<p><strong>ಬೆಂಗಳೂರು:</strong> ಶಿಕ್ಷಕರ ದಿನಾಚರಣೆ ಪ್ರಯುಕ್ತ ಇಲ್ಲಿನ ಸ್ಪರ್ಶ್ ಆಸ್ಪತ್ರೆಗಳ ಸಮೂಹದ ದತ್ತಿ ವಿಭಾಗದ ಸ್ಪರ್ಶ್ ಫೌಂಡೇಶನ್ ನೂರಕ್ಕೂ ಅಧಿಕ ನಿವೃತ್ತ ಶಿಕ್ಷಕರಿಗೆ ಉಚಿತವಾಗಿ ಮಂಡಿ ಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಿತು. </p>.<p>ನಗರದಲ್ಲಿ ಹಮ್ಮಿಕೊಂಡ ‘ಗುರುನಮನ’ ಕಾರ್ಯಕ್ರಮದಡಿ ಈ ಕಾರ್ಯ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಚಾಲನೆ ನೀಡಿ ಮಾತನಾಡಿದರು.</p>.<p>‘ಮೊಣಕಾಲು ನೋವು ಮತ್ತು ಸಂಧಿವಾತವು ವ್ಯಕ್ತಿಯನ್ನು ದುರ್ಬಲಗೊಳಿಸುತ್ತದೆ. ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸಿಸುತ್ತದೆ. ಈ ರೀತಿಯ ಉದಾತ್ತ ಯೋಜನೆಗಳು ಶಿಕ್ಷಕರ ಜೀವನದ ಗುಣಮಟ್ಟವನ್ನು ಸುಧಾರಿಸುತ್ತವೆ. ಗುರು ನಮನದಂತಹ ಸಾಮಾಜಿಕ ಬದಲಾವಣೆಯ ಕ್ರಮಗಳನ್ನು ಅಳವಡಿಸಿಕೊಳ್ಳಲು ಮುಂದೆ ಬರುವ ವೈದ್ಯರು ಮತ್ತು ಆರೋಗ್ಯ ಸೇವಾ ಸಂಸ್ಥೆಗಳಿಗೆ ಸರ್ಕಾರದ ವತಿಯಿಂದ ಉತ್ತೇಜನ ನೀಡಲಾಗುವುದು’ ಎಂದು ಹೇಳಿದರು.</p>.<p>ಸ್ಪರ್ಶ್ ಆಸ್ಪತ್ರೆಯ ಅಧ್ಯಕ್ಷ ಡಾ.ಶರಣ್ ಶಿವರಾಜ್ ಪಾಟೀಲ, ‘ವ್ಯಕ್ತಿಯನ್ನು ಉತ್ತಮ ನಾಗರಿಕನನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಯುವ ಮನಸ್ಸುಗಳನ್ನು ಮತ್ತು ನಮ್ಮ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಅವರ ಕೊಡುಗೆ ಅಪಾರ. ಹಾಗಾಗಿ, ಈ ಕಾರ್ಯಕ್ರಮವನ್ನು 2010ರಲ್ಲಿ ಪ್ರಾರಂಭಿಸಲಾಯಿತು’ ಎಂದು ತಿಳಿಸಿದರು.</p>.<p>‘ಸಂಧಿವಾತ ಸಮಸ್ಯೆಯಿಂದ ಅಂಗವಿಕಲತೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ದೇಶದಲ್ಲಿ 1.8 ಕೋಟಿಗೂ ಹೆಚ್ಚು ಜನರು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಸ್ಥಿ ಸಂಧಿವಾತವನ್ನು ಗುಣಪಡಿಸಬಹುದಾಗಿದೆ. ಆದರೆ, ಮಂಡಿ ಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆ ದುಬಾರಿಯಾಗಿರುವುದರಿಂದ ಇದು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು. </p>.