<p><strong>ಬೆಂಗಳೂರು</strong>: ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿ.ನಾ.ಕು. ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಖ್ಯಾತ ವಕೀಲ ಸಿ.ಎಚ್. ಹನುಮಂತರಾಯ,ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ, ವೈದ್ಯರಾದ ಡಾ.ಬಿ.ಆರ್. ಕಿಶೋರ್, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಬಿ. ಅಶೋಕ್ ಕುಮಾರ್ ಅವರು ಈ ಬಾರಿಯ ಪ್ರಶಸ್ತಿ ಪುರಸ್ಕೃತರು. ಸಿ.ಎಚ್. ಹನುಮಂತರಾಯ ಮತ್ತು ಬಿ.ಬಿ. ಅಶೋಕ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದರು.</p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ವಸತಿ ಸಚಿವ ವಿ. ಸೋಮಣ್ಣ, ‘ಜಿ. ನಾರಾಯಣಕುಮಾರ್ ಅವರು ನಾಡು ಕಂಡ ಅಪರೂಪದ ರಾಜಕಾರಣಿ ಮತ್ತು ಕನ್ನಡ ಪರ ಹೋರಾಟಗಾರರು’ ಎಂದು ಸ್ಮರಿಸಿದರು.</p>.<p>‘ಕನ್ನಡ ಭಾಷೆ ಮತ್ತು ನಾಡಿಗೆ ಸಂಕಷ್ಟ ಬಂದಾಗ ಜಿ.ನಾರಾಯಣಕುಮಾರ್ ಅವರು ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಕನ್ನಡಕ್ಕೆ ವ್ಯಕ್ತಿಯಾಗಿ ಮತ್ತು ಶಕ್ತಿಯಾಗಿ ಅವರು ದುಡಿದ್ದಾರೆ’ ಎಂದು ನೆನಪಿಸಿಕೊಂಡರು.</p>.<p>ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ,‘ನಾಡು–ನುಡಿ ವಿಷಯದಲ್ಲಿ ಜಿ. ನಾರಾಯಣಕುಮಾರ್ ಅವರು ಸದಾ ದಿಟ್ಟತನ ಪ್ರದರ್ಶಿಸುತ್ತಿದ್ದರು’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿ.ನಾ.ಕು. ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಖ್ಯಾತ ವಕೀಲ ಸಿ.ಎಚ್. ಹನುಮಂತರಾಯ,ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ, ವೈದ್ಯರಾದ ಡಾ.ಬಿ.ಆರ್. ಕಿಶೋರ್, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಬಿ. ಅಶೋಕ್ ಕುಮಾರ್ ಅವರು ಈ ಬಾರಿಯ ಪ್ರಶಸ್ತಿ ಪುರಸ್ಕೃತರು. ಸಿ.ಎಚ್. ಹನುಮಂತರಾಯ ಮತ್ತು ಬಿ.ಬಿ. ಅಶೋಕ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದರು.</p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ವಸತಿ ಸಚಿವ ವಿ. ಸೋಮಣ್ಣ, ‘ಜಿ. ನಾರಾಯಣಕುಮಾರ್ ಅವರು ನಾಡು ಕಂಡ ಅಪರೂಪದ ರಾಜಕಾರಣಿ ಮತ್ತು ಕನ್ನಡ ಪರ ಹೋರಾಟಗಾರರು’ ಎಂದು ಸ್ಮರಿಸಿದರು.</p>.<p>‘ಕನ್ನಡ ಭಾಷೆ ಮತ್ತು ನಾಡಿಗೆ ಸಂಕಷ್ಟ ಬಂದಾಗ ಜಿ.ನಾರಾಯಣಕುಮಾರ್ ಅವರು ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಕನ್ನಡಕ್ಕೆ ವ್ಯಕ್ತಿಯಾಗಿ ಮತ್ತು ಶಕ್ತಿಯಾಗಿ ಅವರು ದುಡಿದ್ದಾರೆ’ ಎಂದು ನೆನಪಿಸಿಕೊಂಡರು.</p>.<p>ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ,‘ನಾಡು–ನುಡಿ ವಿಷಯದಲ್ಲಿ ಜಿ. ನಾರಾಯಣಕುಮಾರ್ ಅವರು ಸದಾ ದಿಟ್ಟತನ ಪ್ರದರ್ಶಿಸುತ್ತಿದ್ದರು’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>