<p><strong>ಬೆಂಗಳೂರು:</strong> ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಮತ್ತೆ ಅಧಿಕಾರ ನೀಡಿ, ನಗರದ ಎಲ್ಲಾ ಕೆರೆಗಳ ನಿರ್ವಹಣೆ ಮಾಡುವ ಅಧಿಕಾರವನ್ನು ಪ್ರಾಧಿಕಾರಕ್ಕೆ ವಹಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ ಅವರು ಹೇಳಿದರು.</p>.<p>ಬಿಡಿಎ ವ್ಯಾಪ್ತಿಯಲ್ಲಿರುವ 10 ಕೆರೆಗಳನ್ನು ಬಿಬಿಎಂಪಿ ವ್ಯಾಪ್ತಿಗೆ ನೀಡುವ ಸಂಬಂಧ ಬಿಎಂಆರ್ಡಿಎ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.</p>.<p>ಬಿಬಿಎಂಪಿ ಹಾಗು ಬಿಡಿಎ ಕೆರೆಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಪ್ರತ್ಯೇಕ ಸಮಯ ಹಾಗೂ ಅನುದಾನ ಮೀಸಲಿಡಬೇಕು. ಈ ಹಿಂದೆ ಕೆರೆ ಅಭಿಪ್ರಾಧಿಕಾರ ತರಲಾಗಿತ್ತು. ಆನಂತರದ ದಿನಗಳಲ್ಲಿ ಈ ಪ್ರಾಧಿಕಾರದ ಅಧಿಕಾರವನ್ನು ಸಣ್ಣ ನೀರಾವರಿ ಇಲಾಖೆಗೆ ಹಸ್ತಾಂತರಿಸಲಾಗಿದೆ. ಪ್ರಸ್ತುತ ಈ ಪ್ರಾಧಿಕಾರ ಯಾವುದೇ ಚಟುವಟಿಕೆ ನಡೆಸುತ್ತಿಲ್ಲ.</p>.<p>ಹೀಗಾಗಿ ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಮೊದಲಿನಅಧಿಕಾರ ವಾಪಾಸ್ ನೀಡುವುದಲ್ಲದೆ, ನಿರ್ವಹಣೆಯ ಜವಾಬ್ಧಾರಿ ಹಾಗೂ ಇಂತಿಷ್ಟು ಅನುದಾನ ಮೀಸಲಿಟ್ಟು ಪ್ರಾಧಿಕಾರಕ್ಕೆ ಮರುಹುಟ್ಟು ನೀಡಬೇಕಿದೆ. ಕೆಲವೇ ತಿಂಗಳಲ್ಲಿ ಪ್ರಾಧಿಕಾರವನ್ನು ಪುನರ್ ರಚಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.</p>.<p>ಅಲ್ಲಿಯವರೆಗೂಬಿಡಿಎ ವ್ಯಾಪ್ತಿಯ 10 ಕೆರೆಗಳನ್ನು ಬಿಬಿಎಂಪಿಗೆ ಹಸ್ತಾಂತರಿಸದೇ ತನ್ನಲ್ಲಿಯೇ ಇಟ್ಟುಕೊಳ್ಳುವಂತೆ ಸೂಚಿಸಿದರು.</p>.<p>ಇದಕ್ಕೂ ಮುನ್ನ ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಸವಿರುವ ನಿವೇಶನ ರಹಿತ ಎಸ್ಸಿ- ಎಸ್ಟಿ ಸಮುದಾಯದ ಬಡವರಿಗೆ ನಿವೇಶನ ಮಂಜೂರು ಮಾಡುವ ಸಂಬಂಧ ಚರ್ಚಿಸಲಾಯಿತು. ಖಾಲಿ ನಿವೇಶನ ಗುರುತಿಸಿ, ಕೂಡಲೇ ಈ ಪ್ರಸ್ತಾವವನ್ನು ಸಚಿವ ಸಂಪುಟದಲ್ಲಿ ಮುಂದಿಟ್ಟು ಒಪ್ಪಿಗೆ ಪಡೆದುಕೊಳ್ಳಲಾಗುವುದು ಎಂದರು.</p>.