<p><strong>ಬೆಂಗಳೂರು:</strong> ಸ್ವಾತಂತ್ರ್ಯ ಉದ್ಯಾನವನ್ನು (ಫ್ರೀಡಂ ಪಾರ್ಕ್) ಸಮಗ್ರವಾಗಿ ಅಭಿವೃದ್ಧಿಪಡಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸ್ವಾತಂತ್ರ್ಯ ಉದ್ಯಾನಕ್ಕೆ ಶುಕ್ರವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ‘ವಿದ್ಯುತ್ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ, ವಾಯುವಿಹಾರಿಗಳ ನಡಿಗೆಗೆ ಸುಗಮ ಮಾರ್ಗ, ಭದ್ರತಾ ವ್ಯವಸ್ಥೆ ಸೇರಿದಂತೆ ಸಮಗ್ರ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>ವಾಯುವಿಹಾರಕ್ಕೆ ಬರುವ ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳ ನಡಿಗೆಗೆ ಸುಗಮ ಮಾರ್ಗ ಇರಬೇಕು. ಆಟದ ಉಪಕರಣಗಳೊಂದಿಗೆ ‘ಕಿಡ್ಸ್ ಪಾರ್ಕ್’ ನಿರ್ಮಿಸಬೇಕು. ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಉದ್ಯಾನದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.</p>.<p>ಹೆಚ್ಚು ಸಸಿಗಳನ್ನು ನೆಟ್ಟು ಅವುಗಳ ಪೋಷಣೆಗೆ ಕ್ರಮ ವಹಿಸಬೇಕು, ಒಣಗಿದ ಹಾಗೂ ಅಪಾಯಕಾರಿ ಮರ– ರೆಂಬೆ ಕೊಂಬೆಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದರು.</p>.<p>ಉದ್ಯಾನದ ಪಕ್ಕದಲ್ಲಿರುವ ಬಹುಮಹಡಿ ವಾಹನ ನಿಲುಗಡೆ ಸ್ಥಳವನ್ನು ಪರಿಶೀಲಿಸಿದ ಅವರು, ಈ ಕಟ್ಟಡದ ಮೇಲ್ಭಾಗದಲ್ಲಿರುವ ಜಾಗವನ್ನು, ವಸ್ತು ಪ್ರದರ್ಶನ ಮತ್ತು ಮಾರಾಟ ಹಾಗೂ ಇನ್ನಿತರ ವಾಣಿಜ್ಯ ಉದ್ದೇಶಗಳಿಗೆ ನೀಡಿ, ಆದಾಯ ಬರುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಸ್ವಾತಂತ್ರ್ಯ ಉದ್ಯಾನದ ಅಕ್ಕ ಪಕ್ಕದಲ್ಲಿನ ರಸ್ತೆಬದಿಯಲ್ಲಿ ಎಳೆನೀರು ಮಾರಾಟ ಮಾಡುತ್ತಿರುವವರು ತೆಂಗಿನ ಚಿಪ್ಪುಗಳನ್ನು ಅಲ್ಲಿಯೇ ಬಿಡದೆ, ವಿಲೇವಾರಿ ಮಾಡಬೇಕು. ಪಾದಚಾರಿ ಮಾರ್ಗಗಳನ್ನು ಸ್ವಚ್ಛವಾಗಿ ನಿರ್ವಹಿಸಬೇಕು ಎಂದರು.</p>.