<p><strong>ದಾಬಸ್ ಪೇಟೆ:</strong> ಸಾಧಿಸುವ ಛಲ ಮತ್ತು ಅದಕ್ಕೆ ಸರಿಯಾದ ಪ್ರತಿಭೆ ಇದ್ದರೆ ಎಲ್ಲ ನ್ಯೂನತೆಯನ್ನು ಮೀರಿ ಬೆಳೆಯಬಹುದು ಎಂಬುದಕ್ಕೆ ಸಾಕ್ಷಿ ಕೆ.ಆರ್. ರೇಣುಕಪ್ಪ. ಕಿವಿ ಕೇಳಿಸದೇ, ಮಾತು ಬಾರದಿರುವ ಇವರ ಹುಟ್ಟು ಕೊರತೆಯನ್ನು ಮೀರಿ ಸುಂದರ ಗಣಪತಿ ಮೂರ್ತಿಗಳನ್ನು ಸೃಷ್ಟಿಸಿದ್ದಾರೆ.</p><p>ನೆಲಮಂಗಲ ತಾಲ್ಲೂಕಿನ, ಕಂಬಾಳು ಗ್ರಾಮದ ನಿವಾಸಿಯಾಗಿರುವ ಕೆ.ಆರ್. ರೇಣುಕಪ್ಪ ಅವರು ತನ್ನ ಹಿರಿಯರಿಂದ ಬಳುವಳಿಯಾಗಿ ಬಂದ ಈ ಮಣ್ಣಿನ ಕಾಯಕವನ್ನು ಮುಂದುವರಿಸಿದ್ದಾರೆ. 20 ವರ್ಷಗಳಿಂದ ಶ್ರದ್ದೆ, ಬದ್ಧತೆಯಿಂದ ಗಣೇಶನ ಮೂರ್ತಿಗಳನ್ನು ಮಾಡುತ್ತಾ ಬಂದಿದ್ದಾರೆ.</p><p>ಕಂಬಾಳು ಕೆರೆಯಿಂದ ಯೋಗ್ಯವಾದ ಮಣ್ಣು ಸಂಗ್ರಹಿಸಿ ತಂದು, ಗುಡ್ಡೆ ಹಾಕಿ ನಿತ್ಯ ಮೂರ್ತಿಗಳ ನಿರ್ಮಾಣಕ್ಕೆ ಎಷ್ಟು ಮಣ್ಣು ಬೇಕೋ ಅಷ್ಟು ನೆನೆಸಿ, ಹದಗೊಳಿಸಿ ಕಲೆಯ ಕಾಯಕ ಮುಂದುವರಿಸಿದ್ದಾರೆ. ಗಣೇಶ ಚತುರ್ಥಿಗೆ ಮೂರು ತಿಂಗಳ ಮುಂಚಿತವಾಗಿ ಈ ಕೆಲಸಕ್ಕೆ ತೊಡಗಿಸಿಕೊಳ್ಳುವ ರೇಣುಕಪ್ಪ ಅವರು, ಅಂಗೈಯಲ್ಲಿ ಹಿಡಿಯಬಹುದಾದ ಚಿಕ್ಕ ಮೂರ್ತಿಯಿಂದ ಹಿಡಿದು, 5–6 ಅಡಿ ಎತ್ತರದ ಮೂರ್ತಿಗಳವರೆಗೆ ವಿಭಿನ್ನವಾದ ಗಣೇಶ ಮತ್ತು ಗೌರಿ ವಿಗ್ರಹಗಳನ್ನು ತಯಾರಿಸುತ್ತಾರೆ.</p><p>ಕೆಲ ಮೂರ್ತಿಗಳಿಗೆ ನೈಸರ್ಗಿಕ ಬಣ್ಣ ಹಚ್ಚಿ, ಅಲಂಕರಿಸಿ ಮಾರಾಟ ಮಾಡುತ್ತಾರೆ. ತುಮಕೂರಿನ ಸಿದ್ದಗಂಗಾ ಮಠ, ಮಾಗಡಿಯ ಬಂಡೆ ಮಠ ಹಾಗೂ ಕಂಬಾಳು ಮಠಗಳಲ್ಲಿ ಪ್ರತಿ ವರ್ಷ ಇವರದ್ದೇ ಕೈಯಲ್ಲಿ ಅರಳಿದ ಗಣೇಶನನ್ನು ಪೂಜಿಸಲಾಗುತ್ತಿದೆ.