<p><strong>ಬೆಂಗಳೂರು:</strong> ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಭಾರಿ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದ್ದಾರೆ.</p>.<p>ಕಾಮಾಕ್ಷಿಪಾಳ್ಯದ ಕಾವೇರಿಪುರ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿ, ₹3.40 ಲಕ್ಷ ಮೌಲ್ಯದ 17 ಕೆ.ಜಿ ಗಾಂಜಾ ವಶಪಡಿಸಿಕೊಂಡರು.</p>.<p>ವಿದ್ಯಾಮಾನ್ಯ ನಗರದ ಪುನೀತ್ (30) ಹಾಗೂ ಆರೂಡಿ ಗ್ರಾಮದ ಆನಂದಕುಮಾರ್ (39) ಬಂಧಿತರು.</p>.<p>'ಆಂಧ್ರಪ್ರದೇಶದ ವ್ಯಕ್ತಿಯೊಬ್ಬನಿಂದ ಆನಂದ್ ಗಾಂಜಾ ಪಡೆಯುತ್ತಿದ್ದ. ಆತನಿಗಾಗಿ ಹುಡುಕಾಟ ಆರಂಭಿಸಿದ್ದೇವೆ. ಬಂಧಿತರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಪೊಲೀಸರು ತಿಳಿಸಿದರು.</p>.<p class="Subhead">ಸಿ.ಟಿ.ಮಾರುಕಟ್ಟೆಯ ಎಸ್.ಕೆ.ಆರ್.ಕಾಂಪ್ಲೆಕ್ಸ್ ನ ಶೌಚಾಲಯದ ಬಳಿ ಗಾಂಜಾ ಇಟ್ಟುಕೊಂಡಿದ್ದ ಕೋಣನಕುಂಟೆ ಕ್ರಾಸ್ ನಿವಾಸಿ ಪುರುಷೋತ್ತಮ್ (38) ಎಂಬ ಆರೋಪಿಯನ್ನು ಸಿ.ಟಿ.ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದು, 450 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.</p>.<p>ವಿಶ್ವೇಶ್ವರಯ್ಯ ಬಡಾವಣೆಯ ಕಾಲೇಜಿನ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.</p>.<p>ಅಂಜನಾಪುರದ ಜಯಮಲ್ಲು (23), ಉತ್ತರಹಳ್ಳಿ ನಿವಾಸಿ ಎನ್.ಧನುಷ್ (21) ಬಂಧಿತರು. ಆರೋಪಿಗಳಿಂದ ₹25 ಸಾವಿರ ಮೌಲ್ಯದ 1.20 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇಬ್ಬರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಭಾರಿ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದ್ದಾರೆ.</p>.<p>ಕಾಮಾಕ್ಷಿಪಾಳ್ಯದ ಕಾವೇರಿಪುರ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿ, ₹3.40 ಲಕ್ಷ ಮೌಲ್ಯದ 17 ಕೆ.ಜಿ ಗಾಂಜಾ ವಶಪಡಿಸಿಕೊಂಡರು.</p>.<p>ವಿದ್ಯಾಮಾನ್ಯ ನಗರದ ಪುನೀತ್ (30) ಹಾಗೂ ಆರೂಡಿ ಗ್ರಾಮದ ಆನಂದಕುಮಾರ್ (39) ಬಂಧಿತರು.</p>.<p>'ಆಂಧ್ರಪ್ರದೇಶದ ವ್ಯಕ್ತಿಯೊಬ್ಬನಿಂದ ಆನಂದ್ ಗಾಂಜಾ ಪಡೆಯುತ್ತಿದ್ದ. ಆತನಿಗಾಗಿ ಹುಡುಕಾಟ ಆರಂಭಿಸಿದ್ದೇವೆ. ಬಂಧಿತರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಪೊಲೀಸರು ತಿಳಿಸಿದರು.</p>.<p class="Subhead">ಸಿ.ಟಿ.ಮಾರುಕಟ್ಟೆಯ ಎಸ್.ಕೆ.ಆರ್.ಕಾಂಪ್ಲೆಕ್ಸ್ ನ ಶೌಚಾಲಯದ ಬಳಿ ಗಾಂಜಾ ಇಟ್ಟುಕೊಂಡಿದ್ದ ಕೋಣನಕುಂಟೆ ಕ್ರಾಸ್ ನಿವಾಸಿ ಪುರುಷೋತ್ತಮ್ (38) ಎಂಬ ಆರೋಪಿಯನ್ನು ಸಿ.ಟಿ.ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದು, 450 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.</p>.<p>ವಿಶ್ವೇಶ್ವರಯ್ಯ ಬಡಾವಣೆಯ ಕಾಲೇಜಿನ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.</p>.<p>ಅಂಜನಾಪುರದ ಜಯಮಲ್ಲು (23), ಉತ್ತರಹಳ್ಳಿ ನಿವಾಸಿ ಎನ್.ಧನುಷ್ (21) ಬಂಧಿತರು. ಆರೋಪಿಗಳಿಂದ ₹25 ಸಾವಿರ ಮೌಲ್ಯದ 1.20 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇಬ್ಬರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>