<p><strong>ಬೆಂಗಳೂರು:</strong> ಸಂಘ–ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುತ್ತಿರುವ ಅನುದಾನ ಸ್ಥಗಿತಗೊಳಿಸಲಾಗುವುದು ಎಂಬರ್ಥದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ವಿರೋಧಿಸಿ ಇದೇ 10ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ನಿರ್ಧರಿಸಿದ್ದಾರೆ.</p>.<p>ಅಂದು ಬೆಳಿಗ್ಗೆ 11ಕ್ಕೆ ನಗರದ ಪುರಭವನದ ಎದುರು ಮತ್ತು ಅದೇ ದಿನ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಗರದಲ್ಲಿ ಗುರುವಾರ ನಡೆದ ತೀರ್ಮಾನ ಕೈಗೊಳ್ಳಲಾಯಿತು. ‘ಸಂಘ ಸಂಸ್ಥೆಯವರೆಲ್ಲ ಕಳ್ಳರು– ಸುಳ್ಳರು ಎನ್ನುವಂತೆ ಸಚಿವರು ಮಾತನಾಡಿದ್ದಾರೆ. ಈ ಹೇಳಿಕೆಗೆ ಅವರು ಕ್ಷಮೆ ಕೋರಬೇಕು’ ಎಂದೂ ಸಭೆಯಲ್ಲಿ ಆಗ್ರಹಿಸಲಾಯಿತು.</p>.<p>ನಿರ್ದೇಶಕ ಸಿ. ಬಸವಲಿಂಗಯ್ಯ, ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಮೊದಲಿನಿಂದಲೂ ನಿರ್ಲಕ್ಷಿಸಲಾಗುತ್ತಿದೆ. ಐದಾರು ವರ್ಷಗಳಲ್ಲಿ ಏಳು ಕಾರ್ಯದರ್ಶಿಗಳು ಬದಲಾಗಿದ್ದಾರೆ. ಈಗ, ಅನುದಾನಕ್ಕಾಗಿ ಜಿಲ್ಲಾಧಿಕಾರಿ ಮುಂದೆ ಹೋಗಬೇಕು ಎಂಬ ನಿಯಮ ರೂಪಿಸಿದರೆ, ಇಲಾಖೆಯ ಕಥೆ ಮುಗಿದಂತೆಯೇ ಎಂದೇ ಹೇಳಬೇಕಾಗುತ್ತದೆ. ಸರ್ಕಾರದ ಈ ನಿರ್ಧಾರಕ್ಕೆ ನಮ್ಮ ವಿರೋಧವಿದೆ’ ಎಂದು ಹೇಳಿದರು.</p>.<p>‘ಸುಳ್ಳು ಅಥವಾ ನಕಲಿ ಸಂಘ–ಸಂಸ್ಥೆಗಳು ಇವೆ ಎಂದಾದಲ್ಲಿ, ಇಲಾಖೆಯ ಸಹಾಯಕ ನಿರ್ದೇಶಕರುಗಳು ಅವುಗಳ ಹೆಸರನ್ನು ಬಹಿರಂಗಗೊಳಿಸಲಿ. ಅಕ್ರಮವಾಗಿ ಅನುದಾನ ಪಡೆದ ಸಂಸ್ಥೆಗಳ ಪಟ್ಟಿ ಪ್ರಕಟಿಸಲಿ. ಅದನ್ನು ಬಿಟ್ಟು ಎಲ್ಲ ಸಂಘ–ಸಂಸ್ಥೆಗಳು ಕಳ್ಳ<br />ಸಂಸ್ಥೆಗಳು ಎಂದು ಸಾರ್ವತ್ರೀಕರಣಗೊಳಿಸುವುದು ತಪ್ಪು’ ಎಂದು ಅಭಿಪ್ರಾಯಪಟ್ಟರು.</p>.