ಬೆಂಗಳೂರು: ಅಬಲಾಶ್ರಮ, ಭಾರತೀಯ ಆಯುರ್ವೇದ ಪ್ರತಿಷ್ಠಾನ ಹಾಗೂ ಸ್ವಸ್ಥ ಸಮೃದ್ಧ ಭಾರತ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಉಚಿತ ಮಧುಮೇಹ ತಪಾಸಣಾ ಶಿಬಿರ ಹಾಗೂ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.
ನವೆಂಬರ್ 14ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಅಬಲಾಶ್ರಮದ ಸಭಾಂಗಣದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ.
‘ನೋಂದಣಿ ಉಚಿತವಾಗಿದ್ದು, ಶಿಬಿರದಲ್ಲಿ ಭಾಗವಹಿಸುವವರೆಲ್ಲಾ ಹೆಸರು ನೋಂದಾಯಿಸುವುದು ಕಡ್ಡಾಯ’ ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ 8050010100 ಅಥವಾ 9742013344ಗೆ ಸಂಪರ್ಕಿಸಬಹುದು.