<p><strong>ಬೆಂಗಳೂರು:</strong> ‘ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರದ ವೈಫಲ್ಯವೇ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಕಾರಣ’ ಎಂದು ಕೆಪಿಸಿಸಿ ರಚಿಸಿದ ಶಾಸಕ ಜಿ. ಪರಮೇಶ್ವರ ನೇತೃತ್ವದ ಸತ್ಯಶೋಧನಾ ಸಮಿತಿ ಹೇಳಿದೆ.</p>.<p>ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಮಿತಿ ತನ್ನ ವರದಿ ಸಲ್ಲಿಸಿದೆ. ಗಲಭೆಗೆ ಕಾರಣ, ನಷ್ಟ ಅನುಭವಿಸಿ<br />ದವರು, ದಾಖಲಾದ ದೂರು, ಪೊಲೀಸರ ಕಾರ್ಯವೈಖರಿ ಪರಿಶೀಲಿಸಿ ಸಮಿತಿ ತನ್ನ ಅಭಿಪ್ರಾಯವನ್ನು ವರದಿಯಲ್ಲಿ ವ್ಯಕ್ತ<br />ಪಡಿಸಿದೆ.</p>.<p>‘ರಾಜಕೀಯವಾಗಿ ಪಕ್ಷಗಳ ಕಾರ್ಯ ಕರ್ತರ ನಡುವೆ ಸಣ್ಣಪುಟ್ಟ ಸಮಸ್ಯೆಗಳು ಇದ್ದರೂ ಅದೊಂದೇ ಘಟನೆಗೆ ಕಾರಣವಲ್ಲ. ಗಲಭೆ ಆರಂಭಗೊಂಡು ನಾಲ್ಕು ಗಂಟೆ ಕಳೆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಳಂಬ ಘಟನೆ ತೀವ್ರ ಸ್ವರೂಪ ಪಡೆ ದುಕೊಳ್ಳಲು ಕಾರಣವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದು ತಿಳಿದು ಬಂದಿದೆ.</p>.<p>‘ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳು ವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಲು ಸರ್ಕಾರ ತಡ ಮಾಡಿದೆ. ಅಲ್ಲದೆ, ಗುಪ್ತಚರ ಇಲಾಖೆ ನಡೆಯಬಹುದಾದ ಘಟನೆಯನ್ನು ಮೊದಲೇ ಅರಿಯಲು ವಿಫಲವಾಗಿದೆ’ ಎಂದೂ ವರದಿಯಲ್ಲಿದೆ ಎನ್ನಲಾಗಿದೆ.</p>.<p>‘ಘಟನೆಗೆ ಮಾಜಿ ಮೇಯರ್ ಸಂಪತ್ ರಾಜ್ ಅವರ ಪ್ರಚೋದ ನೆಯೂ ಕಾರಣವಾಗಿತ್ತು ಎಂಬ ಬಗ್ಗೆ ವರದಿಯಲ್ಲಿ ಯಾವುದೇ ಪ್ರಸ್ತಾಪ ಇಲ್ಲ’ ಎಂದೂ ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರದ ವೈಫಲ್ಯವೇ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಕಾರಣ’ ಎಂದು ಕೆಪಿಸಿಸಿ ರಚಿಸಿದ ಶಾಸಕ ಜಿ. ಪರಮೇಶ್ವರ ನೇತೃತ್ವದ ಸತ್ಯಶೋಧನಾ ಸಮಿತಿ ಹೇಳಿದೆ.</p>.<p>ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಮಿತಿ ತನ್ನ ವರದಿ ಸಲ್ಲಿಸಿದೆ. ಗಲಭೆಗೆ ಕಾರಣ, ನಷ್ಟ ಅನುಭವಿಸಿ<br />ದವರು, ದಾಖಲಾದ ದೂರು, ಪೊಲೀಸರ ಕಾರ್ಯವೈಖರಿ ಪರಿಶೀಲಿಸಿ ಸಮಿತಿ ತನ್ನ ಅಭಿಪ್ರಾಯವನ್ನು ವರದಿಯಲ್ಲಿ ವ್ಯಕ್ತ<br />ಪಡಿಸಿದೆ.</p>.<p>‘ರಾಜಕೀಯವಾಗಿ ಪಕ್ಷಗಳ ಕಾರ್ಯ ಕರ್ತರ ನಡುವೆ ಸಣ್ಣಪುಟ್ಟ ಸಮಸ್ಯೆಗಳು ಇದ್ದರೂ ಅದೊಂದೇ ಘಟನೆಗೆ ಕಾರಣವಲ್ಲ. ಗಲಭೆ ಆರಂಭಗೊಂಡು ನಾಲ್ಕು ಗಂಟೆ ಕಳೆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಳಂಬ ಘಟನೆ ತೀವ್ರ ಸ್ವರೂಪ ಪಡೆ ದುಕೊಳ್ಳಲು ಕಾರಣವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದು ತಿಳಿದು ಬಂದಿದೆ.</p>.<p>‘ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳು ವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಲು ಸರ್ಕಾರ ತಡ ಮಾಡಿದೆ. ಅಲ್ಲದೆ, ಗುಪ್ತಚರ ಇಲಾಖೆ ನಡೆಯಬಹುದಾದ ಘಟನೆಯನ್ನು ಮೊದಲೇ ಅರಿಯಲು ವಿಫಲವಾಗಿದೆ’ ಎಂದೂ ವರದಿಯಲ್ಲಿದೆ ಎನ್ನಲಾಗಿದೆ.</p>.<p>‘ಘಟನೆಗೆ ಮಾಜಿ ಮೇಯರ್ ಸಂಪತ್ ರಾಜ್ ಅವರ ಪ್ರಚೋದ ನೆಯೂ ಕಾರಣವಾಗಿತ್ತು ಎಂಬ ಬಗ್ಗೆ ವರದಿಯಲ್ಲಿ ಯಾವುದೇ ಪ್ರಸ್ತಾಪ ಇಲ್ಲ’ ಎಂದೂ ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>