<p>ಬೆಂಗಳೂರು: ರಾಜ್ಯದ ಪರಂಪರೆ, ಕಲೆ, ಸಂಸ್ಕೃತಿ, ಎಂಜಿನಿಯರಿಂಗ್, ಆವಿಷ್ಕಾರ, ಸೃಜನಶೀಲತೆ<br />ಯನ್ನು ಪರಸ್ಪರ ಸಂಯೋಜಿಸಬೇಕು. ಈ ಸಂಯೋಜನೆಯೇ ಬ್ರ್ಯಾಂಡ್ ಬೆಂಗಳೂರಿನ ವಿನ್ಯಾಸಗಳಾಗಬೇಕು ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಬೆಂಗಳೂರು ವಿನ್ಯಾಸಕಾರರ ಸಮುದಾಯ, ಜೈನ್ ವಿನ್ಯಾಸ ಶಾಲೆಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಭವಿಷ್ಯದ ವಿನ್ಯಾಸ’ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನಾವಿನ್ಯತೆಯ ಸಾಧಕರು, ಅವರು ಬಿಂಬಿಸುವ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ<br />ವನ್ನು(ಇನ್ನೋವೇಷನ್ ಎಕ್ಸ್ಪೀರಿಯನ್ಸ್<br />ಮ್ಯೂಸಿಯಂ) ಎನ್ಜಿಇಎಫ್ ಕಾರ್ಖಾನೆ ವೃಕ್ಷೋದ್ಯಾನದ ಆವರಣ<br />ದಲ್ಲಿ ಸ್ಥಾಪಿಸಲಾಗುವುದು.ಎಲ್ಲ ನಾವಿನ್ಯತೆ, ಆವಿಷ್ಕಾರಗಳ ಕುರಿತು ಮಾಹಿತಿ ನೀಡುವ ಅಂತರರಾಷ್ಟ್ರೀಯ ಮ್ಯೂಸಿಯಂ ರೀತಿ ಅಭಿವೃದ್ಧಿಪಡಿಸಲಾಗುವುದು. ಇದರಿಂದ ವಿದೇಶಿ ಪ್ರವಾಸೋದ್ಯಮಕ್ಕೂ ಪ್ರೋತ್ಸಾಹ ದೊರೆಯಲಿದೆ. ಯುವ ಆವಿಷ್ಕಾರ ನಿರತರು, ವಿನ್ಯಾಸಕಾರರಿಗೂ ಸ್ಫೂರ್ತಿಯಾಗಲಿದೆ ಎಂದು ವಿವರಿಸಿದರು.</p>.<p>ಬೆಂಗಳೂರಿನಲ್ಲಿ 400 ಸಂಶೋಧನೆ ಮತ್ತು ಅಭಿವೃದ್ಧಿ(ಆರ್ ಅಂಡ್ ಡಿ) ಕೇಂದ್ರಗಳಿವೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಅಭಿವೃದ್ಧಿಗೆ ಬಹಳ ಅವಕಾಶಗಳಿವೆ. ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡುವಂತಹ ಸಕಾರಾತ್ಮಕತೆ<br />ಎಲ್ಲರಲ್ಲೂ ಇರಬೇಕು.ಬೆಂಗಳೂರಿನ ಎಂ.ಜಿ. ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಬ್ರಿಗೇಡ್ ರಸ್ತೆ, ಮಲ್ಲೇಶ್ವರಂ,<br />ಇಂದಿರಾನಗರದಂತಹ ಪ್ರದೇಶ<br />ಗಳನ್ನು ಜನರಿಗೆ ಅನುಕೂಲ<br />ವಾಗುವ, ಪರಂಪರೆ ಉಳಿಸುವ ರೀತಿ ಮರುವಿನ್ಯಾಸಗೊಳಿಸಬೇಕು. ಕೆರೆಗಳ ವಿನ್ಯಾಸ ಬದಲಿಸಬೇಕು ಎಂದು ಕೋರಿದರು.</p>.<p>ಐಟಿ, ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ,ವಿನ್ಯಾಸ ಉದ್ಯಮವು ಬೆಂಗಳೂರು ನಗರದಲ್ಲಿ ಜಾಗತಿಕ ಗುಣಮಟ್ಟದೊಂದಿಗೆ ಬೇರೂರಬೇಕು.ವಿನ್ಯಾಸ ಕಲಿಕೆಯನ್ನು ಎನ್ಇಪಿ ಪಠ್ಯಕ್ರಮದ ಭಾಗವಾಗಿಸಲು ಚಿಂತಿಸಲಾಗುತ್ತಿದೆ ಎಂದರು.</p>.<p>ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್, ಅಂತರರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಸಮಿತಿ ಮುಖ್ಯಸ್ಥ ಟಾಮ್ ಜೋಸೆಫ್, ಗೀತಾ ನಾಯರ್ ಉಪಸ್ಥಿತರಿದ್ದರು.</p>.<p>ಎಂಟು ನಗರ ಕೇಂದ್ರಗಳ ನಿರ್ಮಾಣ</p>.