<p><strong>ಬೆಂಗಳೂರು:</strong> 12ನೇ ಶತಮಾನದಲ್ಲಿ ಬಸವಣ್ಣನವರು ನಡೆಸಿದ್ದ ಗಣಗಳ ಸಮಾವೇಶವನ್ನು ನೆನಪಿಸುವ ಮಾದರಿಯಲ್ಲೇ ಆಯೋಜನೆಗೊಳ್ಳಲಿದೆ ಎಂದು ಹೇಳಲಾಗುತ್ತಿರುವ ಅಸಂಖ್ಯ ಪ್ರಮಥರ ಗಣಮೇಳಕ್ಕೆ ಸಿದ್ಧತೆ ಭರದಿಂದ ಸಾಗಿದೆ.</p>.<p>‘ಇದೇ 16ರಂದು ನಗರದ ತುಮಕೂರು ರಸ್ತೆಯ ನೈಸ್ ರೋಡ್ ಪಕ್ಕದ ನಂದಿ ಗ್ರೌಂಡ್ನಲ್ಲಿ ಈ ಮಹಾಮೇಳ ನಡೆಯಲಿದೆ. 12ನೇ ಶತಮಾನದಲ್ಲಿ ನಡೆದಿದ್ದ ಗಣಗಳ ಸಮಾವೇಶ ಇತಿಹಾಸದ ರೋಚಕ ಸಂಗತಿ. ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ 9 ದಶಕಗಳ ನಂತರ ಅದೇ ರೀತಿಯ ಚಾರಿತ್ರಿಕ ಘಟನೆಗೆ ಸಾಕ್ಷಿಯಾಗಬೇಕೆಂಬ ಉದ್ದೇಶದಿಂದ ಈ ಗಣಮೇಳ ಆಯೋಜನೆಗೊಳಿಸಲಾಗುತ್ತಿದೆ’ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.</p>.<p>‘ರಾಜ್ಯ ಮತ್ತು ರಾಷ್ಟ್ರ ಮಟ್ಟದ ಎಲ್ಲಾ ಧರ್ಮಗುರು, ಸಂತರು, ಸಾಂಸ್ಕೃತಿಕ ಚಿಂತಕರು, ಸಂಸ್ಕೃತಿ ಚಿಂತಕರನ್ನು ಒಂದೆಡೆ ಸೇರಿಸುವ ಪ್ರಯತ್ನ ಇದಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಮುರುಘಾ ಶರಣರು ‘ಶಿವಯೋಗ ಸಂಭ್ರಮ’ ನೆರವೇರಿಸಲಿದ್ದು, 10 ಗಂಟೆಗೆ ಗಣಮೇಳ ಆರಂಭವಾಗಲಿದ್ದು, ಸಂಜೆ 5ರವರೆಗೆ ನಡೆಯಲಿದೆ’ ಎಂದು ವಿವರಿಸಿದ್ದಾರೆ.</p>.<p>2 ಲಕ್ಷಕ್ಕೂ ಹೆಚ್ಚು ಜನರು ಈ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಆಯೋಜಕರು ನಿರೀಕ್ಷಿಸಿದ್ದಾರೆ. ಅದಕ್ಕೆ ಬೇಕಿರುವ ವ್ಯವಸ್ಥೆಗಳನ್ನು ವಿಶಾಲವಾದ ಮೈದಾನದಲ್ಲಿ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವ ಶರಣರ ಸಮ್ಮೇಳನದಲ್ಲಿ ಎಲ್ಲಾ ಪಕ್ಷದ ನಾಯಕರೂ ಭಾಗವಹಿಸುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 12ನೇ ಶತಮಾನದಲ್ಲಿ ಬಸವಣ್ಣನವರು ನಡೆಸಿದ್ದ ಗಣಗಳ ಸಮಾವೇಶವನ್ನು ನೆನಪಿಸುವ ಮಾದರಿಯಲ್ಲೇ ಆಯೋಜನೆಗೊಳ್ಳಲಿದೆ ಎಂದು ಹೇಳಲಾಗುತ್ತಿರುವ ಅಸಂಖ್ಯ ಪ್ರಮಥರ ಗಣಮೇಳಕ್ಕೆ ಸಿದ್ಧತೆ ಭರದಿಂದ ಸಾಗಿದೆ.</p>.<p>‘ಇದೇ 16ರಂದು ನಗರದ ತುಮಕೂರು ರಸ್ತೆಯ ನೈಸ್ ರೋಡ್ ಪಕ್ಕದ ನಂದಿ ಗ್ರೌಂಡ್ನಲ್ಲಿ ಈ ಮಹಾಮೇಳ ನಡೆಯಲಿದೆ. 12ನೇ ಶತಮಾನದಲ್ಲಿ ನಡೆದಿದ್ದ ಗಣಗಳ ಸಮಾವೇಶ ಇತಿಹಾಸದ ರೋಚಕ ಸಂಗತಿ. ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ 9 ದಶಕಗಳ ನಂತರ ಅದೇ ರೀತಿಯ ಚಾರಿತ್ರಿಕ ಘಟನೆಗೆ ಸಾಕ್ಷಿಯಾಗಬೇಕೆಂಬ ಉದ್ದೇಶದಿಂದ ಈ ಗಣಮೇಳ ಆಯೋಜನೆಗೊಳಿಸಲಾಗುತ್ತಿದೆ’ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.</p>.<p>‘ರಾಜ್ಯ ಮತ್ತು ರಾಷ್ಟ್ರ ಮಟ್ಟದ ಎಲ್ಲಾ ಧರ್ಮಗುರು, ಸಂತರು, ಸಾಂಸ್ಕೃತಿಕ ಚಿಂತಕರು, ಸಂಸ್ಕೃತಿ ಚಿಂತಕರನ್ನು ಒಂದೆಡೆ ಸೇರಿಸುವ ಪ್ರಯತ್ನ ಇದಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಮುರುಘಾ ಶರಣರು ‘ಶಿವಯೋಗ ಸಂಭ್ರಮ’ ನೆರವೇರಿಸಲಿದ್ದು, 10 ಗಂಟೆಗೆ ಗಣಮೇಳ ಆರಂಭವಾಗಲಿದ್ದು, ಸಂಜೆ 5ರವರೆಗೆ ನಡೆಯಲಿದೆ’ ಎಂದು ವಿವರಿಸಿದ್ದಾರೆ.</p>.<p>2 ಲಕ್ಷಕ್ಕೂ ಹೆಚ್ಚು ಜನರು ಈ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಆಯೋಜಕರು ನಿರೀಕ್ಷಿಸಿದ್ದಾರೆ. ಅದಕ್ಕೆ ಬೇಕಿರುವ ವ್ಯವಸ್ಥೆಗಳನ್ನು ವಿಶಾಲವಾದ ಮೈದಾನದಲ್ಲಿ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವ ಶರಣರ ಸಮ್ಮೇಳನದಲ್ಲಿ ಎಲ್ಲಾ ಪಕ್ಷದ ನಾಯಕರೂ ಭಾಗವಹಿಸುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>