<p><strong>ಬೆಂಗಳೂರು:</strong> ಡಿಕನ್ಸನ್ ರಸ್ತೆಯಲ್ಲಿರುವ ‘ಮೇಜರ್ ಸಂದೀಪ್ ಉನ್ನಿಕೃಷ್ಣನ್ ಎನ್ಕ್ಲೇವ್’ ವಸತಿ ಸಮುಚ್ಚಯಗಳ ಕಾಂಪೌಂಡ್ ಮೇಲೆ ಕಿಡಿಗೇಡಿಗಳು ‘ಫ್ರೀ ಕಾಶ್ಮೀರ’ ಎಂಬ ಬರಹ ಬರೆದಿದ್ದು, ಅವರ ಪತ್ತೆಗಾಗಿ ಪೊಲೀಸರು ಹುಡು ಕಾಟ ನಡೆಸುತ್ತಿದ್ದಾರೆ.</p>.<p>ಸೇನೆ ಅಧಿಕಾರಿಗಳು ಹಾಗೂ ಅವರ ಕುಟುಂಬದವರುವಸತಿ ಸಮುಚ್ಚಯ ಗಳಲ್ಲಿ ವಾಸವಿದ್ದಾರೆ. ಅದರ ಕಾಂಪೌಂ ಡ್ಗೆ ಸೋಮವಾರ ರಾತ್ರಿ ಕಿಡಿಗೇಡಿಗಳು ಬರಹ ಬರೆದು ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಹಲಸೂರು ಪೊಲೀಸರು, ಬರಹದ ಮೇಲೆ ಬಣ್ಣ ಬಳಿದು ಅಳಿಸಿ ಹಾಕಿದರು.</p>.<p>‘ಶಾಂತಿ ಕದಡುವ ಉದ್ದೇಶದಿಂದ ಕಿಡಿಗೇಡಿಗಳು ಕೃತ್ಯ ಎಸಗಿರುವ ಸಾಧ್ಯತೆ ಇದೆ.ಸಾರ್ವಜನಿಕ ಸ್ಥಳವನ್ನು ವಿರೂ ಪಗೊಳಿಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಡಿಸಿಪಿ ಎಸ್.ಡಿ.ಶರಣಪ್ಪ ಹೇಳಿದರು.</p>.<p><strong>ಚರ್ಚ್ಸ್ಟ್ರೀಟ್ ಪ್ರಕರಣದಲ್ಲಿ ಪತ್ತೆಯಾಗದ ಆರೋಪಿಗಳು:</strong> ಚರ್ಚ್ ಸ್ಟ್ರೀಟ್ನಲ್ಲಿರುವ ಮಳಿಗೆಗಳ ಬಾಗಿಲು ಮೇಲೆಯೂ ಇತ್ತೀಚೆಗೆ, ‘ಫ್ರೀ ಕಾಶ್ಮೀರ’ ಬರಹ ಬರೆಯಲಾಗಿತ್ತು. ಇದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರೂ ಪ್ರತಿಭಟನೆಯನ್ನೂ ನಡೆಸಿದ್ದರು. ಬರಹ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ಆರೋಪಿಗಳನ್ನೂ ಪತ್ತೆ ಮಾಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಡಿಕನ್ಸನ್ ರಸ್ತೆಯಲ್ಲಿರುವ ‘ಮೇಜರ್ ಸಂದೀಪ್ ಉನ್ನಿಕೃಷ್ಣನ್ ಎನ್ಕ್ಲೇವ್’ ವಸತಿ ಸಮುಚ್ಚಯಗಳ ಕಾಂಪೌಂಡ್ ಮೇಲೆ ಕಿಡಿಗೇಡಿಗಳು ‘ಫ್ರೀ ಕಾಶ್ಮೀರ’ ಎಂಬ ಬರಹ ಬರೆದಿದ್ದು, ಅವರ ಪತ್ತೆಗಾಗಿ ಪೊಲೀಸರು ಹುಡು ಕಾಟ ನಡೆಸುತ್ತಿದ್ದಾರೆ.</p>.<p>ಸೇನೆ ಅಧಿಕಾರಿಗಳು ಹಾಗೂ ಅವರ ಕುಟುಂಬದವರುವಸತಿ ಸಮುಚ್ಚಯ ಗಳಲ್ಲಿ ವಾಸವಿದ್ದಾರೆ. ಅದರ ಕಾಂಪೌಂ ಡ್ಗೆ ಸೋಮವಾರ ರಾತ್ರಿ ಕಿಡಿಗೇಡಿಗಳು ಬರಹ ಬರೆದು ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಹಲಸೂರು ಪೊಲೀಸರು, ಬರಹದ ಮೇಲೆ ಬಣ್ಣ ಬಳಿದು ಅಳಿಸಿ ಹಾಕಿದರು.</p>.<p>‘ಶಾಂತಿ ಕದಡುವ ಉದ್ದೇಶದಿಂದ ಕಿಡಿಗೇಡಿಗಳು ಕೃತ್ಯ ಎಸಗಿರುವ ಸಾಧ್ಯತೆ ಇದೆ.ಸಾರ್ವಜನಿಕ ಸ್ಥಳವನ್ನು ವಿರೂ ಪಗೊಳಿಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಡಿಸಿಪಿ ಎಸ್.ಡಿ.ಶರಣಪ್ಪ ಹೇಳಿದರು.</p>.<p><strong>ಚರ್ಚ್ಸ್ಟ್ರೀಟ್ ಪ್ರಕರಣದಲ್ಲಿ ಪತ್ತೆಯಾಗದ ಆರೋಪಿಗಳು:</strong> ಚರ್ಚ್ ಸ್ಟ್ರೀಟ್ನಲ್ಲಿರುವ ಮಳಿಗೆಗಳ ಬಾಗಿಲು ಮೇಲೆಯೂ ಇತ್ತೀಚೆಗೆ, ‘ಫ್ರೀ ಕಾಶ್ಮೀರ’ ಬರಹ ಬರೆಯಲಾಗಿತ್ತು. ಇದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರೂ ಪ್ರತಿಭಟನೆಯನ್ನೂ ನಡೆಸಿದ್ದರು. ಬರಹ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ಆರೋಪಿಗಳನ್ನೂ ಪತ್ತೆ ಮಾಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>