‘ಬೆಂಗಳೂರು ನಗರದ ತ್ಯಾಜ್ಯವನ್ನು ಗ್ರಾಮದಲ್ಲಿ ತಂದು ಸುರಿಯಲಾಗುತ್ತಿದೆ. ಇದನ್ನು ವಿರೋಧಿಸಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೆವು. ಕಸದ ಸಮಸ್ಯೆಯಿಂದ ಗ್ರಾಮದ ಮೇಲಾಗುತ್ತಿರುವ ದುಷ್ಪರಿಣಾಮಗಳು ಮತ್ತು ಗ್ರಾಮದ ಜನ–ಜಾನುವಾರುಗಳ ಆರೋಗ್ಯ ಸಮೀಕ್ಷೆ ನಡೆಸಬೇಕು ಎಂದು ಹೈಕೋರ್ಟ್ ಹೇಳಿತ್ತು. ಆ ಕಾರ್ಯ ಆಗಿಲ್ಲ. ಇನ್ನು, ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಬೇಕು. ಅದರ ಮೂಲಕ ಕುಡಿಯುವ ನೀರು ಪೂರೈಸಬೇಕು ಎಂದೂ ನ್ಯಾಯಾಲಯ ಹೇಳಿತ್ತು. ಆದರೆ, ಬಹುತೇಕ ಘಟಕಗಳು ಕೆಟ್ಟು ನಿಂತಿವೆ. ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ’ ಎಂದು ಗ್ರಾಮದ ಮುಖಂಡ ಬಿ. ಶ್ರೀನಿವಾಸ ಹೇಳಿದರು.