<p><strong>ಬೆಂಗಳೂರು: </strong>ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಸವಾರರೊಬ್ಬರಿಗೆ ನಗರದ ಸಂಚಾರ ಪೊಲೀಸರು, ₹42,500 ದಂಡ ವಿಧಿಸಿದ್ದಾರೆ.</p>.<p>ಸವಾರ ಅರುಣ್ಕುಮಾರ್ ಎಂಬಾತ ದ್ವಿಚಕ್ರ ವಾಹನದಲ್ಲಿ ಓಡಾಡುತ್ತಿದ್ದ. ಆತನನ್ನು ತಡೆದಿದ್ದ ಮಡಿವಾಳ ಸಂಚಾದ ಠಾಣೆ ಪಿಎಸ್ಐ ಶಿವರಾಜಕುಮಾರ್ ಅಂಗಡಿ ಅವರು ಹಳೇ ಪ್ರಕರಣಗಳ ತಪಾಸಣೆ ನಡೆಸಿದ್ದರು.</p>.<p>ಸವಾರ ಅರುಣ್ಕುಮಾರ್ ಇದುವರೆಗೂ 77 ಬಾರಿ ನಿಯಮ ಉಲ್ಲಂಘಿಸಿದ್ದು, ತಪಾಸಣೆ ವೇಳೆ ಗೊತ್ತಾಗಿತ್ತು. ಇನ್ಸ್ಪೆಕ್ಟರ್ ನವೀನ್ಕುಮಾರ್ ಅವರ ಮಾರ್ಗದರ್ಶನದಲ್ಲಿ ಸವಾರ ಅರುಣ್ಕುಮಾರ್ ಅವರಿಗೆ ಸ್ಥಳದಲ್ಲೇ ದಂಡದ ರಶೀದಿ ನೀಡಿದ್ದಾರೆ. ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ.</p>.<p><strong>ದಂಡವೇ ಜಾಸ್ತಿ:</strong> ಸವಾರ ಅರುಣ್ಕುಮಾರ್, ಸೆಕೆಂಡ್ ಹ್ಯಾಂಡ್ನಲ್ಲಿ ದ್ವಿಚಕ್ರ ವಾಹನ ಖರೀದಿಸಿದ್ದ. ಅದರ ಮೌಲ್ಯವೇ ಸದ್ಯ ₹ 20 ಸಾವಿರದಿಂದ ₹ 30 ಸಾವಿರ ಇದೆ. ಅದಕ್ಕಿಂತಲೂ ದಂಡವೇ ಹೆಚ್ಚಿದೆ.<br />ದಂಡದ ರಶೀದಿ ತೆಗೆದುಕೊಂಡು ಹೋದ. ಸವಾರ, ವಾಪಸು ಬಂದಿಲ್ಲ. ಆತ ನ್ಯಾಯಾಲಯದಲ್ಲಿ ದಂಡ ಪಾವತಿಸಿ ವಾಹನ ಬಿಡಿಸಿಕೊಂಡು ಹೋಗಬೇಕು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಸವಾರರೊಬ್ಬರಿಗೆ ನಗರದ ಸಂಚಾರ ಪೊಲೀಸರು, ₹42,500 ದಂಡ ವಿಧಿಸಿದ್ದಾರೆ.</p>.<p>ಸವಾರ ಅರುಣ್ಕುಮಾರ್ ಎಂಬಾತ ದ್ವಿಚಕ್ರ ವಾಹನದಲ್ಲಿ ಓಡಾಡುತ್ತಿದ್ದ. ಆತನನ್ನು ತಡೆದಿದ್ದ ಮಡಿವಾಳ ಸಂಚಾದ ಠಾಣೆ ಪಿಎಸ್ಐ ಶಿವರಾಜಕುಮಾರ್ ಅಂಗಡಿ ಅವರು ಹಳೇ ಪ್ರಕರಣಗಳ ತಪಾಸಣೆ ನಡೆಸಿದ್ದರು.</p>.<p>ಸವಾರ ಅರುಣ್ಕುಮಾರ್ ಇದುವರೆಗೂ 77 ಬಾರಿ ನಿಯಮ ಉಲ್ಲಂಘಿಸಿದ್ದು, ತಪಾಸಣೆ ವೇಳೆ ಗೊತ್ತಾಗಿತ್ತು. ಇನ್ಸ್ಪೆಕ್ಟರ್ ನವೀನ್ಕುಮಾರ್ ಅವರ ಮಾರ್ಗದರ್ಶನದಲ್ಲಿ ಸವಾರ ಅರುಣ್ಕುಮಾರ್ ಅವರಿಗೆ ಸ್ಥಳದಲ್ಲೇ ದಂಡದ ರಶೀದಿ ನೀಡಿದ್ದಾರೆ. ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ.</p>.<p><strong>ದಂಡವೇ ಜಾಸ್ತಿ:</strong> ಸವಾರ ಅರುಣ್ಕುಮಾರ್, ಸೆಕೆಂಡ್ ಹ್ಯಾಂಡ್ನಲ್ಲಿ ದ್ವಿಚಕ್ರ ವಾಹನ ಖರೀದಿಸಿದ್ದ. ಅದರ ಮೌಲ್ಯವೇ ಸದ್ಯ ₹ 20 ಸಾವಿರದಿಂದ ₹ 30 ಸಾವಿರ ಇದೆ. ಅದಕ್ಕಿಂತಲೂ ದಂಡವೇ ಹೆಚ್ಚಿದೆ.<br />ದಂಡದ ರಶೀದಿ ತೆಗೆದುಕೊಂಡು ಹೋದ. ಸವಾರ, ವಾಪಸು ಬಂದಿಲ್ಲ. ಆತ ನ್ಯಾಯಾಲಯದಲ್ಲಿ ದಂಡ ಪಾವತಿಸಿ ವಾಹನ ಬಿಡಿಸಿಕೊಂಡು ಹೋಗಬೇಕು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>