<p>ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ ಅವರು ಸ್ಪರ್ಶ್ ಫೌಂಡೇಶನ್ನ ನೂತನ ವೆಬ್ಸೈಟ್ಗೆ ಚಾಲನೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಿಕ್ಷಕರ ದಿನಾಚರಣೆ ಪ್ರಯುಕ್ತ ಇಲ್ಲಿನ ಸ್ಪರ್ಶ್ ಆಸ್ಪತ್ರೆಗಳ ಸಮೂಹದ ದತ್ತಿ ವಿಭಾಗದ ಸ್ಪರ್ಶ್ ಫೌಂಡೇಶನ್ ನೂರಕ್ಕೂ ಅಧಿಕ ನಿವೃತ್ತ ಶಿಕ್ಷಕರಿಗೆ ಉಚಿತವಾಗಿ ಮಂಡಿ ಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಿತು. </p>.<p>ನಗರದಲ್ಲಿ ಹಮ್ಮಿಕೊಂಡ ‘ಗುರುನಮನ’ ಕಾರ್ಯಕ್ರಮದಡಿ ಈ ಕಾರ್ಯ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಚಾಲನೆ ನೀಡಿ ಮಾತನಾಡಿದರು.</p>.<p>‘ಮೊಣಕಾಲು ನೋವು ಮತ್ತು ಸಂಧಿವಾತವು ವ್ಯಕ್ತಿಯನ್ನು ದುರ್ಬಲಗೊಳಿಸುತ್ತದೆ. ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸಿಸುತ್ತದೆ. ಈ ರೀತಿಯ ಉದಾತ್ತ ಯೋಜನೆಗಳು ಶಿಕ್ಷಕರ ಜೀವನದ ಗುಣಮಟ್ಟವನ್ನು ಸುಧಾರಿಸುತ್ತವೆ. ಗುರು ನಮನದಂತಹ ಸಾಮಾಜಿಕ ಬದಲಾವಣೆಯ ಕ್ರಮಗಳನ್ನು ಅಳವಡಿಸಿಕೊಳ್ಳಲು ಮುಂದೆ ಬರುವ ವೈದ್ಯರು ಮತ್ತು ಆರೋಗ್ಯ ಸೇವಾ ಸಂಸ್ಥೆಗಳಿಗೆ ಸರ್ಕಾರದ ವತಿಯಿಂದ ಉತ್ತೇಜನ ನೀಡಲಾಗುವುದು’ ಎಂದು ಹೇಳಿದರು.</p>.<p>ಸ್ಪರ್ಶ್ ಆಸ್ಪತ್ರೆಯ ಅಧ್ಯಕ್ಷ ಡಾ.ಶರಣ್ ಶಿವರಾಜ್ ಪಾಟೀಲ, ‘ವ್ಯಕ್ತಿಯನ್ನು ಉತ್ತಮ ನಾಗರಿಕನನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಯುವ ಮನಸ್ಸುಗಳನ್ನು ಮತ್ತು ನಮ್ಮ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಅವರ ಕೊಡುಗೆ ಅಪಾರ. ಹಾಗಾಗಿ, ಈ ಕಾರ್ಯಕ್ರಮವನ್ನು 2010ರಲ್ಲಿ ಪ್ರಾರಂಭಿಸಲಾಯಿತು’ ಎಂದು ತಿಳಿಸಿದರು.</p>.<p>‘ಸಂಧಿವಾತ ಸಮಸ್ಯೆಯಿಂದ ಅಂಗವಿಕಲತೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ದೇಶದಲ್ಲಿ 1.8 ಕೋಟಿಗೂ ಹೆಚ್ಚು ಜನರು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಸ್ಥಿ ಸಂಧಿವಾತವನ್ನು ಗುಣಪಡಿಸಬಹುದಾಗಿದೆ. ಆದರೆ, ಮಂಡಿ ಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆ ದುಬಾರಿಯಾಗಿರುವುದರಿಂದ ಇದು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು. </p>.<p>ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ ಅವರು ಸ್ಪರ್ಶ್ ಫೌಂಡೇಶನ್ನ ನೂತನ ವೆಬ್ಸೈಟ್ಗೆ ಚಾಲನೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>