ಕೆ.ಆರ್.ಪುರ: ಪ್ರಧಾನಿ ನರೇಂದ್ರ ಮೋದಿ ಅವರ 69ನೇ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಮಾರುತಿನಗರ ವಾರ್ಡ್ ವತಿಯಿಂದ ಲಿಂಗರಾಜಪುರದ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೇಬಿಲಿಟಿ ಸೆಂಟರ್ನಲ್ಲಿ ಅಂಗವಿಕಲ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಟಿಫಿನ್ ಕ್ಯಾರಿಯರ್ ವಿತರಿಸಲಾಯಿತು.
ಈ ವೇಳೆ ಬಿಜೆಪಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಘಟಕದ ಅಧ್ಯಕ್ಷ ಎಂ.ಸಿ.ಶ್ರೀನಿವಾಸ್ ಮಾತನಾಡಿ, ‘ದೇಶದ ಅಭಿವೃದ್ಧಿ ಬಗ್ಗೆ ಮೋದಿ ಅವರು ವಿಶೇಷ ಚಿಂತನೆ ಹೊಂದಿದ್ದಾರೆ. ತಳಮಟ್ಟದಿಂದ ಯೋಜನೆ ರೂಪಿಸಿ ಭಯೋತ್ಪಾದನೆ ದೂರ ಮಾಡಿದ್ದಾರೆ’ ಎಂದರು.
ಮಾರುತಿ ಸೇವಾನಗರ ವಾರ್ಡ್ ಅಧ್ಯಕ್ಷ ಎಂ. ಶ್ರೀನಿವಾಸ್, ಕೇಂದ್ರದ 300 ಮಕ್ಕಳಿಗೆ ಪ್ಲಾಸ್ಟಿಕ್ ರಹಿತ ಸ್ಟಿಲ್ ಟಿಫಿನ್ ಕ್ಯಾರಿಯರ್, ಹಣ್ಣುಹಂಪಲು, ಕೇಕ್ ವಿತರಿಸಿದ್ದೇವೆ’ ಎಂದರು. ಈ ಸಂದರ್ಭದಲ್ಲಿ ಸುಮಾಶ್ರೀನಿವಾಸ್, ಬಿಜೆಪಿ ನಗರ ಜಿಲ್ಲಾ ಘಟಕದ ಉಪಾಧ್ಯಕ್ಷ ಮಂಜುನಾಥ್ ಇದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.