‘ಕೋವಿಡ್ ಕಾಣಿಸಿಕೊಂಡ ನಂತರ ಕ್ಯಾನ್ಸರ್ ರೋಗಿಗಳು ಆಸ್ಪತ್ರೆಯಲ್ಲಿ ಕೀಮೋಥೆರಪಿ ಸೇರಿದಂತೆ ವಿವಿಧ ಚಿಕಿತ್ಸೆಗಳನ್ನು ನಿಯಮಿತವಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ರೋಗಿಗಳು ಹಾಗೂ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದಾರೆ. ಕೆಲವರು ಮಾನಸಿಕವಾಗಿ ಕುಗ್ಗಿ, ಆತ್ಮಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ. ಅವರಿಗೆ ಧೈರ್ಯ ತುಂಬಲು ಟೆಲಿ ಮೆಡಿಸಿನ್ ಸೇವೆ ಪ್ರಾರಂಭಿಸಿದ್ದೇವೆ’ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಕಾಂಚನಾ ಬ್ಯಾನರ್ಜಿ ತಿಳಿಸಿದರು.