</p><p>ಇಷ್ಟೇ ಹಣ ಎಂದು ರೇಣುಕಪ್ಪ ಬೆಲೆ ನಿಗದಿ ಮಾಡಿಲ್ಲ. ₹ 100ರಿಂದ ಹಿಡಿದು ಎಷ್ಟು ಕೊಡುತ್ತಾರೋ ಅಷ್ಟನ್ನೇ ಪಡೆದು ಗಣೇಶನನ್ನು ನೀಡುತ್ತಾರೆ. ಮಾರಾಟಕ್ಕೆಂದು ಬೇರೆಡೆಗೆ ಒಯ್ಯುವುದೂ ಇಲ್ಲ. ಮೂರ್ತಿ ಬೇಕಾದವರು ಇವರ ಮನೆ ಬಳಿಯೇ ಬರುತ್ತಾರೆ. ಟೈಲರ್ ಕಾಯಕ: 3 ತಿಂಗಳು ಗಣೇಶ ಮೂರ್ತಿಗಳ ಸಿದ್ಧಪಡಿಸುವ ಕೆಲಸ ರೇಣುಕಪ್ಪ ಅವರು ಉಳಿದ ಸಮಯದಲ್ಲಿ ಟೈಲರ್ ಕಾಯಕದಲ್ಲಿ ನಿರತರಾಗಿರುತ್ತಾರೆ. ನಡುವೆ ಬೇರೆ ವಿಗ್ರಹಗಳು ಬೇಕು ಎಂದು ಬೇಡಿಕೆ ಬಂದರೆ ಅವುಗಳನ್ನು ಸಿದ್ಧಪಡಿಸಿ ಕೊಡುತ್ತಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ಸಾಧಿಸುವ ಛಲ ಮತ್ತು ಅದಕ್ಕೆ ಸರಿಯಾದ ಪ್ರತಿಭೆ ಇದ್ದರೆ ಎಲ್ಲ ನ್ಯೂನತೆಯನ್ನು ಮೀರಿ ಬೆಳೆಯಬಹುದು ಎಂಬುದಕ್ಕೆ ಸಾಕ್ಷಿ ಕೆ.ಆರ್. ರೇಣುಕಪ್ಪ. ಕಿವಿ ಕೇಳಿಸದೇ, ಮಾತು ಬಾರದಿರುವ ಇವರ ಹುಟ್ಟು ಕೊರತೆಯನ್ನು ಮೀರಿ ಸುಂದರ ಗಣಪತಿ ಮೂರ್ತಿಗಳನ್ನು ಸೃಷ್ಟಿಸಿದ್ದಾರೆ.</p><p>ನೆಲಮಂಗಲ ತಾಲ್ಲೂಕಿನ, ಕಂಬಾಳು ಗ್ರಾಮದ ನಿವಾಸಿಯಾಗಿರುವ ಕೆ.ಆರ್. ರೇಣುಕಪ್ಪ ಅವರು ತನ್ನ ಹಿರಿಯರಿಂದ ಬಳುವಳಿಯಾಗಿ ಬಂದ ಈ ಮಣ್ಣಿನ ಕಾಯಕವನ್ನು ಮುಂದುವರಿಸಿದ್ದಾರೆ. 20 ವರ್ಷಗಳಿಂದ ಶ್ರದ್ದೆ, ಬದ್ಧತೆಯಿಂದ ಗಣೇಶನ ಮೂರ್ತಿಗಳನ್ನು ಮಾಡುತ್ತಾ ಬಂದಿದ್ದಾರೆ.