<p>ಹೆಚ್ಚುವರಿ ಆಯುಕ್ತ (ಅಭಿವೃದ್ಧಿ) ದಲ್ಜಿತ್ ಕುಮಾರ್, ಜಂಟಿ ಆಯುಕ್ತರಾದ ರಂಗನಾಥ್, ಹೇಮಂತ್ ಶರಣ್, ಮುಖ್ಯ ಎಂಜಿನಿಯರ್ಗಳಾದ ವಿಜಯ್ಕುಮಾರ್ ಹರಿದಾಸ್ ಮತ್ತು ಸುಗುಣಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸ್ವಾತಂತ್ರ್ಯ ಉದ್ಯಾನವನ್ನು (ಫ್ರೀಡಂ ಪಾರ್ಕ್) ಸಮಗ್ರವಾಗಿ ಅಭಿವೃದ್ಧಿಪಡಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸ್ವಾತಂತ್ರ್ಯ ಉದ್ಯಾನಕ್ಕೆ ಶುಕ್ರವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ‘ವಿದ್ಯುತ್ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ, ವಾಯುವಿಹಾರಿಗಳ ನಡಿಗೆಗೆ ಸುಗಮ ಮಾರ್ಗ, ಭದ್ರತಾ ವ್ಯವಸ್ಥೆ ಸೇರಿದಂತೆ ಸಮಗ್ರ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>ವಾಯುವಿಹಾರಕ್ಕೆ ಬರುವ ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳ ನಡಿಗೆಗೆ ಸುಗಮ ಮಾರ್ಗ ಇರಬೇಕು. ಆಟದ ಉಪಕರಣಗಳೊಂದಿಗೆ ‘ಕಿಡ್ಸ್ ಪಾರ್ಕ್’ ನಿರ್ಮಿಸಬೇಕು. ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಉದ್ಯಾನದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.</p>.<p>ಹೆಚ್ಚು ಸಸಿಗಳನ್ನು ನೆಟ್ಟು ಅವುಗಳ ಪೋಷಣೆಗೆ ಕ್ರಮ ವಹಿಸಬೇಕು, ಒಣಗಿದ ಹಾಗೂ ಅಪಾಯಕಾರಿ ಮರ– ರೆಂಬೆ ಕೊಂಬೆಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದರು.</p>.<p>ಉದ್ಯಾನದ ಪಕ್ಕದಲ್ಲಿರುವ ಬಹುಮಹಡಿ ವಾಹನ ನಿಲುಗಡೆ ಸ್ಥಳವನ್ನು ಪರಿಶೀಲಿಸಿದ ಅವರು, ಈ ಕಟ್ಟಡದ ಮೇಲ್ಭಾಗದಲ್ಲಿರುವ ಜಾಗವನ್ನು, ವಸ್ತು ಪ್ರದರ್ಶನ ಮತ್ತು ಮಾರಾಟ ಹಾಗೂ ಇನ್ನಿತರ ವಾಣಿಜ್ಯ ಉದ್ದೇಶಗಳಿಗೆ ನೀಡಿ, ಆದಾಯ ಬರುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಸ್ವಾತಂತ್ರ್ಯ ಉದ್ಯಾನದ ಅಕ್ಕ ಪಕ್ಕದಲ್ಲಿನ ರಸ್ತೆಬದಿಯಲ್ಲಿ ಎಳೆನೀರು ಮಾರಾಟ ಮಾಡುತ್ತಿರುವವರು ತೆಂಗಿನ ಚಿಪ್ಪುಗಳನ್ನು ಅಲ್ಲಿಯೇ ಬಿಡದೆ, ವಿಲೇವಾರಿ ಮಾಡಬೇಕು. ಪಾದಚಾರಿ ಮಾರ್ಗಗಳನ್ನು ಸ್ವಚ್ಛವಾಗಿ ನಿರ್ವಹಿಸಬೇಕು ಎಂದರು.</p>.<p>ಹೆಚ್ಚುವರಿ ಆಯುಕ್ತ (ಅಭಿವೃದ್ಧಿ) ದಲ್ಜಿತ್ ಕುಮಾರ್, ಜಂಟಿ ಆಯುಕ್ತರಾದ ರಂಗನಾಥ್, ಹೇಮಂತ್ ಶರಣ್, ಮುಖ್ಯ ಎಂಜಿನಿಯರ್ಗಳಾದ ವಿಜಯ್ಕುಮಾರ್ ಹರಿದಾಸ್ ಮತ್ತು ಸುಗುಣಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>