<p><strong>ಬೆಂಗಳೂರು</strong>: ‘ಗಾಂಧೀಜಿ ಸಿದ್ಧಾಂತ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧೀಜಿ ಪ್ರತಿಮೆ ಮುಂದೆಯೇ ನಿಲ್ಲಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಹಾತ್ಮ ಗಾಂಧಿ ಅವರ ಸ್ವರೂಪ ಭಾರತಕ್ಕೆ ದೀಪವಾಗಿದೆ. ಗಾಂಧಿ ಜ್ಯೋತಿ ಕಾರ್ಯಕ್ರಮವನ್ನು ಸದ್ಯದಲ್ಲೇ ಆರಂಭಿಸಲಾಗುವುದು. 224 ವಿಧಾನಸಭಾ ಕ್ಷೇತ್ರಗಳಲ್ಲಿ ಜ್ಯೋತಿ ಸಂಚರಿಸಲಿದ್ದು, ಕಾಂಗ್ರೆಸ್ ಸಂಸ್ಥಾಪನಾ ದಿನದ ವೇಳೆಗೆ ಅದು ಮತ್ತೆ ನಮ್ಮ ಬಳಿಗೆ ಮರಳಲಿದೆ. ಎರಡು ತಿಂಗಳ ಅವಧಿಯಲ್ಲಿ ಈ ಕಾರ್ಯಕ್ರಮ ಮುಗಿಯಬೇಕು’ ಎಂದರು.</p>.<p>‘ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ದೇಶಕ್ಕೆ ಮಾದರಿ. ಅವರು ಅಧಿಕಾರಕ್ಕೆ ಅಂಟಿಕೊಂಡವರಲ್ಲ’ ಎಂದು ಸ್ಮರಿಸಿದರು.</p>.<p><strong>ಜೆಡಿಎಸ್:</strong> ಜೆಡಿಎಸ್ ಕಚೇರಿಯಲ್ಲಿ ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.</p>.<p>‘ಮಹಾತ್ಮ ಗಾಂಧಿ ಅವರು ಸದಾ ನಮಗೆ ಸ್ಫೂರ್ತಿ, ಅರಿವು, ಸನ್ಮಾರ್ಗ ತೋರುವ ದಿವ್ಯ ಚೇತನ’ ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಹೇಳಿದರು.</p>.<p>ದೇಶದ ಎರಡನೇ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸರಳತೆ, ಸಜ್ಜನಿಕೆ, ದಕ್ಷತೆ ಹಾಗೂ ಪ್ರಾಮಾಣಿಕತೆಯ ಮೇರು ನಾಯಕರಾಗಿದ್ದರು ಎಂದು ಸ್ಮರಿಸಿದರು. ಜೆಡಿಎಸ್ ಪಕ್ಷದ ನಾಯಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಗಾಂಧೀಜಿ ಸಿದ್ಧಾಂತ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧೀಜಿ ಪ್ರತಿಮೆ ಮುಂದೆಯೇ ನಿಲ್ಲಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಹಾತ್ಮ ಗಾಂಧಿ ಅವರ ಸ್ವರೂಪ ಭಾರತಕ್ಕೆ ದೀಪವಾಗಿದೆ. ಗಾಂಧಿ ಜ್ಯೋತಿ ಕಾರ್ಯಕ್ರಮವನ್ನು ಸದ್ಯದಲ್ಲೇ ಆರಂಭಿಸಲಾಗುವುದು. 224 ವಿಧಾನಸಭಾ ಕ್ಷೇತ್ರಗಳಲ್ಲಿ ಜ್ಯೋತಿ ಸಂಚರಿಸಲಿದ್ದು, ಕಾಂಗ್ರೆಸ್ ಸಂಸ್ಥಾಪನಾ ದಿನದ ವೇಳೆಗೆ ಅದು ಮತ್ತೆ ನಮ್ಮ ಬಳಿಗೆ ಮರಳಲಿದೆ. ಎರಡು ತಿಂಗಳ ಅವಧಿಯಲ್ಲಿ ಈ ಕಾರ್ಯಕ್ರಮ ಮುಗಿಯಬೇಕು’ ಎಂದರು.</p>.<p>‘ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ದೇಶಕ್ಕೆ ಮಾದರಿ. ಅವರು ಅಧಿಕಾರಕ್ಕೆ ಅಂಟಿಕೊಂಡವರಲ್ಲ’ ಎಂದು ಸ್ಮರಿಸಿದರು.</p>.<p><strong>ಜೆಡಿಎಸ್:</strong> ಜೆಡಿಎಸ್ ಕಚೇರಿಯಲ್ಲಿ ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.</p>.<p>‘ಮಹಾತ್ಮ ಗಾಂಧಿ ಅವರು ಸದಾ ನಮಗೆ ಸ್ಫೂರ್ತಿ, ಅರಿವು, ಸನ್ಮಾರ್ಗ ತೋರುವ ದಿವ್ಯ ಚೇತನ’ ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಹೇಳಿದರು.</p>.<p>ದೇಶದ ಎರಡನೇ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸರಳತೆ, ಸಜ್ಜನಿಕೆ, ದಕ್ಷತೆ ಹಾಗೂ ಪ್ರಾಮಾಣಿಕತೆಯ ಮೇರು ನಾಯಕರಾಗಿದ್ದರು ಎಂದು ಸ್ಮರಿಸಿದರು. ಜೆಡಿಎಸ್ ಪಕ್ಷದ ನಾಯಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>