<p>‘ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೇ ಸಂಸ್ಕೃತಿ ಇಲ್ಲ. ಅಕಾಡೆಮಿಗಳ ಅಧ್ಯಕ್ಷರನ್ನೂ ಅವರು ಕಳ್ಳರಂತೆ ನೋಡುತ್ತಿದ್ದಾರೆ. ಇಂತಹ ಸಚಿವರು ನಮಗೆ ಬೇಡ’ ಎಂದು ಕಲಾವಿದ ಜೋಗಿಲ ಸಿದ್ದರಾಜು ಹೇಳಿದರು.</p>.<p>‘ಪ್ರಸಕ್ತ ಸಾಲಿನ ಅನುದಾನವನ್ನು ಸರ್ಕಾರ ಈಗಾಗಲೇ ಬಿಡುಗಡೆಗೊಳಿಸಿದೆ. ಈ ಅನುದಾನ ಪಡೆಯಲು ಯಾವುದೇ ನಿಯಮ ಅನ್ವಯವಾಗುವುದಿಲ್ಲ. ಮುಂದಿನ ವರ್ಷಕ್ಕೆ ಮಾತ್ರ ನಿಯಮ ಅನ್ವಯವಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಇನ್ನು ಒಂದು ತಿಂಗಳಲ್ಲಿ ಸರ್ಕಾರ ತನ್ನ ಸಾಂಸ್ಕೃತಿಕ ನೀತಿ ಪ್ರಕಟಿಸಲಿದೆ’ ಎಂದು ನಾಟಕ ಅಕಾಡೆಮಿ ಅಧ್ಯಕ್ಷ ಜೆ. ಲೋಕೇಶ್ ತಿಳಿಸಿದರು.</p>.<p>‘ಅನುದಾನ ವಿಚಾರವೂ ಒಳಗೊಂಡಂತೆ, ಸಾಂಸ್ಕೃತಿಕ ಕ್ಷೇತ್ರ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳ ಕುರಿತು ಚರ್ಚಿಸಲು ಹಾಗೂ ತೀರ್ಮಾನ ತೆಗೆದುಕೊಳ್ಳಲು ಎಲ್ಲ ಕಲಾವಿದರ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ಹೇಳಿದರು.</p>.<p><strong>ಕಲಾವಿದರ ಜಟಾಪಟಿ</strong><br />ಒಂದೊಂದು ಕ್ಷೇತ್ರದ ಕಲಾವಿದರು ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರಿಂದ ಸಭೆಯು ಗೊಂದಲದ ಗೂಡಾಯಿತು.</p>.<p>‘ಕಲಾವಿದರಲ್ಲಿ ಒಗ್ಗಟ್ಟು ಇರಬೇಕು. ಅದು ಬಿಟ್ಟು ಕೊರಳ ಪಟ್ಟಿ ಹಿಡಿಯುವ ರೀತಿಯಲ್ಲಿ ಕೂಗಾಡುವುದು ಸರಿಯಲ್ಲ’ ಎಂದು ಶ್ರೀನಿವಾಸ ಕಪ್ಪಣ್ಣ ಬೇಸರ ವ್ಯಕ್ತಪಡಿಸುವ ಮಟ್ಟಿಗೆ ಸಭೆಯಲ್ಲಿ ಗಲಾಟೆ ನಡೆಯಿತು.</p>.<p>ಪ್ರತಿಭಟನೆಯ ಸ್ವರೂಪ, ಸರ್ಕಾರದ ವಿರುದ್ಧ ತೆಗೆದುಕೊಳ್ಳಬೇಕಾದ ನಿರ್ಧಾರ, ಆನ್ಲೈನ್ನಲ್ಲಿ ಮಾಹಿತಿ ಭರ್ತಿ ವಿಚಾರ ಸೇರಿದಂತೆ ಹಲವು ಅಂಶಗಳ ಕುರಿತು ಚರ್ಚೆಯ ವೇಳೆ ಒಮ್ಮತದ ನಿರ್ಧಾರ ತೆಗೆದುಕೊಳ್ಳಲು ಸಭೆ ವಿಫಲವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂಘ–ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುತ್ತಿರುವ ಅನುದಾನ ಸ್ಥಗಿತಗೊಳಿಸಲಾಗುವುದು ಎಂಬರ್ಥದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ವಿರೋಧಿಸಿ ಇದೇ 10ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ನಿರ್ಧರಿಸಿದ್ದಾರೆ.</p>.<p>ಅಂದು ಬೆಳಿಗ್ಗೆ 11ಕ್ಕೆ ನಗರದ ಪುರಭವನದ ಎದುರು ಮತ್ತು ಅದೇ ದಿನ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಗರದಲ್ಲಿ ಗುರುವಾರ ನಡೆದ ತೀರ್ಮಾನ ಕೈಗೊಳ್ಳಲಾಯಿತು. ‘ಸಂಘ ಸಂಸ್ಥೆಯವರೆಲ್ಲ ಕಳ್ಳರು– ಸುಳ್ಳರು ಎನ್ನುವಂತೆ ಸಚಿವರು ಮಾತನಾಡಿದ್ದಾರೆ. ಈ ಹೇಳಿಕೆಗೆ ಅವರು ಕ್ಷಮೆ ಕೋರಬೇಕು’ ಎಂದೂ ಸಭೆಯಲ್ಲಿ ಆಗ್ರಹಿಸಲಾಯಿತು.</p>.<p>ನಿರ್ದೇಶಕ ಸಿ. ಬಸವಲಿಂಗಯ್ಯ, ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಮೊದಲಿನಿಂದಲೂ ನಿರ್ಲಕ್ಷಿಸಲಾಗುತ್ತಿದೆ. ಐದಾರು ವರ್ಷಗಳಲ್ಲಿ ಏಳು ಕಾರ್ಯದರ್ಶಿಗಳು ಬದಲಾಗಿದ್ದಾರೆ. ಈಗ, ಅನುದಾನಕ್ಕಾಗಿ ಜಿಲ್ಲಾಧಿಕಾರಿ ಮುಂದೆ ಹೋಗಬೇಕು ಎಂಬ ನಿಯಮ ರೂಪಿಸಿದರೆ, ಇಲಾಖೆಯ ಕಥೆ ಮುಗಿದಂತೆಯೇ ಎಂದೇ ಹೇಳಬೇಕಾಗುತ್ತದೆ. ಸರ್ಕಾರದ ಈ ನಿರ್ಧಾರಕ್ಕೆ ನಮ್ಮ ವಿರೋಧವಿದೆ’ ಎಂದು ಹೇಳಿದರು.</p>.<p>‘ಸುಳ್ಳು ಅಥವಾ ನಕಲಿ ಸಂಘ–ಸಂಸ್ಥೆಗಳು ಇವೆ ಎಂದಾದಲ್ಲಿ, ಇಲಾಖೆಯ ಸಹಾಯಕ ನಿರ್ದೇಶಕರುಗಳು ಅವುಗಳ ಹೆಸರನ್ನು ಬಹಿರಂಗಗೊಳಿಸಲಿ. ಅಕ್ರಮವಾಗಿ ಅನುದಾನ ಪಡೆದ ಸಂಸ್ಥೆಗಳ ಪಟ್ಟಿ ಪ್ರಕಟಿಸಲಿ. ಅದನ್ನು ಬಿಟ್ಟು ಎಲ್ಲ ಸಂಘ–ಸಂಸ್ಥೆಗಳು ಕಳ್ಳ<br />ಸಂಸ್ಥೆಗಳು ಎಂದು ಸಾರ್ವತ್ರೀಕರಣಗೊಳಿಸುವುದು ತಪ್ಪು’ ಎಂದು ಅಭಿಪ್ರಾಯಪಟ್ಟರು.</p>.