<p>ಬೆಂಗಳೂರಿನಲ್ಲಿ ಎಂಟು<br />ದಿಕ್ಕಿನಲ್ಲೂ ಎಂಟು ನಗರ ಕೇಂದ್ರಗಳ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ನಗರ ಕೇಂದ್ರಗಳಿಗೂ ಪೂರಕವಾಗಿ ರಸ್ತೆ, ರೈಲು ಅಭಿವೃದ್ಧಿಗೊಳಿಸಬಹುದು. ಈ ಯೋಜನೆಗೆ ಬೇಕಾದ ಸಲಹೆಗಳನ್ನು ವಿನ್ಯಾಸಕಾರರು ಒದಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯದ ಪರಂಪರೆ, ಕಲೆ, ಸಂಸ್ಕೃತಿ, ಎಂಜಿನಿಯರಿಂಗ್, ಆವಿಷ್ಕಾರ, ಸೃಜನಶೀಲತೆ<br />ಯನ್ನು ಪರಸ್ಪರ ಸಂಯೋಜಿಸಬೇಕು. ಈ ಸಂಯೋಜನೆಯೇ ಬ್ರ್ಯಾಂಡ್ ಬೆಂಗಳೂರಿನ ವಿನ್ಯಾಸಗಳಾಗಬೇಕು ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಬೆಂಗಳೂರು ವಿನ್ಯಾಸಕಾರರ ಸಮುದಾಯ, ಜೈನ್ ವಿನ್ಯಾಸ ಶಾಲೆಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಭವಿಷ್ಯದ ವಿನ್ಯಾಸ’ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನಾವಿನ್ಯತೆಯ ಸಾಧಕರು, ಅವರು ಬಿಂಬಿಸುವ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ<br />ವನ್ನು(ಇನ್ನೋವೇಷನ್ ಎಕ್ಸ್ಪೀರಿಯನ್ಸ್<br />ಮ್ಯೂಸಿಯಂ) ಎನ್ಜಿಇಎಫ್ ಕಾರ್ಖಾನೆ ವೃಕ್ಷೋದ್ಯಾನದ ಆವರಣ<br />ದಲ್ಲಿ ಸ್ಥಾಪಿಸಲಾಗುವುದು.ಎಲ್ಲ ನಾವಿನ್ಯತೆ, ಆವಿಷ್ಕಾರಗಳ ಕುರಿತು ಮಾಹಿತಿ ನೀಡುವ ಅಂತರರಾಷ್ಟ್ರೀಯ ಮ್ಯೂಸಿಯಂ ರೀತಿ ಅಭಿವೃದ್ಧಿಪಡಿಸಲಾಗುವುದು. ಇದರಿಂದ ವಿದೇಶಿ ಪ್ರವಾಸೋದ್ಯಮಕ್ಕೂ ಪ್ರೋತ್ಸಾಹ ದೊರೆಯಲಿದೆ. ಯುವ ಆವಿಷ್ಕಾರ ನಿರತರು, ವಿನ್ಯಾಸಕಾರರಿಗೂ ಸ್ಫೂರ್ತಿಯಾಗಲಿದೆ ಎಂದು ವಿವರಿಸಿದರು.</p>.<p>ಬೆಂಗಳೂರಿನಲ್ಲಿ 400 ಸಂಶೋಧನೆ ಮತ್ತು ಅಭಿವೃದ್ಧಿ(ಆರ್ ಅಂಡ್ ಡಿ) ಕೇಂದ್ರಗಳಿವೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಅಭಿವೃದ್ಧಿಗೆ ಬಹಳ ಅವಕಾಶಗಳಿವೆ. ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡುವಂತಹ ಸಕಾರಾತ್ಮಕತೆ<br />ಎಲ್ಲರಲ್ಲೂ ಇರಬೇಕು.ಬೆಂಗಳೂರಿನ ಎಂ.ಜಿ. ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಬ್ರಿಗೇಡ್ ರಸ್ತೆ, ಮಲ್ಲೇಶ್ವರಂ,<br />ಇಂದಿರಾನಗರದಂತಹ ಪ್ರದೇಶ<br />ಗಳನ್ನು ಜನರಿಗೆ ಅನುಕೂಲ<br />ವಾಗುವ, ಪರಂಪರೆ ಉಳಿಸುವ ರೀತಿ ಮರುವಿನ್ಯಾಸಗೊಳಿಸಬೇಕು. ಕೆರೆಗಳ ವಿನ್ಯಾಸ ಬದಲಿಸಬೇಕು ಎಂದು ಕೋರಿದರು.</p>.<p>ಐಟಿ, ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ,ವಿನ್ಯಾಸ ಉದ್ಯಮವು ಬೆಂಗಳೂರು ನಗರದಲ್ಲಿ ಜಾಗತಿಕ ಗುಣಮಟ್ಟದೊಂದಿಗೆ ಬೇರೂರಬೇಕು.ವಿನ್ಯಾಸ ಕಲಿಕೆಯನ್ನು ಎನ್ಇಪಿ ಪಠ್ಯಕ್ರಮದ ಭಾಗವಾಗಿಸಲು ಚಿಂತಿಸಲಾಗುತ್ತಿದೆ ಎಂದರು.</p>.<p>ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್, ಅಂತರರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಸಮಿತಿ ಮುಖ್ಯಸ್ಥ ಟಾಮ್ ಜೋಸೆಫ್, ಗೀತಾ ನಾಯರ್ ಉಪಸ್ಥಿತರಿದ್ದರು.</p>.<p>ಎಂಟು ನಗರ ಕೇಂದ್ರಗಳ ನಿರ್ಮಾಣ</p>.<p>ಬೆಂಗಳೂರಿನಲ್ಲಿ ಎಂಟು<br />ದಿಕ್ಕಿನಲ್ಲೂ ಎಂಟು ನಗರ ಕೇಂದ್ರಗಳ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ನಗರ ಕೇಂದ್ರಗಳಿಗೂ ಪೂರಕವಾಗಿ ರಸ್ತೆ, ರೈಲು ಅಭಿವೃದ್ಧಿಗೊಳಿಸಬಹುದು. ಈ ಯೋಜನೆಗೆ ಬೇಕಾದ ಸಲಹೆಗಳನ್ನು ವಿನ್ಯಾಸಕಾರರು ಒದಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>