ಚರ್ಚ್ ಸ್ಟ್ರೀಟ್ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ವಾಹನ ಸಂಚಾರ ನಿರ್ಬಂಧಿಸಲು ಯೋಜನೆ ರೂಪಿಸಲಾ ಗಿತ್ತು. ಅದಕ್ಕೆ ವಿರೋಧ ವ್ಯಕ್ತವಾದ ಬಳಿಕ ಈಗ ವಾಹನ ಸಂಚಾರಕ್ಕೆ ಅವ ಕಾಶ ಕಲ್ಪಿಸಲು ಉದ್ದೇಶಿಸಿದೆ. ಆದರೆ, ರಸ್ತೆಯನ್ನು ಕಿರಿದುಗೊಳಿಸಿ ವಿಶಾಲವಾದ ಪಾದಚಾರಿ ಮಾರ್ಗ ನಿರ್ಮಿಸಲು ಯೋಜಿಸಲಾಗಿದೆ. ಆಂಬುಲೆನ್ಸ್, ಅಗ್ನಿ ಶಾಮಕ ಮತ್ತು ಬಿಎಂಟಿಸಿ ಬಸ್ಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲು ಉದ್ದೇಶಿಸಿದೆ. ಬೀದಿಬದಿ ವ್ಯಾಪಾರಕ್ಕೆ ಶೆಲ್ಟರ್ಗಳನ್ನು ನಿರ್ಮಿಸಿಕೊಡುವ ಪ್ರಸ್ತಾಪವನ್ನೂ ಯೋಜನೆ ಒಳಗೊಂಡಿದೆ.