ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಂಖ್ಯ ಪ್ರಮಥರ ಗಣಮೇಳಕ್ಕೆ ಸಿದ್ಧತೆ

Last Updated 13 ಫೆಬ್ರುವರಿ 2020, 19:41 IST
ಅಕ್ಷರ ಗಾತ್ರ

ಬೆಂಗಳೂರು: 12ನೇ ಶತಮಾನದಲ್ಲಿ ಬಸವಣ್ಣನವರು ನಡೆಸಿದ್ದ ಗಣಗಳ ಸಮಾವೇಶವನ್ನು ನೆನಪಿಸುವ ಮಾದರಿಯಲ್ಲೇ ಆಯೋಜನೆಗೊಳ್ಳಲಿದೆ ಎಂದು ಹೇಳಲಾಗುತ್ತಿರುವ ಅಸಂಖ್ಯ ಪ್ರಮಥರ ಗಣಮೇಳಕ್ಕೆ ಸಿದ್ಧತೆ ಭರದಿಂದ ಸಾಗಿದೆ.

‘ಇದೇ 16ರಂದು ನಗರದ ತುಮಕೂರು ರಸ್ತೆಯ ನೈಸ್ ರೋಡ್ ಪಕ್ಕದ ನಂದಿ ಗ್ರೌಂಡ್‌ನಲ್ಲಿ ಈ ಮಹಾಮೇಳ ನಡೆಯಲಿದೆ. 12ನೇ ಶತಮಾನದಲ್ಲಿ ನಡೆದಿದ್ದ ಗಣಗಳ ಸಮಾವೇಶ ಇತಿಹಾಸದ ರೋಚಕ ಸಂಗತಿ. ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ 9 ದಶಕಗಳ ನಂತರ ಅದೇ ರೀತಿಯ ಚಾರಿತ್ರಿಕ ಘಟನೆಗೆ ಸಾಕ್ಷಿಯಾಗಬೇಕೆಂಬ ಉದ್ದೇಶದಿಂದ ಈ ಗಣಮೇಳ ಆಯೋಜನೆಗೊಳಿಸಲಾಗುತ್ತಿದೆ’ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

‘ರಾಜ್ಯ ಮತ್ತು ರಾಷ್ಟ್ರ ಮಟ್ಟದ ಎಲ್ಲಾ ಧರ್ಮಗುರು, ಸಂತರು, ಸಾಂಸ್ಕೃತಿಕ ಚಿಂತಕರು, ಸಂಸ್ಕೃತಿ ಚಿಂತಕರನ್ನು ಒಂದೆಡೆ ಸೇರಿಸುವ ಪ್ರಯತ್ನ ಇದಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಮುರುಘಾ ಶರಣರು ‘ಶಿವಯೋಗ ಸಂಭ್ರಮ’ ನೆರವೇರಿಸಲಿದ್ದು, 10 ಗಂಟೆಗೆ ಗಣಮೇಳ ಆರಂಭವಾಗಲಿದ್ದು, ಸಂಜೆ 5ರವರೆಗೆ ನಡೆಯಲಿದೆ’ ಎಂದು ವಿವರಿಸಿದ್ದಾರೆ.

2 ಲಕ್ಷಕ್ಕೂ ಹೆಚ್ಚು ಜನರು ಈ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಆಯೋಜಕರು ನಿರೀಕ್ಷಿಸಿದ್ದಾರೆ. ಅದಕ್ಕೆ ಬೇಕಿರುವ ವ್ಯವಸ್ಥೆಗಳನ್ನು ವಿಶಾಲವಾದ ಮೈದಾನದಲ್ಲಿ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವ ಶರಣರ ಸಮ್ಮೇಳನದಲ್ಲಿ ಎಲ್ಲಾ ಪಕ್ಷದ ನಾಯಕರೂ ಭಾಗವಹಿಸುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT