ಬೆಂಗಳೂರು: ಬನಶಂಕರಿ 3ನೇ ಹಂತದ ವೀರಭದ್ರನಗರದಲ್ಲಿ ಜೂಜಾಟ ನಡೆಯುತ್ತಿದ್ದ ಸ್ಥಳದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ₹1.50 ಲಕ್ಷ ಜಪ್ತಿ ಮಾಡಿದ್ದಾರೆ.
‘100 ಅಡಿ ರಸ್ತೆಯ ಕಟ್ಟಡವೊಂದರಲ್ಲಿ ಸ್ಥಳೀಯ ವ್ಯಕ್ತಿಗಳೇ ಜೂಜಾಟ ಆಡುತ್ತಿದ್ದರು. ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ, 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.