<p>‘ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೇ ಸಂಸ್ಕೃತಿ ಇಲ್ಲ. ಅಕಾಡೆಮಿಗಳ ಅಧ್ಯಕ್ಷರನ್ನೂ ಅವರು ಕಳ್ಳರಂತೆ ನೋಡುತ್ತಿದ್ದಾರೆ. ಇಂತಹ ಸಚಿವರು ನಮಗೆ ಬೇಡ’ ಎಂದು ಕಲಾವಿದ ಜೋಗಿಲ ಸಿದ್ದರಾಜು ಹೇಳಿದರು.</p>.<p>‘ಪ್ರಸಕ್ತ ಸಾಲಿನ ಅನುದಾನವನ್ನು ಸರ್ಕಾರ ಈಗಾಗಲೇ ಬಿಡುಗಡೆಗೊಳಿಸಿದೆ. ಈ ಅನುದಾನ ಪಡೆಯಲು ಯಾವುದೇ ನಿಯಮ ಅನ್ವಯವಾಗುವುದಿಲ್ಲ. ಮುಂದಿನ ವರ್ಷಕ್ಕೆ ಮಾತ್ರ ನಿಯಮ ಅನ್ವಯವಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಇನ್ನು ಒಂದು ತಿಂಗಳಲ್ಲಿ ಸರ್ಕಾರ ತನ್ನ ಸಾಂಸ್ಕೃತಿಕ ನೀತಿ ಪ್ರಕಟಿಸಲಿದೆ’ ಎಂದು ನಾಟಕ ಅಕಾಡೆಮಿ ಅಧ್ಯಕ್ಷ ಜೆ. ಲೋಕೇಶ್ ತಿಳಿಸಿದರು.</p>.<p>‘ಅನುದಾನ ವಿಚಾರವೂ ಒಳಗೊಂಡಂತೆ, ಸಾಂಸ್ಕೃತಿಕ ಕ್ಷೇತ್ರ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳ ಕುರಿತು ಚರ್ಚಿಸಲು ಹಾಗೂ ತೀರ್ಮಾನ ತೆಗೆದುಕೊಳ್ಳಲು ಎಲ್ಲ ಕಲಾವಿದರ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ಹೇಳಿದರು.</p>.<p><strong>ಕಲಾವಿದರ ಜಟಾಪಟಿ</strong><br />ಒಂದೊಂದು ಕ್ಷೇತ್ರದ ಕಲಾವಿದರು ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರಿಂದ ಸಭೆಯು ಗೊಂದಲದ ಗೂಡಾಯಿತು.</p>.<p>‘ಕಲಾವಿದರಲ್ಲಿ ಒಗ್ಗಟ್ಟು ಇರಬೇಕು. ಅದು ಬಿಟ್ಟು ಕೊರಳ ಪಟ್ಟಿ ಹಿಡಿಯುವ ರೀತಿಯಲ್ಲಿ ಕೂಗಾಡುವುದು ಸರಿಯಲ್ಲ’ ಎಂದು ಶ್ರೀನಿವಾಸ ಕಪ್ಪಣ್ಣ ಬೇಸರ ವ್ಯಕ್ತಪಡಿಸುವ ಮಟ್ಟಿಗೆ ಸಭೆಯಲ್ಲಿ ಗಲಾಟೆ ನಡೆಯಿತು.</p>.<p>ಪ್ರತಿಭಟನೆಯ ಸ್ವರೂಪ, ಸರ್ಕಾರದ ವಿರುದ್ಧ ತೆಗೆದುಕೊಳ್ಳಬೇಕಾದ ನಿರ್ಧಾರ, ಆನ್ಲೈನ್ನಲ್ಲಿ ಮಾಹಿತಿ ಭರ್ತಿ ವಿಚಾರ ಸೇರಿದಂತೆ ಹಲವು ಅಂಶಗಳ ಕುರಿತು ಚರ್ಚೆಯ ವೇಳೆ ಒಮ್ಮತದ ನಿರ್ಧಾರ ತೆಗೆದುಕೊಳ್ಳಲು ಸಭೆ ವಿಫಲವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>