರವು ಕಾರ್ಯಾಚರಣೆಯನ್ನು ಬೆಂಗಳೂರು ಉತ್ತರ ನಗರ ಪಾಲಿಕೆ ಅಧಿಕಾರಿಗಳು ಆರಂಭಿಸಿದ್ದಾರೆ.</p>.<p>ನೆಲ ಮತ್ತು ಎರಡು ಮಹಡಿಗಳನ್ನು ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಲಾಗಿತ್ತು. ಯಾವುದೇ ಪರವಾನಗಿ ಪಡೆಯದೇ ಹೆಚ್ಚುವರಿ ಎರಡು ಮಹಡಿಗಳನ್ನು ನಿರ್ಮಿಸಲಾಗಿತ್ತು. ಪ್ಯಾರಫಿಟ್ ಗೋಡೆಗಳನ್ನು ಮತ್ತು ಹೆಚ್ಚುವರಿ ಮಹಡಿಗಳನ್ನು ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ.</p>.<p>ನಿರ್ಮಾಣ ಕಾರ್ಯವನ್ನು ಅರ್ಧದಲ್ಲಿ ನಿಲ್ಲಿಸುವಂತೆ, ಅನಧಿಕೃತ ಅಂತಸ್ತುಗಳನ್ನು ತೆರವುಗೊಳಿಸುವಂತೆ ಸ್ವತ್ತು ಸಂಖ್ಯೆ 18/3ರ ಕಟ್ಟಡದ ಮಾಲೀಕರಿಗೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಲವು ಬಾರಿ ನೋಟಿಸ್ ನೀಡಿದ್ದರು. ಆದರೂ ಕಟ್ಟಡ ನಿರ್ಮಾಣ ಕಾರ್ಯ ಮುಂದುವರಿಸಿದ್ದರು.</p>.<p>ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ನಿರ್ದೇಶನದಂತೆ ಪುಲಕೇಶಿನಗರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಿಪ್ಪೇಸ್ವಾಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿ ವಡ್ಡರ್, ಪೋಲೀಸ್ ಸಿಬ್ಬಂದಿ ಉಪಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಿಬಿಎ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪುಲಕೇಶಿನಗರ ಉಪ ವಿಭಾಗದ ವ್ಯಾಪ್ತಿಯ ಫ್ರೇಜರ್ ಟೌನ್ ಕೆಂಚಪ್ಪ ಅಡ್ಡರಸ್ತೆಯಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಮಹಡಿಗಳ ತೆರವು ಕಾರ್ಯಾಚರಣೆಯನ್ನು ಬೆಂಗಳೂರು ಉತ್ತರ ನಗರ ಪಾಲಿಕೆ ಅಧಿಕಾರಿಗಳು ಆರಂಭಿಸಿದ್ದಾರೆ.</p>.<p>ನೆಲ ಮತ್ತು ಎರಡು ಮಹಡಿಗಳನ್ನು ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಲಾಗಿತ್ತು. ಯಾವುದೇ ಪರವಾನಗಿ ಪಡೆಯದೇ ಹೆಚ್ಚುವರಿ ಎರಡು ಮಹಡಿಗಳನ್ನು ನಿರ್ಮಿಸಲಾಗಿತ್ತು. ಪ್ಯಾರಫಿಟ್ ಗೋಡೆಗಳನ್ನು ಮತ್ತು ಹೆಚ್ಚುವರಿ ಮಹಡಿಗಳನ್ನು ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ.</p>.<p>ನಿರ್ಮಾಣ ಕಾರ್ಯವನ್ನು ಅರ್ಧದಲ್ಲಿ ನಿಲ್ಲಿಸುವಂತೆ, ಅನಧಿಕೃತ ಅಂತಸ್ತುಗಳನ್ನು ತೆರವುಗೊಳಿಸುವಂತೆ ಸ್ವತ್ತು ಸಂಖ್ಯೆ 18/3ರ ಕಟ್ಟಡದ ಮಾಲೀಕರಿಗೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಲವು ಬಾರಿ ನೋಟಿಸ್ ನೀಡಿದ್ದರು. ಆದರೂ ಕಟ್ಟಡ ನಿರ್ಮಾಣ ಕಾರ್ಯ ಮುಂದುವರಿಸಿದ್ದರು.</p>.<p>ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ನಿರ್ದೇಶನದಂತೆ ಪುಲಕೇಶಿನಗರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಿಪ್ಪೇಸ್ವಾಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿ ವಡ್ಡರ್, ಪೋಲೀಸ್ ಸಿಬ್ಬಂದಿ ಉಪಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಿಬಿಎ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>