ಬೆಂಗಳೂರು: ನಗರದ ಚರ್ಚ್ಸ್ಟ್ರೀಟ್ನಲ್ಲಿಗೋಡೆಗಳ ಮೇಲೆ 'ಫ್ರೀ ಕಾಶ್ಮೀರ' ಎಂದುಬರೆಯಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಕಾಯ್ದೆ ಜಾರಿಗೆ ಬೆಂಬಲ ಇಲ್ಲ. ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬರಹಗಳನ್ನು ಬರೆಯಲಾಗಿದೆ.
‘ಬಿಜೆಪಿ ಕ್ಯಾನ್ಸರ್ ಇದ್ದಂತೆ. ಅದು ನಿಮ್ಮನ್ನು ಕೊಲ್ಲುವ ಮೊದಲು ನೀವು ಅದನ್ನು ಕೊಲ್ಲಿ. ನಾನು ನನ್ನ ದಾಖಲೆಗಳನ್ನು ತೋರಿಸುವುದಿಲ್ಲ’ ಎಂದು ಬರೆಯಲಾಗಿದೆ.
ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಜೊತೆಗೆ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.