</p><p>ಕಂಬಾಳು ಕೆರೆಯಿಂದ ಯೋಗ್ಯವಾದ ಮಣ್ಣು ಸಂಗ್ರಹಿಸಿ ತಂದು, ಗುಡ್ಡೆ ಹಾಕಿ ನಿತ್ಯ ಮೂರ್ತಿಗಳ ನಿರ್ಮಾಣಕ್ಕೆ ಎಷ್ಟು ಮಣ್ಣು ಬೇಕೋ ಅಷ್ಟು ನೆನೆಸಿ, ಹದಗೊಳಿಸಿ ಕಲೆಯ ಕಾಯಕ ಮುಂದುವರಿಸಿದ್ದಾರೆ. ಗಣೇಶ ಚತುರ್ಥಿಗೆ ಮೂರು ತಿಂಗಳ ಮುಂಚಿತವಾಗಿ ಈ ಕೆಲಸಕ್ಕೆ ತೊಡಗಿಸಿಕೊಳ್ಳುವ ರೇಣುಕಪ್ಪ ಅವರು, ಅಂಗೈಯಲ್ಲಿ ಹಿಡಿಯಬಹುದಾದ ಚಿಕ್ಕ ಮೂರ್ತಿಯಿಂದ ಹಿಡಿದು, 5–6 ಅಡಿ ಎತ್ತರದ ಮೂರ್ತಿಗಳವರೆಗೆ ವಿಭಿನ್ನವಾದ ಗಣೇಶ ಮತ್ತು ಗೌರಿ ವಿಗ್ರಹಗಳನ್ನು ತಯಾರಿಸುತ್ತಾರೆ.</p><p>ಕೆಲ ಮೂರ್ತಿಗಳಿಗೆ ನೈಸರ್ಗಿಕ ಬಣ್ಣ ಹಚ್ಚಿ, ಅಲಂಕರಿಸಿ ಮಾರಾಟ ಮಾಡುತ್ತಾರೆ. ತುಮಕೂರಿನ ಸಿದ್ದಗಂಗಾ ಮಠ, ಮಾಗಡಿಯ ಬಂಡೆ ಮಠ ಹಾಗೂ ಕಂಬಾಳು ಮಠಗಳಲ್ಲಿ ಪ್ರತಿ ವರ್ಷ ಇವರದ್ದೇ ಕೈಯಲ್ಲಿ ಅರಳಿದ ಗಣೇಶನನ್ನು ಪೂಜಿಸಲಾಗುತ್ತಿದೆ.</p><p>ಇಷ್ಟೇ ಹಣ ಎಂದು ರೇಣುಕಪ್ಪ ಬೆಲೆ ನಿಗದಿ ಮಾಡಿಲ್ಲ. ₹ 100ರಿಂದ ಹಿಡಿದು ಎಷ್ಟು ಕೊಡುತ್ತಾರೋ ಅಷ್ಟನ್ನೇ ಪಡೆದು ಗಣೇಶನನ್ನು ನೀಡುತ್ತಾರೆ. ಮಾರಾಟಕ್ಕೆಂದು ಬೇರೆಡೆಗೆ ಒಯ್ಯುವುದೂ ಇಲ್ಲ. ಮೂರ್ತಿ ಬೇಕಾದವರು ಇವರ ಮನೆ ಬಳಿಯೇ ಬರುತ್ತಾರೆ. ಟೈಲರ್ ಕಾಯಕ: 3 ತಿಂಗಳು ಗಣೇಶ ಮೂರ್ತಿಗಳ ಸಿದ್ಧಪಡಿಸುವ ಕೆಲಸ ರೇಣುಕಪ್ಪ ಅವರು ಉಳಿದ ಸಮಯದಲ್ಲಿ ಟೈಲರ್ ಕಾಯಕದಲ್ಲಿ ನಿರತರಾಗಿರುತ್ತಾರೆ. ನಡುವೆ ಬೇರೆ ವಿಗ್ರಹಗಳು ಬೇಕು ಎಂದು ಬೇಡಿಕೆ ಬಂದರೆ ಅವುಗಳನ್ನು ಸಿದ್ಧಪಡಿಸಿ ಕೊಡುತ್ತಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>