<p>ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಬಿಡಿಎ ಆಯುಕ್ತೆ ಮಂಜುಳ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಮತ್ತೆ ಅಧಿಕಾರ ನೀಡಿ, ನಗರದ ಎಲ್ಲಾ ಕೆರೆಗಳ ನಿರ್ವಹಣೆ ಮಾಡುವ ಅಧಿಕಾರವನ್ನು ಪ್ರಾಧಿಕಾರಕ್ಕೆ ವಹಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ ಅವರು ಹೇಳಿದರು.</p>.<p>ಬಿಡಿಎ ವ್ಯಾಪ್ತಿಯಲ್ಲಿರುವ 10 ಕೆರೆಗಳನ್ನು ಬಿಬಿಎಂಪಿ ವ್ಯಾಪ್ತಿಗೆ ನೀಡುವ ಸಂಬಂಧ ಬಿಎಂಆರ್ಡಿಎ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.</p>.<p>ಬಿಬಿಎಂಪಿ ಹಾಗು ಬಿಡಿಎ ಕೆರೆಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಪ್ರತ್ಯೇಕ ಸಮಯ ಹಾಗೂ ಅನುದಾನ ಮೀಸಲಿಡಬೇಕು. ಈ ಹಿಂದೆ ಕೆರೆ ಅಭಿಪ್ರಾಧಿಕಾರ ತರಲಾಗಿತ್ತು. ಆನಂತರದ ದಿನಗಳಲ್ಲಿ ಈ ಪ್ರಾಧಿಕಾರದ ಅಧಿಕಾರವನ್ನು ಸಣ್ಣ ನೀರಾವರಿ ಇಲಾಖೆಗೆ ಹಸ್ತಾಂತರಿಸಲಾಗಿದೆ. ಪ್ರಸ್ತುತ ಈ ಪ್ರಾಧಿಕಾರ ಯಾವುದೇ ಚಟುವಟಿಕೆ ನಡೆಸುತ್ತಿಲ್ಲ.</p>.<p>ಹೀಗಾಗಿ ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಮೊದಲಿನಅಧಿಕಾರ ವಾಪಾಸ್ ನೀಡುವುದಲ್ಲದೆ, ನಿರ್ವಹಣೆಯ ಜವಾಬ್ಧಾರಿ ಹಾಗೂ ಇಂತಿಷ್ಟು ಅನುದಾನ ಮೀಸಲಿಟ್ಟು ಪ್ರಾಧಿಕಾರಕ್ಕೆ ಮರುಹುಟ್ಟು ನೀಡಬೇಕಿದೆ. ಕೆಲವೇ ತಿಂಗಳಲ್ಲಿ ಪ್ರಾಧಿಕಾರವನ್ನು ಪುನರ್ ರಚಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.</p>.<p>ಅಲ್ಲಿಯವರೆಗೂಬಿಡಿಎ ವ್ಯಾಪ್ತಿಯ 10 ಕೆರೆಗಳನ್ನು ಬಿಬಿಎಂಪಿಗೆ ಹಸ್ತಾಂತರಿಸದೇ ತನ್ನಲ್ಲಿಯೇ ಇಟ್ಟುಕೊಳ್ಳುವಂತೆ ಸೂಚಿಸಿದರು.</p>.<p>ಇದಕ್ಕೂ ಮುನ್ನ ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಸವಿರುವ ನಿವೇಶನ ರಹಿತ ಎಸ್ಸಿ- ಎಸ್ಟಿ ಸಮುದಾಯದ ಬಡವರಿಗೆ ನಿವೇಶನ ಮಂಜೂರು ಮಾಡುವ ಸಂಬಂಧ ಚರ್ಚಿಸಲಾಯಿತು. ಖಾಲಿ ನಿವೇಶನ ಗುರುತಿಸಿ, ಕೂಡಲೇ ಈ ಪ್ರಸ್ತಾವವನ್ನು ಸಚಿವ ಸಂಪುಟದಲ್ಲಿ ಮುಂದಿಟ್ಟು ಒಪ್ಪಿಗೆ ಪಡೆದುಕೊಳ್ಳಲಾಗುವುದು ಎಂದರು.</p>.<p>ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಬಿಡಿಎ ಆಯುಕ್ತೆ ಮಂಜುಳ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>